ರಾಯಚೂರು | ಸಿಎಂ ಸಿದ್ದರಾಮಯ್ಯರನ್ನು ಬೆಂಬಲಿಸಿ ಆ.27ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ : ಕೆ ಶಾಂತಪ್ಪ

Date:

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರಿ ಕಸಿಯುವ ರಾಜಕೀಯ ಷಡ್ಯಂತ್ರದಿಂದ ರಾಜ್ಯಪಾಲರು ಕಾನೂನು ವಿಚಾರಣೆಗೆ ಅವಕಾಶ ನೀಡಿರುವುದು ಖಂಡಿಸಿ ಆಗಸ್ಟ್ 27 ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ಮಾಡಲಾಗುವುದು ಎಂದು ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಶಾಂತಪ್ಪ ಹೇಳಿದರು.

ರಾಯಚೂರಿನಲ್ಲಿ ಸುದ್ದಿಗೋಷ್ಠಿತನ್ನುದ್ದೇಶಿಸಿ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ನೀಡಿರುವ ನಿವೇಶನದ ಕುರಿತಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಪಪ್ರಚಾರ ಎಬ್ಬಿಸುತ್ತಿದ್ದಾರೆ. ಸುಳ್ಳು ಆರೋಪ ಮಾಡಿ ಹೋರಾಟ, ಪ್ರತಿಭಟನೆಗಳು ಮಾಡುತ್ತಿದ್ದಾರೆ. ಹಿಂದುಳಿದ ವರ್ಗ ನಾಯಕರೆಂದು ಜನಮನ್ನಣೆ ಪಡೆದು ಎಲ್ಲಾ ವರ್ಗಗಳ ಬೆಂಬಲ ಗಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ, ಕುತಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ದೇಶದ ಪ್ರಧಾನಿ ಹಾಗೂ ಗೃಹ ಸಚಿವರು ಸೇರಿದಂತೆ ಅನೇಕರು ಸಿದ್ದರಾಮಯ್ಯನವರ ಬೆಳವಣಿಗೆಯನ್ನು ಸಹಿಸುತ್ತಿಲ್ಲ ಹೇಗಾದರೂ ಮಾಡಿ ಕಾನೂನಿನ ಇಕ್ಕಟ್ಟಿಗೆ ಸಿಲುಕಿಸುವ ಕುತಂತ್ರಗಳು ನಡೆಸಲಾಗುತ್ತಿದೆ. ಖಾಸಗಿ ವ್ಯಕ್ತಿಯೊಬ್ಬರು ಬೆಳಗ್ಗೆ ದೂರು ನೀಡಿದರೆ ಸಂಜೆಯೇ ಕಾನೂನು ವಿಚಾರಣೆಗೆ ಅವಕಾಶ ನೀಡಿರುವ ರಾಜ್ಯಪಾಲರ ನಡೆಯೇ ಸಂಶಯದಿಂದ ಕೂಡಿದೆ ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ, ಜೆಡಿಎಸ್ ನಾಯಕರ ವಿರುದ್ದ ಕಾನೂನು ವಿಚಾರಣೆಗೆ ಅನೇಕ ಅರ್ಜಿಗಳು ಸಲ್ಲಿಕೆಯಾಗಿದ್ದರೂ ರಾಜ್ಯಪಾಲರು ಅನುಮತಿ ನೀಡದೇ ಯಾವುದೇ ತನಿಖಾ ಸಂಸ್ಥೆಗಳು ವರದಿ ನೀಡದೇ ಇದ್ದರೂ, ಕಾನೂನು ವಿಚಾರಣೆಗೆ ಅವಕಾಶ ನೀಡಿರುವುದು ರಾಜಕೀಯ ದುರುದ್ದೇಶ ಎಂಬುದು ಸ್ಪಷ್ಟವಾಗಿ ಎದ್ದು ಕಾಣುತ್ತಿದೆ. ಸಿದ್ರಾಮೋತ್ಸವ ಕಾರ್ಯಕ್ರಮದ ನಂತರ ರಾಜ್ಯ ಮತ್ತು ಪಕ್ಕದ ರಾಜ್ಯದಲ್ಲಿ ಸಿದ್ದರಾಮಯ್ಯನವ ಜನಮನ್ನಣೆ ಹೆಚ್ಚಳವಾಗಿರುವುದನ್ನು ಸಹಿಸಿಕೊಳ್ಳದೇ ಬಿಜೆಪಿ ನಾಯಕರು ರಾಜಕೀಯ ಕುತಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರ ನಿಷ್ಕ್ರಿಯಗೊಳಿಸಲು ಎಲ್ಲ ವರ್ಗದ ಜನರು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಎಲ್ಲ ಸಮುದಾಯಗಳ ಜನರು ಭಾಗವಹಿಸುವಂತೆ ಮನವಿ ಮಾಡಿದರು.

ಇದನ್ನು ಓದಿದ್ದೀರಾ? ರಾಯಚೂರು | ಸಾಮಾಜಿಕ ಮೌಲ್ಯಗಳನ್ನು ಬೆಳೆಸುವುದು ಅಗತ್ಯವಾಗಿದೆ : ಸಾಹಿತಿ ಜಿ ಸಿದ್ದರಾಮಯ್ಯ

ನಂತರ ಮಾತನಾಡಿದ ಹಿರಿಯ ನ್ಯಾಯವಾದಿ ಶ್ರೀಕಾಂತರಾವ್, ಮೈಸೂರು ಪ್ರಾಧಿಕಾರ ನೀಡಿರುವ ನಿವೇಶನದ ಕುರಿತಾಗಿ ಅನಗತ್ಯ ಗೊಂದಲ ಸೃಷ್ಟಿಸಿ ಸುಳ್ಳು ಆರೋಪಗಳನ್ನು ಮುಖ್ಯಮಂತ್ರಿಗಳ ವಿರುದ್ದ ಹರಿಹಾಯುತ್ತಿದ್ದಾರೆ. 1998ರಲ್ಲಿಯೇ ಡಿನೋಟಿಫಿಕೇಷನ್ ಆಗಿರುವ ನಿವೇಶನವನ್ನು 2004ರಲ್ಲಿ ಸಿಎಂ ಕುಟುಂಬದವತು, ಎನ್‌ಎ ಮಾಡಿಸಿ ಅನುಮತಿ ಪಡೆದಿದ್ದಾರೆ ಎಂದು ತಿಳಿಸಿದರು.

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಅಕ್ರಮವನ್ನು ಸಿಎಂ ಕುಟುಂಬದ ಮೇಲೆ ಹೇರುವ ಕೆಲಸವಾಗುತ್ತಿದೆ. ಮುಖ್ಯಮಂತ್ರಿಗಳ ವಿರುದ್ದ ಕೇಳಿಬಂದಿರುವ ಆರೋಪಗಳಿಗೆ ರಾಜ್ಯಪಾಲರು ವಿಚಾರಣೆಗೆ ಅವಕಾಶ ನೀಡುವ ಮುಂಚೆ ಯಾವುದೇ ಕಾನೂನು ವಿಧಿಗಳನ್ನು ಅನುಸರಿಸಿಲ್ಲ. ನಿಯಮ ಉಲ್ಲಂಘಿಸಿ ವಿಚಾರಣೆಗೆ ಅವಕಾಶ ನೀಡಿರುವುದು ಸಂವಿಧಾನ ವಿರೋಧಿಯಾಗಿದೆ. ಕಾನೂನಾತ್ಮಕ ಹೋರಾಟದೊಂದಿಗೆ ಹೋರಾಟ ನಡೆಸಲಾಗುತ್ತದೆ ಎಂದರು.

ಈ ಸಂರ್ಭದಲ್ಲಿ ಯಕ್ಲಾಸಪುರು, ಜಿ.ಸುರೇಶ, ಪಾಗುಂಟಪ್ಪ, ಪಂಪಾಪತಿ, ಪಾಂಡುರಂಗ ವಕೀಲ, ಸುರೇಖಾ, ಸುರೇಂದ್ರಬಾಬು ಇನ್ನಿತರರು ಇದ್ದರು.

ವರದಿ: ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...