ಮೈಸೂರು | ನೆರವಿಗೆ ಧಾವಿಸುವಂತೆ ಸುಡಾನ್‌ನಲ್ಲಿ ಸಿಲುಕಿರುವ ಹಕ್ಕಿಪಿಕ್ಕಿ ಸಮುದಾಯದ ಜನ ಮನವಿ

Date:

  • ಸುಡಾನ್‌ನಲ್ಲಿ ಸಿಲುಕಿರುವ ಹುಣಸೂರು, ಎಚ್‌ ಡಿ ಕೋಟೆಯ 80ಕ್ಕೂ ಹೆಚ್ಚು ಮಂದಿ
  • ಹಕ್ಕಿಪಿಕ್ಕಿ ಸಮುದಾಯದವರು ತಾವೇ ತಯಾರಿಸುವ ಕೇಶ ತೈಲ ಮಾರಾಟಕ್ಕೆ ತೆರಳಿದ್ದರು

ಸುಡಾನ್‌ನಲ್ಲಿ ಆಂತರಿಕ ಸೈನಿಕ ದಂಗೆ ಭುಗಿಲೆದಿದ್ದಿದೆ. ಅಲ್ಲಿ, ಕರ್ನಾಟಕದ 800 ಮಂದಿ ಸಿಲುಕಿಕೊಂಡಿದ್ದಾರೆ. ಅವರಲ್ಲಿ, ಮೈಸೂರು ಜಿಲ್ಲೆಯ ಹುಣಸೂರು ಮತ್ತು ಎಚ್‌.ಡಿ ಕೋಟೆ ತಾಲೂಕಿನ ಸುಮಾರು ಹಕ್ಕಿಪಿಕ್ಕಿ ಸಮುದಾಯದ 80ಕ್ಕೂ ಹೆಚ್ಚು ಮಂದಿ ಇದ್ದಾರೆ. ಅವರೆಲ್ಲರೂ, ಜೀವ ಉಳಿಸಿಕೊಂಡು ತಾಯ್ನಾಡಿಗೆ ಮರಳುವುದು ಹೇಗೆಂಬ ಆತಂಕದಲ್ಲಿದ್ದಾರೆ. ತಮಗೆ ನೆರವಾಗುವಂತೆ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ದಕ್ಷಿಣ ಆಫ್ರಿಕಾದ ಸುಡಾನ್‌ಗೆ ಕಳೆದ ನಾಲ್ಕು ತಿಂಗಳ ಹಿಂದೆ ಹಕ್ಕಿಪಿಕ್ಕಿ ಸಮುದಾಯದವರು ತಾವೇ ತಯಾರಿಸುವ ಕೇಶ ತೈಲ ಮಾರಾಟ ಮಾಡಲು ಮತ್ತು ಮಸಾಜ್‌ ಮಾಡಲು ತೆರಳಿದ್ದರು. ಸುಡಾನ್‌ನ ಅಲ್ಲಲ್ಲಿ ಬಾಡಿಗೆ ಮನೆ, ಲಾಡ್ಜ್‌ಗಳನ್ನು ಗುರುತು ಮಾಡಿಕೊಂಡು ವಾಸಿಸುತ್ತಿದ್ದರು.

ಈ ನಡುವೆ ಮಿಲಿಟರಿ ಹಾಗೂ ಅರೆ ಸೇನಾಪಡೆಗಳ ನಡುವೆ ದಂಗೆ ಎದ್ದಿದ್ದು, ಇಡೀ ಸುಡಾನ್‌ನಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ. ವಿಮಾನ ನಿಲ್ದಾಣವನ್ನು ಧ್ವಂಸ ಮಾಡಲಾಗಿದ್ದು, ಸತತ ಗುಂಡಿನ ಮೊರೆತ ಕೇಳುತ್ತಿದೆ. ಮನೆಯಿಂದ ಹೊರಬರಲಾಗದೆ ಊಟ – ತಿಂಡಿ, ಕುಡಿಯುವ ನೀರಿಗೂ ತತ್ವಾರ ಉಂಟಾಗಿದ್ದು, ಪರಿತಪಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಡಾನ್‌ನಲ್ಲಿ ಕರೆಂಟ್‌ ಸ್ಥಗಿತವಾಗಿದೆ. ಅಂಗಡಿಗೆ ಹೋಗಿ ಆಹಾರ ಸಾಮಗ್ರಿಗಳನ್ನು ತರಲು ಸಾಧ್ಯವಾಗುತ್ತಿಲ್ಲ. ಎಲ್ಲೆಂದರಲ್ಲಿ ಮಿಲಿಟರಿ ವಾಹನಗಳು ಸೈರನ್‌ ಹಾಕಿಕೊಂಡು ಸಂಚರಿಸುತ್ತಿವೆ. ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದ್ದು, ಅಲ್ಲಿನ ದೇಶದವರು ಬೇರೆಕಡೆಗೆ ವಲಸೆ ಹೋಗುತ್ತಿದ್ದಾರೆ.

ಸುಡಾನ್‌ ನಲ್ಲಿರುವ ಹಕ್ಕಿಪಿಕ್ಕಿ ಸಮುದಾಯದ ಮಂದಿ ಪಕ್ಷಿರಾಜಪುರದ ಕುಟುಂಬದವರೊಂದಿಗೆ ವಿಡಿಯೋ ಕಾಲ್‌ ಮಾಡಿ ಮಾತನಾಡಿ ತಮ್ಮ ಆತಂಕವನ್ನು ತೋಡಿಕೊಂಡಿದ್ದಾರೆ.

ಹುಣಸೂರು

ಶಿವಮೊಗ್ಗ, ಕೇರಳ, ಬೆಂಗಳೂರು, ದಾವಣಗೆರೆ ಮತ್ತು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಒಂದನೇ ಪಕ್ಷಿರಾಜಪುರ, ಎರಡನೇ ಪಕ್ಷಿರಾಜಪುರ, ಎಚ್‌ ಡಿ ಕೋಟೆ ತಾಲೂಕಿನ ಟೈಗರ್‌ ಬ್ಲಾಕ್‌ನಿಂದ ಸುಮಾರು 80ಕ್ಕೂ ಹೆಚ್ಚು ಮಂದಿ ಸುಡಾನ್‌ಗೆ ಹೋಗಿದ್ದು, ಕುಟುಂಬದವರಿಗೆ ಮಾಹಿತಿ ಪಡೆಯಲು ಯಾರನ್ನು ಸಂಪರ್ಕಿಸಬೇಕೆಂಬುದೇ ತಿಳಿಯದ ಪರಿಸ್ಥಿತಿ ಉಂಟಾಗಿದ್ದು, ನೆರವಿಗೆ ಧಾವಿಸುವಂತೆ ಮನವಿ ಸಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಚುನಾವಣಾ ನೀತಿ ಸಂಹಿತೆ ಸಮರ್ಪಕ ಜಾರಿಗೆ ಜಿಲ್ಲಾಧಿಕಾರಿ ಸೂಚನೆ

ಪ್ರಧಾನಿಗೆ ಮನವಿ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗೋಪನಾಳು ಮತ್ತು ಅಸ್ತಾಪನಹಳ್ಳಿ ಗ್ರಾಮದ 150 ಜನ, ಶಿವಮೊಗ್ಗ ಜಿಲ್ಲೆಯ 400, ಮೈಸೂರು ಜಿಲ್ಲೆಯ 250 ರಿಂದ 300 ಜನ ಅತಂತ್ರರಾಗಿದ್ದಾರೆ. ಮೂರ್ನಾಲ್ಕು ದಿನಗಳಿಂದ ಆಹಾರ, ನೀರು ಸಿಗದೇ ಪರಿತಪಿಸುತ್ತಿರುವುದಾಗಿ ಅವರು ಸಂಬಂಧಿಕರಿಗೆ ಕರೆ ಮಾಡಿ ತಿಳಿಸಿದ್ದಾರೆ.

ಸುಡಾನ್‌ನ ಖಾರ್ಟೂಮ್ ನಗರದಲ್ಲಿ ಕೆಲವು ದಿನಗಳಿಂದ ಬಾಂಬ್ ಮತ್ತು ಕ್ಷಿಪಣಿ ದಾಳಿಗಳು ನಡೆಯುತ್ತಿವೆ. ಅಲ್ಲಿ ಸಿಲುಕಿರುವ ಕನ್ನಡಿಗರು ಜೀವ ಭಯದಿಂದ ದಿನ ಕಳೆಯುತ್ತಿದ್ದಾರೆ. ಅತಂತ್ರರಾಗಿರುವ ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರುವಂತೆ ಸಮುದಾಯದ ಹಿರಿಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...