ಹುಬ್ಬಳ್ಳಿ | ಪೌರಕಾರ್ಮಿಕರ ಹಿತ ಕಾಯುವಲ್ಲಿ ಕಾಂಗ್ರೆಸ್ ವಿಫಲವಾಗಿದೆ: ವೀರಭದ್ರಪ್ಪ ಹಾಲಹರವಿ

Date:

ಹುಬ್ಬಳ್ಳಿಯಲ್ಲಿ ಪೌರಕಾರ್ಮಿಕರ ವಿವಿಧ ಬೇಡಿಕೆ ಆಗ್ರಹಿಸಿ ಶುರುವಾದ ಅನಿರ್ದಿಷ್ಟ ಅಹೋರಾತ್ರಿ ಹೋರಾಟ ಮುಂದುವರಿದು 27ನೇ ದಿನಕ್ಕೆ ಕಾಲಿಟ್ಟಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾಡುತ್ತಿರುವ ಪ್ರತಿಭಟನೆಗೆ ಜೆಡಿಎಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿ ಪೌರಕಾರ್ಮಿಕರ ಪರವಾಗಿ ಧ್ವನಿಯೆತ್ತಿದ್ದಾರೆ‌.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಗುರುರಾಜ ಹುಣಸಿಮರದ ಮಾತನಾಡಿ, ಅಹಿಂದರ ಪರವಾದ ಸರ್ಕಾರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯನವರ ಸರ್ಕಾರಕ್ಕೆ ಪೌರಕಾರ್ಮಿಕರ ಕೂಗು ಏಕೆ ಕೇಳಿಸುತ್ತಿಲ್ಲ? ಇವರದ್ದು ಬರೀಯ ಮಾತಿನ ಬಡವರಪರ ಸರ್ಕಾರವೇ? ಎಂದು ಪ್ರಶ್ನಿಸುತ್ತ, ಈ ಕೂಡಲೇ ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದರು.

ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಮಾತನಾಡಿ, ಬಿಸಿಲು ಮತ್ತು ಚಳಿಯನ್ನು ಲೆಕ್ಕಿಸದೆ ತಮ್ಮ ಹಕ್ಕಿಗಾಗಿ ಅನುರ್ಧಿಷ್ಟಾವಧಿ ದರಣಿ ಕುಳಿತಿರುವ ಪೌರಕಾರ್ಮಿಕರ ಮತಗಳಿಂದಲೇ ಗೆದ್ದು ಬಂದು ಅವರ ಹಿತವನ್ನು ಕಾಯುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲರಾಗಿದೆ. ಬದುಕಿದ್ದಾಗ ತಿರುಗಿಯೂ ನೋಡದೆ ಸತ್ತನಂತರ ಪ್ರಚಾರಕ್ಕಾಗಿ ಪರಿಹಾರ ಧನ ನೀಡುವುದು ಎಷ್ಟು ಸರಿ? ಜಿಲ್ಲಾ ಉಸ್ತುವಾರಿ ಸಚಿವರು ಒಂದು ದಿನವಾದರೂ ಬಂದು ಪೌರಕಾರ್ಮಿಕರ ನೋವನ್ನು ಕೇಳಿದ್ದಾರೆಯೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ವಿಜಯ ಗುಂಟ್ರಾಳ ಮಾತನಾಡಿ, ನುಡಿದಂತೆ ನಡೆಯುವ ಸರ್ಕಾರ ಎಂದು ಹೇಳುತ್ತಾ 8 ವರ್ಷದ ತಮ್ಮದೇ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಕಳೆದ 27ದಿನಗಳಿಂದ ಹೋರಾಟ ನಡೆಸಿದರೂ ಪೌರಕಾರ್ಮಿಕರಿಗೆ ಸ್ಪಂದಿಸದಿರುವುದು ಖಂಡನೀಯ. ಕೂಡಲೇ ಬೇಡಿಕೆಗಳನ್ನು ಈಡೇರಿಸಬೇಕು ತಪ್ಪಿದಲ್ಲಿ ಉಗ್ರಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಉಪವಾಸ ಸತ್ಯಾಗ್ರಹ ಹೋರಾಟದಲ್ಲಿ ಭಾಗವಹಿಸಿದ ಪೌರಕಾರ್ಮಿಕ ಮಹಿಳೆಯರು ಅನಾರೋಗ್ಯಕ್ಕೆ ಈಡಾಗಿದ್ದು ಸದ್ಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಈ ವರದಿ ಓದಿದ್ದೀರಾ? ಧಾರವಾಡ | ಟಿಬಿ (ಕ್ಷಯ) ಮುಕ್ತ ಗ್ರಾಮ ಮಾಡಲು ಸಂಶಿ ಗ್ರಾಮದಲ್ಲಿ ಮಾನವ ಸರಪಳಿ ಕಾರ್ಯಕ್ರಮ

ಪ್ರತಿಭಟನೆಯಲ್ಲಿ ಧಾರವಾಡ ಜಿಲ್ಲಾಧ್ಯಕ್ಷ ಗುರುರಾಜ ಹುನಸಿಮರದ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಗ್ರಾಮೀಣಾಧ್ಯಕ್ಷ ಬಿ. ಬಿ.ಗಂಗಾಧರಮಠ, ಸಿದ್ದು ಮಹಾಂತ ಒಡೆಯರ್, ಈಶ್ವರ ತೆಗ್ಗಿ, ಜೈಭೀಮ್ ಹಿತರಕ್ಷಣಾ ಸಮಿತಿ, ಕರ್ನಾಟಕ ಟಿಪ್ಪು ಸುಲ್ತಾನ್ ಅಲ್ಪಸಂಖ್ಯಾತರ ಸಂಘಟನೆ, ಜೈಭೀಮ್ ಹಿತರಕ್ಷಣಾ ಸಮಿತಿ ಸಂಘದ ಅಧ್ಯಕ್ಷ ಅಣ್ಣಪ್ಪ ಸಿದ್ದಾಪುರ, ಜೈಭೀಮ್ ಯುವ ಶಕ್ತಿ ಸೇನೆ ಅಧ್ಯಕ್ಷ ಹರೀಶ ಗುಂಟ್ರಾಳ, ಟಿಪ್ಪು ಸುಲ್ತಾನ್ ಅಲ್ಪಸಂಖ್ಯಾತರ ಸಂಘಟನೆ ಅಧ್ಯಕ್ಷ ಮೌಲಾಲಿ ಮುಲ್ಲಾ, ಸುನೀಲ್ ಕುರಡೇಕರ್, ಸತೀಶ ಮಿಶ್ರಿಕೋಟಿ, ಹಜರ್ ಮುಲ್ಲಾ, ಶಾನೂ ಖಾನ್, ಶಂಕರ ಕಟ್ಟಿಮನಿ ಬಸಪ್ಪ ಮಾದರ, ಗಂಗಾಧರ ಪೆರೂರ್, ಹನುಮಂತ ಯರಗುಂಟಿ, ಕನ್ನಡಪರ ಸಂಘಟನೆಗಳು ಹಾಗೂ ಆಟೋ ಚಾಲಕರ ಸಂಘದ ಶೇಖರಯ್ಯ ಮಠಪತಿ, ಕರ್ನಾಟಕ ಸಂಗ್ರಾಮ ಸೇನೆಯ ಸಂಜೀವ ಡುಮ್ಮಕನಾಳ, ಕರ್ನಾಟಕ ರಕ್ಷಣಾ ವೇದಿಕೆಯ ಮಂಜುನಾಥ್ ಲೂತಿಮಠ, ಪ್ರವೀಣ್ ಗಾಯಕವಾಡ, ಚಿದಾನಂದ್ ಸವದತ್ತಿ, ಪುಂಡಲೀಕ ಬಡಿಗೇರ ಬೆಂಬಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...