ಹುಬ್ಬಳ್ಳಿ | ಮೋದಿ ಸರ್ಕಾರಕ್ಕೆ ಬೆಳಗಾವಿ ಸಮಾವೇಶದ ಬಗ್ಗೆ ಭಯ ಶುರುವಾಗಿದೆ: ಸುರ್ಜೇವಾಲ

Date:

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಜ.‌ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಜೈ ಬಾಪು, ಜೈ ಬೀಮ್, ಜೈ ಸಂವಿಧಾನ ಎಂಬ ಘೋಷವಾಕ್ಯದ ಸಮಾವೇಶದ ಕುರಿತು ಪೂರ್ವಿಭಾವಿ ಸಭೆ ಮತ್ತು ಪತ್ರಿಕಾಗೋಷ್ಠಿಯನ್ನು ಹುಬ್ಬಳ್ಳಿ ಕ್ಯೂಬಿಕ್ಸ ಹೊಟೇಲ್’ನಲ್ಲಿ ಹಮ್ಮಿಕೊಂಡಿದ್ದರು.

ಪೂರ್ವಭಾವಿ ಸಭೆಯಲ್ಲಿ ಮತ್ತು ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ‌ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣಧೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, ಅಂದು ನಡೆದಿದ್ದು ಕೇವಲ ಗಾಂಧೀಜಿಯ ಶರೀರದ ಹತ್ಯೆಯಲ್ಲ, ಅದು ಅವರ ವಿಚಾರದ ಹತ್ಯೆಯಾಗಿತ್ತು. ದಲಿತರು, ಮಹಿಳೆಯರು, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ವಿರುದ್ಧ ನಾವು ನಿಂತರೆ; ಬಿಜೆಪಿಯವರು ದೌರ್ಜನ್ಯಪರ ನಿಲ್ಲುತ್ತಾರೆ. ಮೋದಿ ಮತ್ತು ಬಿಜೆಪಿಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಬಗ್ಗೆ ಭಯ ಶುರುವಾಗಿದೆ. ಗೃಹಮಂತ್ರಿ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ.‌ ಈ ಬಗ್ಗೆ ಬಿಜೆಪಿಯಿಂದ ಏನೂ ಪ್ರತಿಕ್ರಿಯೆ ಬರಲಿಲ್ಲ. ಈ ರೀತಿಯಲ್ಲಿ ನಿರಂತರವಾಗಿ ವಿರೋಧ ಪಕ್ಷದಿಂದ ಅಟ್ಯಾಕ್ ಆಗುತ್ತಲೇ ಇದೆ. ಇದನ್ನೆಲ್ಲ ತಡೆಗಟ್ಟಲು ಕಾಂಗ್ರೆಸ್ ಮುಂದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ಈಗಾಗಲೇ ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ ಸೇರಿದ ಎಲ್ಲ ಶಾಸಕ, ಉಸ್ತುವಾರಿ ಮಂತ್ರಿಗಳನ್ನು ಪ್ರತ್ಯೇಕ ಸಭೆ ನಡೆಸಲಾಗಿದೆ. ಅದರಂತೆ ಕಿತ್ತೂರ ಕರ್ನಾಟಕದ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು ಎಂದು ತಿಳಿಸಲಾಗಿದೆ. ಗಾಂಧಿ ಭಾರತವನ್ನು ಸ್ಮರಿಸುವ ಮತ್ತು ಇತಿಹಾಸದ ಪುಟಕ್ಕೆ ಸೇರಬೇಕಿರುವ ಕಾರ್ಯಕ್ರಮ ಇದಾಗಿದ್ದು ಜ. 21 ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯಲ್ಲಿ ಗಾಂಧೀಜಿ ಪುತ್ಥಳಿ ಅನಾವರಣ ಆಗುತ್ತದೆ. ರಾಹುಲ್ ಗಾಂಧಿ ಉಪಸ್ಥಿತಿ, ಮಲ್ಲಿಕಾರ್ಜುನ ಖರ್ಗೆ, ಎಚ್.ಕೆ.ಪಾಟೀಲ್, ಗಣ್ಯಮಾನ್ಯರು ಭಾಗವಹಿಸಲಿದ್ದಾರೆ. ಗಾಂಧೀಜಿ ಎಲ್ಲರಿಗೂ ಬೇಕಾಗಿರುವದರಿಂದ ಎಲ್ಲರಿಗೂ ಈ ಕಾರ್ಯಕ್ರಮಕ್ಕೆ ಮುಕ್ತ ಅವಕಾಶವಿದೆ. ಇದು ಕೇವಲ‌ ಪಕ್ಷದ ಕಾರ್ಯಕ್ರಮವಲ್ಲ. ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಈ ಜಯಘೋಷದೊಂದಿದೆ ಇಡೀ ದೇಶಕ್ಕೆ ಒಳ್ಳೆಯ ಸಂದೇಶ ಸಾರುವ ಪ್ರಯತ್ನವಾಗುತ್ತಿದೆ. ಸಂವಿಧಾನ ರಕ್ಷಣೆಗೆ ಎಲ್ಲರೂ ಕೈಜೋಡಿಸೋಣ ಎಂದು ಕರೆಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯ ಕಾರ್ಯಕ್ರಮದಲ್ಲಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಮಾತನಾಡಿ, ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಹೆಚ್ಚಿನ ಕೊಡುಗೆ ಮುಂಬೈ ಕರ್ನಾಟಕದಿಂದ ದೊರಕಿದೆ. ಬೆಳಗಾವಿಯು ಕರ್ನಾಟಕಕ್ಕೆ ಉತ್ತಮ‌ ಕೊಡುಗೆ ನೀಡಿದೆ.‌ ಈ ನಡೆಯಲಿರುವ ಕಾರ್ಯಕ್ರಮ ಕೇವಲ‌ ರಾಜಕೀಯ ಸಭೆಯಲ್ಲ. ಇದೊಂದು ಐತಿಹಾಸಿಕ ಸಭೆಯಾಗಿದೆ. ಗಾಂಧೀನಿಯವರ ಸಭೆಯು ಅಸ್ಪೃಶ್ಯತೆ ವಿರುದ್ದ, ಭ್ರಾತೃತ್ವ ಭಾವನೆ ಮೂಡಿಸುವ ಸಭೆಯಾಗಿತ್ತು. ಆ ನಿಟ್ಟಿನಲ್ಲಿ 2028 ನೇ ಇಸವಿಯವರೆಗೂ ನೆನಪಿರುವಂತೆ ಈ ಕಾರ್ಯಕ್ರಮ ಯಶಸ್ವಿಯಾಗಬೇಕು. ಸಿದ್ದರಾಮಯ್ಯ ಸರ್ಕಾರಕ್ಕೆ ಕೀರ್ತಿ ತರುವ ಕೆಲಸವಾಗಬೇಕು. ಇದು ರಾಷ್ಟ್ರಾಭಿಮಾನ ವ್ಯಕ್ತಪಡಿಸುವ ಕಾರ್ಯಕ್ರಮವಾಗಿದ್ದು, ಮುಂಬೈ ಕರ್ನಾಟಕದ ಅರ್ಥಾತ್ ಕಿತ್ತೂರು ಕರ್ನಾಟಕದ ಜನರೆಲ್ಲರೂ ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ಕೈಜೋಡಿಸಬೇಕು ಎಂದು ಕರೆಕೊಟ್ಟರು.

ಈ ವರದಿ ಓದಿದ್ದೀರಾ? ಧಾರವಾಡ | ಸಂಶಿಯಲ್ಲಿ ಜೋಡಮನಿ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರ

ಸಭೆ ಮತ್ತು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಶಾಸಕ ಎನ್ ಎಚ್ ಕೋನರೆಡ್ಡಿ, ಶಾಸಕ ಪ್ರಸಾದ್ ಅಬ್ಬಯ್ಯ, ಶಿವಲೀಲಾ ಕುಲಕರ್ಣಿ ಮತ್ತು ಗಣ್ಯರು ವೇದಿಕೆ ಮೇಲಿದ್ದರು. ಕೆಪಿಸಿಸಿ ಪದಾಧಿಕಾರಿಗಳು, ಎಐಸಿಸಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ತಾಲೂಕಾಧ್ಯಕ್ಷರು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...