ಕೊಡಗು | ಬಾಳುಗೋಡಿನ ಜನರ ಗೋಳಿಗೆ ಸ್ಪಂದಿಸಿದ ಮಾನವ ಹಕ್ಕುಗಳ ಆಯೋಗ; ದಶಕಗಳ ನಂತರ ಕುಡಿಯುವ ನೀರು

Date:

  • ಹೋರಾಟಕ್ಕೆ ಸಂದ ಜಯ ಎಂದ ನೈಜ ಹೋರಾಟಗಾರರ ವೇದಿಕೆಯ ಹೆಚ್ ಎಂ ವೆಂಕಟೇಶ್
  • ನ್ಯಾಯಮೂರ್ತಿ ಎಲ್ ನಾರಾಯಣಸ್ವಾಮಿಯವರ ನೇತೃತ್ವದ ನಿಯೋಗ ಬಾಳುಗೋಡಿಗೆ ಭೇಟಿ

ಕುಡಿಯುವ ನೀರಿನ ಸಮಸ್ಯೆಯನ್ನು ಅನುಭವಿಸುತ್ತಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳುಗೋಡಿಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಎಲ್ ನಾರಾಯಣಸ್ವಾಮಿ ಭೇಟಿ ನೀಡಿ ಆದಿವಾಸಿ ಗಿರಿಜನರ ಸಮಸ್ಯೆಗಳನ್ನು ಆಲಿಸಿದರು.

ಈ ಬಗ್ಗೆ ಆಯೋಗಕ್ಕೆ ಮನವಿ ಸಲ್ಲಿಸಿದ್ದ ನೈಜ್ಯ ಹೋರಾಟಗಾರರ ವೇದಿಕೆ ತಂಡವು ಬಾಳುಗೋಡಿನಲ್ಲಿ ವಾಸಿಸುವ ಆದಿವಾಸಿಗಳ ಗೋಳನ್ನು ವಿವರಿಸಿ ತಕ್ಷಣ ಸ್ಥಳಕ್ಕೆ ಬಂದು ಪರಿಹಾರವನ್ನು ಕಂಡುಕೊಳ್ಳುವಂತೆ ಈ ಹಿಂದೆ ಮನವಿ ಸಲ್ಲಿಸಿದ್ದರು.

ನೈಜ ಹೋರಾಟಗಾರರ ವೇದಿಕೆಯ ದೂರನ್ನು ಹೊತ್ತುಕೊಂಡು ಬಾಳುಗೋಡಿನ ಆದಿವಾಸಿ ಗಿರಿಜನರ ಹಾಡಿಗೆ ಭೇಟಿ ನೀಡಿದ ಆಯೋಗದ ಅಧ್ಯಕ್ಷರು, ಅಲ್ಲಿಯ ಜನರ ಜೀವನವನ್ನು ಕಣ್ಣಾರೆ ನೋಡಿ ಬೇಸರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

water

ಜಿಲ್ಲಾಡಳಿತದ ಅಧಿಕಾರಿಗಳೆಲ್ಲರನ್ನು ಸ್ಥಳದಲ್ಲಿಯೇ ಕರೆಸಿದ ಆಯೋಗವು, ಜನರಿಗೆ ಸರ್ಕಾರವು ಒದಗಿಸಬೇಕಾದ ಮೂಲಭೂತ ಸೌಕರ್ಯದ ಬಗ್ಗೆ ತಕ್ಷಣ ಕಾರ್ಯಪ್ರವರ್ತರಾಗುವಂತೆ ಮೌಖಿಕವಾಗಿ ಆದೇಶ ನೀಡಿ, 20 ದಿನಗಳ ಒಳಗಾಗಿ ಬಡಾವಣೆಯ ನಕ್ಷೆಯನ್ನು ಮಂಜೂರು ಮಾಡಿಕೊಳ್ಳಬೇಕು ಮತ್ತು ಇವರಿಗೆ ಹಕ್ಕುಪತ್ರಗಳನ್ನು ನೀಡಬೇಕು. ಶೌಚಾಲಯಗಳನ್ನು ತಕ್ಷಣ ನಿರ್ಮಾಣ ಮಾಡಬೇಕು. ಮತ್ತು ಇಲ್ಲಿನ ನಿವಾಸಿಗಳಿಗೆ ವಿದ್ಯುತ್ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.

ಕುಡಿಯುವ ನೀರಿಗಾಗಿ ಬೋರ್ವೆಲ್ ಅನ್ನು ತಕ್ಷಣ ಕೊರೆಸಿ ನೀರನ್ನು ಒದಗಿಸುವಂತೆ ತಿಳಿಸಿದರ. ಒಂದು ವಾರದೊಳಗೆ ಬೋರ್‌ವೆಲ್ ಅನ್ನು ಕೊರೆಸಿ ಶಾಶ್ವತ ನೀರನ್ನು ಒದಗಿಸುವಂತೆ ಹಾಗೂ ತಾತ್ಕಾಲಿಕವಾಗಿ ಟ್ಯಾಂಕರ್‌ನಲ್ಲಿ ನೀರನ್ನು ಸರಬರಾಜು ಮಾಡುವಂತೆ ತಿಳಿಸಿದರು.

ಆಯೋಗದ ಸೂಚನೆಯ ಮೇರೆ ನಿನ್ನೆಯಿಂದ(ಫೆ.1) ಅಧಿಕಾರಿಗಳು  ವಾಟರ್ ಟ್ಯಾಂಕಿನ ಮೂಲಕ ಹಾಡಿ ಜನರಿಗೆ ನೀರನ್ನು ಒದಗಿಸಲು ಪ್ರಾರಂಭಿಸಿದ್ದಾರೆ. ಬೋರ್ವೆಲ್ ಮಿಷನ್ ಕೂಡ ತರಿಸಿ ಬೋರ್ವೆಲ್ ಅನ್ನು ಕೊರೆಸುತ್ತಿರುವುದು ನೈಜ್ಯ ಹೋರಾಟಗಾರರ ವೇದಿಕೆಯ ಮುಖಂಡರ ಹೋರಾಟಕ್ಕೆ ಸಂದ ಜಯವೆಂದು ಬಾಳುಗೋಡಿನ ಆದಿವಾಸಿ ಜನರು ಸಂತಸ ವ್ಯಕ್ತಪಡಿಸಿದರು.

bore

ಆಯೋಗದ ಭೇಟಿಯ ವೇಳೆ ಸದಸ್ಯ ಕಾರ್ಯದರ್ಶಿ ಶಾಮ್ ಭಟ್ ಮತ್ತು ಸದಸ್ಯರಾದ ಒಂಟಿಗೋಡು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಹಾಜರಿದ್ದರು.

ಯಾವುದೇ ಮೂಲಭೂತ ಸೌಕರ್ಯವಿಲ್ಲದೆ ಬದುಕುತ್ತಿರುವ ಬಾಳುಗೋಡಿನ ಆದಿವಾಸಿ ಜನರ ಸಮಸ್ಯೆಯ ಬಗ್ಗೆ ಕೊಡಗು ಜಿಲ್ಲಾಡಳಿತಕ್ಕೆ ಪತ್ರಗಳ ಮೂಲಕ ನೈಜ ಹೋರಾಟಗಾರ ವೇದಿಕೆಯು ಮನವಿ ಮಾಡಿತ್ತು. ಆದರೆ, ಇದಕ್ಕೆ ಯಾವುದೇ ರೀತಿಯ ಸಕಾರಾತ್ಮಕ ಸ್ಪಂದನೆ ನೀಡದ ಜಿಲ್ಲಾಡಳಿತದ ವಿರುದ್ಧವೇ ಮಾನವ ಹಕ್ಕುಗಳ ಆಯೋಗಕ್ಕೆ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್ಎಂ ವೆಂಕಟೇಶ್ ಮತ್ತು ವೇದಿಕೆಯ ನಿಯೋಗವು ದೂರು ನೀಡಿತ್ತು.

ಈ ದೂರಿನ ಆಧಾರದ ಮೇರೆಗೆ ಆಯೋಗವು ಬಾಳುಗೋಡಿನ ಆದಿವಾಸಿ ಜನರು ವಾಸಿಸುವ ಸ್ಥಳಕ್ಕೆ ಬಂದು ಪರಿಶೀಲಿಸಿತು.

ನೈಜ ಹೋರಾಟಗಾರರ ವೇದಿಕೆಯ ಸದಸ್ಯರಾದ ಕುಣಿಗಲ್ ನರಸಿಂಹಮೂರ್ತಿ, ನಾಗರಾಜ್, ತುಮಕೂರಿನ ರಾಜು, ಮಲ್ಲಿಕಾರ್ಜುನಯ್ಯ, ನಾಗಸೂರ್ಯ, ಕೊಳ್ಳೇಗಾಲ ಅಪ್ಪಾಜಿ, ಮೈಸೂರಿನ ನಂಜರಾಜ್ ಅರಸ್, ಹಾಗೂ ಹಂದ್ರಾಳ್ ನಾಗಭೂಷಣ್ ಕೂಡ ಸ್ಥಳದಲ್ಲಿ ಹಾಜರಿದ್ದು, ಅಲ್ಲಿಯ ಜನರ ಬವಣೆಯನ್ನು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಟ್ಟರು.

“ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಮತ್ತು ಜಿಲ್ಲಾ ಆಡಳಿತವು ವಾಟರ್ ಟ್ಯಾಂಕ್ ಮೂಲಕ ನೀರನ್ನು ಸರಬರಾಜು ಮಾಡಿದ್ದು ಬೋರ್‌ವೆಲ್‌ಗಳನ್ನು ತಕ್ಷಣ ಕೊರೆಸುತ್ತಿರುವುದು ಅಲ್ಲಿ ವಾಸಿಸುತ್ತಿರುವ ಆದಿವಾಸಿ ಜನರ ಮುಖದಲ್ಲಿ ಸಂತಸವನ್ನು ಮೂಡಿಸಿದೆ” ಎಂದು ನೈಜ ಹೋರಾಟಗಾರರ ವೇದಿಕೆಯ ಹೆಚ್ ಎಂ ವೆಂಕಟೇಶ್ ತಿಳಿಸಿದ್ದಾರೆ.

ಕುಡಿಯುವ ನೀರು ಕಲ್ಪಿಸಲು ಹೋರಾಟ ನಡೆಸಿದ್ದಕ್ಕೆ ನೈಜ ಹೋರಾಟಗಾರರ ವೇದಿಕೆಯ ತಂಡಕ್ಕೆ ಮತ್ತು ಮಾನವ ಹಕ್ಕುಗಳ ಆಯೋಗಕ್ಕೆ ಬಾಳುಗೋಡಿನ ನಿವಾಸಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...