ಹುಬ್ಬಳ್ಳಿ | ಗಡಿಪಾರು ಗಿರಾಕಿ ಅಮಿತ್ ಶಾ, ಜೈಲಿನಲ್ಲಿ ಇರಬೇಕಿತ್ತು: ಗುರುನಾಥ್ ಉಳ್ಳಿಕಾಶಿ

Date:

ಸಂಸತ್ತಿನಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಅಂಬೇಡ್ಕರ್ ವೃತ್ತದ ಬಳಿ ವಿವಿಧ ಸಂಘಟನೆಗಳ ವತಿಯಿಂದ ಸಾಂಕೇತಿಕ ಪ್ರತಿಭಟನೆ ನಡೆಸಿ, ಅಮಿತ್ ಶಾ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಪ್ರತಿಭಟನಾಕಾರರು ಅಮಿತ್ ಶಾ ವಿರುದ್ಧ ಘೋಷಣೆ ಕೂಗುತ್ತ ಈ ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ರಾಷ್ಟ್ರಪತಿಗಳಿಗೆ ಒತ್ತಾಯಿಸಿದರು.

ಗುರುನಾಥ್ ಉಳ್ಳಿಕಾಶಿ ಅಂಬೇಡ್ಕರ್ ಅವರನ್ನು ಮಹಾ ಮಾನವತಾವಾದಿ ಎಂದು ಕರೆಯುತ್ತೇವೆ. ಹೀಗಾಗಿ ಅವರು ಭಾರತಕ್ಕೆ ಮಾತ್ರ ಸೀಮಿತವಲ್ಲ. ಇಡೀ ವಿಶ್ವಕ್ಕೆ ಸೇರಿದವರು. ಅಂತಹ ಮಹಾನ್ ಬಾಬಾಸಾಹೇಬರ ಕುರಿತು ಅಮಿತ್ ಷಾ ಅವರು ತಮ್ಮ ಮನಸ್ಸಿನ ಒಳಗಿನ ಮನುವಾದವನ್ನು ಹೊರಹಾಕಿದ್ದಾರೆ. ಅಂಬೇಡ್ಕರ್ ಹೆಸರು ಹೇಳುವವರು ನರಕದಲ್ಲಿದ್ದಾರೆ ಮತ್ತು ಅಂಬೇಡ್ಕರ್ ಬಿಟ್ಟು ಬಿಜೆಪಿ ಹಿಂದೆ ಬರಲು ಜನರಮ್ನು ಆಹ್ವಾನಿಸುವ ಒಳಮರ್ಮದಿಂದ ಹೇಳಿಕೆ ಕೊಟ್ಟಿದ್ದಾರೆ. ಇವತ್ತಿಗೂ ಸಮಾಜದಲ್ಲಿ ಮನುವಾದ ಆಚರಣೆಯಲ್ಲಿದೆ. ಮೋದಿ ಮತ್ತು ಅಮಿತ್ ಷಾ ಇವತ್ತು ಸಂವಿಧಾನ ಮತ್ತು ಅಂಬೇಡ್ಕರ್ ಇರದೇ ಹೋಗಿದ್ದರೆ; ಗಡಿಪಾರು ಗಿರಾಕಿ ಜೈಲಿನಲ್ಲಿ ಹಾಗೂ ಪ್ರಧಾನಿ ಚಹಾ ಮಾರುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಮಿತ್ ಷಾ ದೇಶದ ಗೃಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮಿತ್ ಶಾ ಅವರಿಗೆ ವಾಕ್ ಸ್ವಾತಂತ್ರ್ಯ ಕೊಟ್ಟಿದ್ದೇ ಅಂಬೇಡ್ಕರ್‌ ಮತ್ತು ಅದಕ್ಕೂ ಪೂರ್ವ ನಾವೆಲ್ಲ ನರಕದಲ್ಲಿದ್ದೆವು. ಅಂಬೇಡ್ಕರ್ ಬಂದಮೇಲೆನೇ ಸಾವಿರಾರು ವರ್ಷಗಳಿಂದ ಅಸ್ಪೃಶ್ಯತೆಗೆ ಒಳಗಾಗಿದ್ದ ಶೋಷಿತರು ಸ್ವರ್ಗಕ್ಕೇ ಏರಿದರು. ಬಹುಶಃ ಅಮಿತ್ ಷಾ ಅವರಿಗೆ ಇತಿಹಾಸದ ಬಗ್ಗೆ ಗೊತ್ತಿಲ್ಲ ಎಂದು ಕಾಣಿಸುತ್ತದೆ. ಈ ಕೂಡಲೇ ಅವರನ್ನು ಮನೆಗೆ ಕಳುಹಿಸುವ ಕೆಲಸವಾಗಬೇಕು ಎಂದು ಸಮತಾ ಸೈನಿಕ ದಳದ ಶಂಕರ್ ಅಜಮನೆ ಹೇಳಿದರು.

IMG 20241219 222224

ಮಹಿಳಾ ಸಂಘಟನೆಯ ಇಂಧುಮತಿ ಶೇರಗಾವಿ ಮಾತನಾಡಿ, ದಲಿತರ ಮೇಲಿನ ದೌರ್ಜನ್ಯಗಳು ಇಂದಿಗೂ ಹಿಂದೂ ಧರ್ಮದ ಹೆಸರಿನಲ್ಲಿ ನಡೆಯುತ್ತಿವೆ. ನಾವೆಂದೂ ಹಿಂದೂವಲ್ಲ ಮತ್ತು ಅಂಬೇಡ್ಕರ್ ಅವರು ವೈದಿಕರಿಂದ ತುಳಿತಕ್ಕೊಳಗಾದ ದಲಿತರನ್ನು ಸ್ವರ್ಗಕ್ಕೇರಿಸಿದರು.‌ ಅಂಬೇಡ್ಕರ್ ಅವರೇ ನಮಗೆ ನಿಜವಾದ ದೇವರಾಗಿದ್ದಾರೆ ಎಂದರು.

ದಸಂಸ ರಾಷ್ಟ್ರೀಯ ಅಧ್ಯಕ್ಷ ಸದಾನಂದ ತೇರದಾಳ ಮಾತ‌ನಾಡಿ, ಅಮಿತ್ ಶಾ ಪಾರ್ಲಿಮೆಂಟ್ ನಲ್ಲಿ ಅಂಬೇಡ್ಕರ, ಅಂಬೇಡ್ಕರ, ಅಂಬೇಡ್ಕರ ಅನ್ನುವ ಫ್ಯಾಶನ್ ಆಗಿದೆ. ಇಷ್ಟು ಸಾರಿ ದೇವರನ್ನು ನೆನಪಿಸಿದ್ದರೆ 7 ಸಾರಿ ಸ್ವರ್ಗ ಸಿಗುತ್ತಿತ್ತು ಸಾರ್ವಜನಿಕವಾಗಿ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ. ಭೂಮಿಯ ಮೇಲೆ ಬದುಕಿರುವ ಯಾವ ಒಬ್ಬ ವ್ಯಕ್ತಿಯಾದರೂ ಸ್ವರ್ಗವನ್ನು ನೋಡಿದ್ದಾನೆಯೇ? ಮನುವಾದಿ ಬ್ರಾಹ್ಮಣರು ಮತ್ತು ಅಂಧ ಭಕ್ತರು ಬಳಸುವ ಪದಗಳು ಭಾರತ ದೇಶದ ಮುಗ್ಧ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದೆ. ಈ ಕೂಡಲೇ ಅಮಿತ್ ಶಾ ಅವರನ್ನು ಗೃಹ ಸಚಿವ ಸ್ಥಾನದಿಂದ ಹಾಗೂ ಸಂಸದ ಸದಸ್ಯತ್ವದಿಂದ ವಜಾ ಮಾಡಬೇಕು ಎಂದು ಸನ್ಮಾನ್ಯ ರಾಷ್ಟ್ರಪತಿಗಳಲ್ಲಿ ವಿನಂತಿಸಿಕೊಳ್ಳುತ್ತೇವೆ ಎಂದರು.

ಈ ವರದಿ ಓದಿದ್ದೀರಾ? ಬೀದರ್‌ | ₹75 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭೂ ಮಾಪಕ

ಪ್ರತಿಭಟನೆಯಲ್ಲಿ ಸುದೀರ ಕ್ಷತ್ರಿಯ, ಪ್ರಕಾಶ ಉಂಜಾಳ, ರಾಜು ನಾಯ್ಕರ, ಮಾರುತಿ ಹುಟಗಿ, ಉಮೇಶ ಚಲವಾದಿ, ಸಮಿದ ಅಹ್ಮದ ಮುಲ್ಲಾ, ಅಬ್ದುಲ ಹಮೀದ ಬೆಂಗಾಲಿ, ದ್ರಾಕ್ಷಾಯಣಿ ಬಿದರಗಡ್ಡಿ, ಜ್ಯೋತಿ ದೊಡ್ಡಮನಿ, ಮೀನಾಕ್ಷಿ ಬನ್ನಿಗಿಡದ, ಈರಮ್ಮ, ಸತ್ಯವೇಣಿ, ಪ್ರಕಾಶ ಕಂಜರಬಾಟ, ಮಂಜುನಾಥ ಕಲಾಲ, ಚಿದಾನಂದ ಮುಂಡಗೋಡ, ಗೀತಾ ಜೋಡಂಗಿ, ರೋಜಿ ನವಲಗುಂದ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...