ಹುಬ್ಬಳ್ಳಿ | ಸ್ಮಶಾನ ಭೂಮಿಯಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ: ಸ್ಥಗಿತಗೊಳಿಸಲು ರುದ್ರಭೂಮಿ ಸಮಿತಿ ಒತ್ತಾಯ

Date:

ಹುಬ್ಬಳ್ಳಿ ನಗರದ ಮಂಟೂರ ರಸ್ತೆಯಲ್ಲಿರುವ ಸತ್ಯಹರಿಶ್ಚಂದ್ರ ರುದ್ರಭೂಮಿಯಲ್ಲಿ ಅಕ್ರಮವಾಗಿ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗುತ್ತಿದೆ ಎಂದು ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿ ಆರೋಪಿಸಿದೆ.

ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿಯ ಮುಖಂಡ ವಿಜಯ ಗುಂಟ್ರಾಳ, ನಗರದ ಮಂಟೂರ ರಸ್ತೆಯ ಸತ್ಯಹರಿಶ್ಚಂದ್ರ ಸ್ಮಶಾನ ಭೂಮಿಯಲ್ಲಿ ಕಳೆದ ನೂರಾರು ವರ್ಷಗಳಿಂದ 30ಕ್ಕೂ ಹೆಚ್ಚು ಬಡಾವಣೆಗಳ ಜನರು ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಉಪಯೋಗಿಸುತ್ತಾ ಬಂದಿದ್ದಾರೆ. ಸದರಿ ಪ್ರದೇಶಲ್ಲಿ ಶೇ. 80% ದಲಿತ ಸಮುದಾಯ, ಹಾಗೂ ಹಿಂದುಳಿದ ಸಮುದಾಯದವರು ವಾಸವಿದ್ದಾರೆ. ಇಂತಹ ಪವಿತ್ರ ಸ್ಮಶಾನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಿ, ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹ ಹೀನ ಕೆಲಸ ಮಾಡುತ್ತಿರುವುದು ಖಂಡನೀಯ ಎಂದರು.

2019ರಲ್ಲಿ ಸ್ಮಶಾನ ಭೂಮಿಯಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಿಸುವ ಹುನ್ನಾರವನ್ನು ತಡೆಗಟ್ಟಲು ನಾವೆಲ್ಲ ಒಗ್ಗಟ್ಟಿನಿಂದ ವಿಫಲಗೊಳಿಸಿದ್ದೇವೆ. ಆದರೆ, 2022ರಲ್ಲಿ ಸ್ಮಶಾನ ಭೂಮಿ ಕಾಂಪೌಂಡ್ ಗೋಡೆಯನ್ನು ಒಡೆದು ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು, 100 ಅಡಿ ಜಾಗದಲ್ಲಿ ರಸ್ತೆಯನ್ನು ಕಾನೂನು ಬಾಹಿರವಾಗಿ ನಿರ್ಮಿಸಿದ್ದಾರೆ. ಅಲ್ಲದೆ, ಎಸ್‌ಸಿಪಿ/ಟಿಎಸ್‌ಪಿ ಅನುದಾನ ದುರ್ಬಳಕೆ ಮಾಡಿಕೊಂಡು ನಮ್ಮ ಪೂರ್ವಜರ ಸಮಾಧಿಗಳ ಮೇಲೆ ರಸ್ತೆ ನಿರ್ಮಿಸಿದ್ದಾರೆ‌ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಸ್ಮಶಾನ ಭೂಮಿಯಲ್ಲಿ ‘ಇಂದಿರಾ ಕ್ಯಾಂಟೀನ್’ ನಿರ್ಮಾಣ : ತೆರವುಗೊಳಿಸಲು ಬಿಜೆಪಿ ಹರಸಾಹಸ?

ಶಾಸಕರ ಕಾರ್ಯವೈಖರಿ ಟೀಕಿಸಬೇಕೆಂದರೆ ಚುನಾವಣೆಯಲ್ಲಿ ಅವರಿಗೆ ಮತ ಹಾಕಿರಬೇಕೆಂಬ ನಿಯಮ ಇದೆಯೇ? ಮತ ಹಾಕಿದರೆ ಮಾತ್ರ ಪ್ರಶ್ನೆ ಕೇಳಬೇಕು ಎಂದರೆ, ಇದು ಪ್ರಜಾಪ್ರಭುತ್ವಕ್ಕೆ ಮಾಡುವ ಅವಮಾನ. ಈ ಹಿನ್ನೆಲೆಯಲ್ಲಿ ಶಾಸಕರ ಸರ್ವಾಧಿಕಾರಿ ಧೋರಣೆ ಖಂಡನೀಯ ಎಂದು ಕಿಡಿಕಾರಿದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಭಾವಚಿತ್ರ ಸ್ಮಶಾನದಲ್ಲಿ ಹಾಕುವುದು ಅವರಿಗೆ ಮಾಡುವ ಅವಮಾನವಾಗಿದೆ. ಸ್ಥಳೀಯರ ವಿರೋಧ ಇದ್ದರೆ ಬೇರೆಡೆ ಸ್ಥಳಾಂತರ ಮಾಡುತ್ತೇನೆಂದು ಶಾಸಕ ಪ್ರಸಾದ್ ಅಬ್ಬಯ್ಯನವರು ಹೇಳುತ್ತಾರೆ. ಆದರೆ, ಇದೀಗ ವಿರೋಧ ವ್ಯಕ್ತಪಡಿಸುತ್ತಿರುವವರು ನೆರೆ ರಾಜ್ಯ ಅನ್ಯ ದೇಶಗಳಿಂದ ಬಂದವರಾಗಿದ್ದೇವೆಯೇ ಎಂದು ವಿಜಯ ಗುಂಟ್ರಾಳ ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿ ಮುಖಂಡರು ಕೂಡ ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...