ಹುಬ್ಬಳ್ಳಿ | ಅರೆಬೆತ್ತಲೆ ಮೆರವಣಿಗೆ: 4ನೇ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಧರಣಿ ಸತ್ಯಾಗ್ರಹ

Date:

134 ಪೌರಕಾರ್ಮಿಕರ ನೇರ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸುವಂತೆ ಹಾಗೂ 799 ಗುತ್ತಿಗೆ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಸುವಂತೆ ಮತ್ತು ವಿವಿಧ ಹಕ್ಕೋತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಎದುರು ಕೈಗೊಂಡ ಅನಿರ್ನಿಧಿಷ್ಟಾವಧಿ ಧರಣಿ ಸತ್ಯಾಗ್ರಹ 4ನೇ ದಿನಕ್ಕೆ ಕಾಲಿಟ್ಟಿದ್ದು, ಬೃಹತ್ ಆರಬೆತ್ತಲೆ ಮೆರವಣಿಗೆ ಮೂಲಕ ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ರಾಜ್ಯ ಸರ್ಕಾರ ಹೋರಡಿಸಿರುವ 4 ನೇಮಕಾತಿ ಅಧಿಸೂಚನೆ ಅನ್ವಯ ಪಾಲಿಕೆಯ 870 ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಬೇಕು. ತಕ್ಷಣ 134 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಣೆ ಮಾಡಬೇಕು. ಪಾಲಿಕೆ ಸಾಮಾನ್ಯ ಸಭೆಯ ಠರಾವು ಅನ್ವಯ ಪೌರಕಾರ್ಮಿಕರ ಸಂಘಕ್ಕೆ ಕೊಠಡಿ ನೀಡಬೇಕು. ಅಲ್ಲದೇ 799 ಗುತ್ತಿಗೆ ಪೌರಕಾರ್ಮಿಕರಿಗೆ ನೇರ ವೇತನ ಪಾವತಿ ಮಾಡಬೇಕು. ಕನಿಷ್ಠ ವೇತನ ವ್ಯತ್ಯಾಸ ಬಾಕಿ ರೂ 9ಕೋಟಿ ಪಾವತಿಸಬೇಕು. 868 ಮಹಿಳಾ ಪೌರಕಾರ್ಮಿಕರಿಗೆ ಮೆಡಿಕಲ್ ಬೋನಸ್ ಮೊತ್ತ ರೂ 21.70 ಲಕ್ಷ ಪಾವತಿಸಬೇಕು. ಪಿಎಫ್ ಬಾಕಿ ಮೊತ್ತ ರೂ 3ಕೋಟಿ ಪಾವತಿಸಬೇಕು. ತುಟ್ಟಿ ಬತ್ತೆ ಬಾಕಿ ರೂ 2 ಕೋಟಿ ಪಾವತಿಸಬೇಕು. ಅಲ್ಲದೇ ಸರ್ಕಾರದ ಆದೇಶದಂತೆ ಒಂದು ದಿನ ಪೂರ್ತಿ ರಜೆ ನೀಡಬೇಕು ಎಂದು ಆಗ್ರಹಿಸಿದರು.

ನಾಳೆ ಮುಖ್ಯಮಂತ್ರಿಗಳು ಹುಬ್ಬಳ್ಳಿಗೆ ಬರುತಿದ್ದು ಅವರೇ 2017 ರಲ್ಲಿ ಹೊರಡಿಸಿದ ಆದೇಶ ಪಾಲಿಕೆಯಲ್ಲಿ ಜಾರಿ ಮಾಡದೆ ಗುತ್ತಿಗೆ ಮುಂದುವರಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡಲೇ ಕ್ರಮ ಜರುಗಿಸಬೇಕು. ತಪ್ಪಿದಲ್ಲಿ ಡಿ. 18ನೇ ತಾರೀಖೆಗೆ ಸುವರ್ಣಸೌದಕ್ಕೆ ಮುತ್ತಿಗೆ ಹಾಕುತೇವೆ ಎಂದು ಈ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಭ್ರಷ್ಟಾಚಾರದಲ್ಲಿ ಮುಳುಗಿರುವ ಜಾತಿವಾದಿ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರನ್ನು ವರ್ಗಾವಣೆ ಮಾಡಿ, ಐಎಎಸ್ ಅಧಿಕಾರಿಯನ್ನು ನೇಮಿಸಬೇಕೆಂದು ಒತ್ತಾಯಿಸಿದರು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸಲು ತಪ್ಪಿದಲ್ಲಿ ಮುಂದೆ ಆಗಬಹುದಾದ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು.

ಈ ವರದಿ ಓದಿದ್ದೀರಾ? ಧಾರವಾಡ | ಅಡೆತಡೆಗಳನ್ನು ಎದುರಿಸಿದಾಗಲೇ ಜಯಶಾಲಿ ಆಗಲು ಸಾಧ್ಯ: ಎನ್.ಶಶಿಕುಮಾರ್

ಪ್ರತಿಭಟನೆಯಲ್ಲಿ ಸಂಘದ ಧಾರವಾಡ ಜಿಲ್ಲಾಧ್ಯಕ್ಷ ವಿಜಯ ಗುಂಟ್ರಾಳ, ರಾಜು ನಾಗರಾಳ, ಮಹಾದೇವಿ ಮಾದರ, ಶಾಂತವ್ವ ದೊಡ್ಡಮನಿ, ಸುಮಿತ್ರಾ ಹೊಸಳ್ಳಿ, ಗೋಪಿ ಬಿಂದಗಿ, ಆನಂದ ಗೊಲ್ಲರ, ಕಸ್ತೂರಿ ಕೊಣ್ಣೂರ್, ರಾಕೇಶ್ ಚುರಮುರಿ, ಪರಶುರಾಮ್ ಶಿಕ್ಕಲಗಾರ, ಯಲಮ್ಮ ಗೊಲ್ಲರ, ಸುನೀಲ್ ದೊಡ್ಡಮನಿ, ಲಕ್ಷ್ಮೀ ಗೊಲ್ಲರ ಇನ್ನುಳಿದ ಪೌರಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...