ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಕಟ್ಟೆಮಳಲವಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಮಾತನಾಡಿ, ಮಕ್ಕಳು ವೈಜ್ಞಾನಿಕ ಮನೋಭಾವನೆ ಹಾಗೂ ವೈಚಾರಿಕತೆ ಬೆಳೆಸಿಕೊಳ್ಳಬೇಕು. ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ತ್ಯುತ್ತಮ ಫಲಿತಾಂಶ ತಂದು ಶಾಲೆಗೆ ಮತ್ತು ಗ್ರಾಮಕ್ಕೆ ಕೀರ್ತಿಯನ್ನು ತಂದುಕೊಡಬೇಕು ಎಂದರು.
ಮೈಸೂರಿನ ಪರಿಸರ ವಿಜ್ಞಾನಿ ಶಿವಪ್ರಕಾಶ್ ವಿಜ್ಞಾನಿ ಸಿ.ವಿ. ರಾಮನ್ ಎಫೆಕ್ಟ್ ಬಗ್ಗೆ ಮಾತನಾಡಿ, ವಿದ್ಯಾರ್ಥಿಗಳು ಮೂಢನಂಬಿಕೆ ಮತ್ತು ಅಂಧಾಚರಣೆನ್ನು ತೊರೆದು ಉತ್ತಮ ವಿದ್ಯಾಭ್ಯಾಸ ಮಾಡಿ ಯೋಜಿಸಿರುವ ಗುರಿಯನ್ನು ಸಾಧಿಸಿ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ತಂಬಾಕು ಬೆಳೆಗಾರರ ಹಿತಕಾಯಲು ಬದ್ಧ; ಉತ್ತಮ ಬೆಲೆಗೆ ಖರೀದಿಸಿ: ಎಚ್ಡಿಕೆ
ಕಾರ್ಯಕ್ರಮದಲ್ಲಿ ಬಿ ಆರ್ ಪಿ ಸೋಮಶೇಖರ್, ಎಸ್ಡಿಎಂಸಿ ಅಧ್ಯಕ್ಷ ಕೆ. ಚಂದ್ರ, ಇಸಿಓ ಜಯಪ್ರಕಾಶ್, ಮುಖ್ಯ ಶಿಕ್ಷಕಿ ಸುಮರಾಣಿ, ಎಸ್ಡಿಎಂಸಿ ಉಪಾಧ್ಯಕ್ಷೆ, ವಿಶಾಲಾಕ್ಷಿ, ದೇವೇಂದ್ರ ಕುಳವಾಡಿ, ಅಶೋಕ್, ಶಿವು, ಸೋಮು, ವಿಜ್ಞಾನ ಶಿಕ್ಷಕಿ ಹೇಮಪ್ರಸಾದ್ ಸೇರಿದಂತೆ ಶಾಲೆಯ ಮಕ್ಕಳು, ಶಿಕ್ಷಕ ವೃಂದದವರು ಇದ್ದರು.
ಈ ವಿಶೇಷ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್ | ಕೊಡಗಿನ ಆದಿವಾಸಿ, ದಲಿತ, ಶೋಷಿತರ ಬದುಕು ಹಸನಾಗಲಿಲ್ಲ; ನಿರೀಕ್ಷೆ ತಪ್ಪಲಿಲ್ಲ!





