ಹುಬ್ಬಳ್ಳಿ | ತಿಂಗಳಾದರೂ ಮುಗಿಯದ ಚರಂಡಿ‌ ಕಾಮಗಾರಿ: ಕಣ್ಮುಚ್ಚಿ ಕುಳಿತ ಅಧಿಕಾರಿ ವರ್ಗ, ಜನಪ್ರತಿನಿಧಿಗಳು

Date:

ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲ್ಯಾಟ್‌ಫಾರಂ ಹೊಂದಿರುವ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಸಿದ್ದಾರೂಢಸ್ವಾಮಿ ರೈಲು ನಿಲ್ದಾಣಕ್ಕೆ ದಿನಂಪ್ರತಿ ಸಾವಿರಾರು ಪ್ರಯಾಣಿಕರು ಬರುತ್ತಾ ಹೋಗುತ್ತಿರುತ್ತಾರೆ. ಇತ್ತು ರೈಲ್ವೆ ನಿಲ್ದಾಣಕ್ಕೆ ಪ್ರವೇಶವಾದಾಗ್ಯೂ, ಅತ್ತ ರೈಲ್ವೆ ನಿಲ್ದಾಣದಿಂದ ಹೊರಬಂದಾಗ್ಯೂ, ‘ಏನಪ್ಪ ಇದು ಗಬ್ಬು ವಾಸನೆ ಎನ್ನುತ್ತಲೆ’ ರಸ್ತೆ ದಾಟುವ ರೂಢಿಯನ್ನು ಕಳೆದ ಒಂದು ತಿಂಗಳಿಂದ ಹೋಗಿ-ಬರುವ ಪ್ರಯಾಣಿಕರು ಬೆಳೆಸಿಕೊಂಡಿದ್ದಾರೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಪ್ರವೇಶವಾಗುವ ಮಹಾದ್ವಾರದಲ್ಲಿ ಅಂದರೆ ಮುಂಭಾಗದಲ್ಲಿ ಚರಂಡಿ ನೀರು ಸಾಗಿಸುವ ವ್ಯವಸ್ಥೆಗೆ ಒಳಚರಂಡಿ ಕಟ್ಟಲಾಗುತ್ತಿದೆ. ಕಾಮಗಾರಿ ಶುರುವಾಗಿ ಒಂದು ತಿಂಗಳು ಸಮೀಪವಾದರೂ ಇಂದಿಗೂ ಕಾಮಗಾರಿ ಪೂರ್ಣಗೊಳ್ಳದ ಪರಿಣಾಮ ನಿಲ್ದಾಣದ ಹೊರಭಾಗದಲ್ಲಿ ವಿವಿಧ ಬಡಾವಣೆಗಳಿಂದ ಹರಿದುಬರುವ ಚರಂಡಿನೀರು ಪ್ರಯಾಣಿಕರು ನಡೆದಾಡುವ ರಸ್ತೆಗೆ ಅಡ್ಡವಾಗಿ ದೊಡ್ಡ ಗುಂಡಿಯಾಗಿ ತುಂಬಿಕೊಂಡಿದೆ.

ಆಮೆಗತಿಯಲ್ಲಿ ಸಾಗುತ್ತಿರುವ ಕಾಮಗಾರಿ, ಚರಂಡಿ ನೀರಿನಿಂದ ತುಂಬಿ ತುಳುಕಾಡಿ ಗಬ್ಬುನಾತ ಹೊಡೆಯುತ್ತಿರುವ ನಿಲ್ದಾಣದ ಮುಂಭಾಗ, ರಸ್ತೆ ದಾಟಲೂ ಆಗದೆ, ದಾರಿಗುಂಟ ಹರಿಯುವ ಕಲುಷಿತ ನೀರಿನಿಂದ ಯಾವತ ಮುಕ್ತಿ ಸಿಗುತ್ತದೆ ಎಂದು ಸ್ಥಳೀಯರು ಕಾದು ನೋಡುತ್ತಿದ್ದಾರೆ. ಸಮಸ್ಯೆ ಅನುಭವಿಸುತ್ತಿರುವ ಸಾರ್ವಜನಿಕರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಧಾರವಾಡ3

“ದಿನವೂ ಈ ಹೊಲಸು ನೀರಿನಲ್ಲೇ ನಾವು ತಿರುಗಾಡಬೇಕು. ವಿಪರೀತ ಗಬ್ಬುನಾತ ಮತ್ತು ಸಂಜೆಯಾದರೆ ಸೊಳ್ಳೆಗಳ ಕಾಟ ಜಾಸ್ತಿಯಾಗುತ್ತದೆ. ಮುಂದೆ ಒಳಚರಂಡಿ ಕಾಮಗಾರಿಯ ಕಾರಣ ದೊಡ್ಡ ಗಟಾರಿನಿಂದ ಹರಿದುಬರುವ ಕೊಳಚೆನೀರನ್ನು ನಿಲ್ದಾಣದ ಹೆಬ್ಬಾಗಿಲ ಮುಂಭಾಗದಲ್ಲೇ ಗುಂಡಿ ತೋಡಿ ಬಿಟ್ಟಿದ್ದಾರೆ. ಆ ಎಲ್ಲ ನೀರು ಅದೇ ಗುಂಡಿಯಲ್ಲಿ ನಿಲ್ಲತ್ತದೆ ಮತ್ತು ರಸ್ತೆ ತುಂಬೆಲ್ಲ ಹರಿಯುತ್ತದೆ. ಬಸ್ಸು, ಕರು, ವಾಹನಗಳು, ಮನುಷ್ಯರೂ ಅದರಲ್ಲೆ ಓಡಾಡಬೇಕು. ಪಾಲಿಕೆ ಅಧಿಕಾರಿ ಮತ್ತು ರಾಜಕೀಯ ವ್ಯಕ್ತಿಗಳು ಕಣ್ಮುಚ್ಚಿಕೊಂಡು ಕುಳಿತಿದ್ದಾರೆ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲ್ಯಾಮೆಂಗ್ಟನ್ ಶಾಲೆ ಮಾರ್ಗದಲ್ಲಿ ನಡುರಸ್ತೆಯಲ್ಲಿರುವ ಸಂವಿಧಾನ ಸಮರ್ಪಣಾ ಸ್ಮಾರಕ ಸ್ಥಂಭದ ರಕ್ಷಣೆಗೆಂದು ಸುತ್ತಲು ಹಾಕಿಸಿದ್ದ ಕಬ್ಬಿಣದ ರಕ್ಷಣಾ ಕವಚದ ಒಂದು ಭಾಗವು ಕಿತ್ತು ಬಂದಿದ್ದು, ಸಂವಿಧಾನ ಸ್ಥಂಭಕ್ಕೆ ರಕ್ಷಣೆಯೇ ಇಲ್ಲದಂತಾಗಿದೆ. ಇತಿಹಾಸದ ಗುರುತುಗಳನ್ನು ಕಾಪಾಡಿಕೊಂಡರೆ ಮಾತ್ರ ಮುಂದಿನ ಪೀಳಿಗೆಗೆ ಇತಿಹಾಸದ ಪರಿಚಯ ಮಾಡಿಕೊಡಬಹುದು. ಮತ್ತು ನಿರ್ಮಾಣವಾಗುತ್ತಿರುವ ಹಳೆ ಬಸ್ ನಿಲ್ದಾಣದ ಮುಂದೆ ಪ್ರಯಾಣಿಕರಿಗೆ ನಿಲ್ಲಲೂ ಜಾಗವಿಲ್ಲದೆ, ಮಳೆ ನೀರು ನಿಂತು ಅಸ್ತವ್ಯಸ್ತವಾಗಿದೆ. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಗಮಹರಿಸಬೇಕಿದೆ.

ಧಾರವಾಡ4
ಸಂವಿಧಾನ ಸಮರ್ಪಣಾ ಸ್ಮಾರಕ ಸ್ಥಂಭ

ಪುನಃ ಐದನೆ ಬಾರಿಗೆ ಸಂಸದರಾಗಿ ಆಯ್ಕೆಯಾಗಿ, ಕೇಂದ್ರ ಸಚಿವರೂ ಆಗಿರುವ ಪ್ರಲ್ಹಾದ್ ಜೋಶಿಯವರು ಹುಬ್ಬಳ್ಳಿ ನಗರದವರೇ ಆದರೂ ಒಂದು ದಿನವೂ ಸಾರ್ವಜನಿಕ ಸಮಸ್ಯೆ ಆಲಿಸುವುದು ಕಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಸಮಸ್ಯೆಗಳಿಂದ ಬಳಲುತ್ತಿರುವ ಪ್ರದೇಶಗಳಿಗೆ ಒಮ್ಮೆ ಕೂಡಾ ಭೇಟಿ ನೀಡಿಲ್ಲ ಎಂದು ಸ್ಥಳೀಯರೊಬ್ಬರು ಅಸಮಾಧನ ವ್ಯಕ್ತಪಡಿಸಿದರು.

ಜನಪ್ರತಿನಿಧಿಗಳು ತಮ್ಮ ಅನುಕೂಲಕ್ಕಾಗಿ ಮಾತ್ರ ಬಡಬಡಿಸುತ್ತಾರೆಯೇ ಹೊರತು ಬಡವರ ಸಮಸ್ಯೆ, ಕಷ್ಟ ಅವರಿಗೆ ಬೇಕಿಲ್ಲ ಎಂದು ಜನಪ್ರತಿನಿಧಿಗಳು ಮತ್ತು ಪಾಲಿಕೆ ಸದಸ್ಯರ ವಿರುದ್ದ ಗುಡುಗಿದರು.

ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲ್ಯಾಟ್‌ಫಾರಂ ಹೊಂದಿದ ಹುಬ್ಬಳ್ಳಿ ನಮ್ಮ‌ ಹೆಮ್ಮೆ ಎಂದು ಹೇಳಿಕೊಳ್ಳುವ ಸ್ಥಳೀಯರಿಗೆ ಹುಬ್ಬಳ್ಳಿ ನಗರ ಎಷ್ಟೊಂದು ಗಲೀಜು ಮತ್ತು ಧೂಳಿನಿಂದ ಕೂಡಿದ್ದು, ಎಲ್ಲೆಂದರಲ್ಲಿ ತಗ್ಗುಗಳನ್ನೇ ಕಾಣಬೇಕಿದೆ ಮತ್ತು ಇದೆಲ್ಲಿಯ ಸ್ಮಾರ್ಟ್ ಸಿಟಿ ಎಂದು ಜನರು ವ್ಯಂಗ್ಯವಾಡುತ್ತಿದ್ದಾರೆ. ಹುಬ್ಬಳ್ಳಿ ನಗರಕ್ಕೆ ಬರುವ ಪ್ರಯಾಣಿಕರು, ಪ್ರವಾಸಿಗರು ಕೂಡ ಸಂಕಷ್ಟ ಅನುಭವಿಸುತ್ತಿದ್ದಾರೆ.

ಧಾರವಾಡ1 2

ವಾಣಿಜ್ಯ ನಗರಿ ಹುಬ್ಬಳ್ಳಿಯು ಬಹುತೇಕ ಸಮಸ್ಯೆಗಳ ಗೂಡಾಗಿದ್ದು, ಈ ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಸಾರ್ವಜನಿಕ ಸಮಸ್ಯೆಗಳ ಬಗೆಹರಿಸಲು ಮುಂದಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

IMG 20240805 WA0207
ಶರಣಪ್ಪ ಗೊಲ್ಲರ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...