ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದಲ್ಲಿನ ಸೈಗೋಲ್ಡ್ ಅಂಡ್ ಡೈಮಂಡ್ ಶಾಪ್ ಅಂಗಡಿಯಲ್ಲಿ ದಿನಾಂಕ-28-12-2025 ರಂದು ಮಧ್ಯಾಹ್ನ 2-04 ಗಂಟೆ ಸಮಯದಲ್ಲಿ 05 ಜನ ವ್ಯಕ್ತಿಗಳು ಮುಖಕ್ಕೆ ಮಾಸ್ಕ್ ಹಾಗೂ ಹೆಲೈಟ್ ಧರಿಸಿ, ಕೈಗಳಲ್ಲಿ ಪಿಸ್ತೂಲ್ ಗಳನ್ನು ಹಿಡಿದು ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದವರಿಗೆ ಹೆದರಿಸಿ, ಅಂಗಡಿಯಲ್ಲಿದ್ದ 450 ವಿವಿಧ ಮಾದರಿಯ 8,034 ಗ್ರಾಂ 200ಮಿಲಿ ತೂಕವಿರುವ ಅಂದಾಜು ₹10 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಚಿನ್ನದಂಗಡಿ ಮಾಲೀಕ ಸೈನುದ್ದೀನ್ ನೀಡಿದ ದೂರಿನ ಅನ್ವಯ ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದರು. ಪೊಲೀಸ್ ಮಹಾನಿರೀಕ್ಷಕರಾದ ಡಾ. ಎಂ.ಬಿ. ಬೋರಲಿಂಗಯ್ಯರವರ ಮಾರ್ಗದರ್ಶನದಲ್ಲಿ ಪ್ರಕರಣದ ಆರೋಪಿಗಳು ಮತ್ತು ದರೋಡೆ ಸ್ವತ್ತಿನ ಪತ್ತೆಗಾಗಿ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ಅಧೀಕ್ಷಕ ಎಲ್.ನಾಗೇಶ್ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಿ, ವಿವಿಧ ರಾಜ್ಯಗಳಲಿ ತನಿಖೆ ಕೈಗೊಂಡಿದ್ದರು.
ವಿಶೇಷ ವಿಡಿಯೋ ವೀಕ್ಷಿಸಿ: https://www.youtube.com/watch?v=NNlc_mA4os0&t=382s
ಬಿಹಾರ ರಾಜ್ಯಕ್ಕೆ ತೆರಳಿದ್ದ ಪೊಲೀಸ್ ನಿರೀಕ್ಷಕ ಸಂತೋಷ್ ಕಶ್ಯಪ್, ಟಿ.ಎಂ. ಪುನೀತ್, ಪಿಎಸ್ಐ ಅಜಯ್ ಕುಮಾರ್ ನೇತೃತ್ವದ ತಂಡವು ಬಿಹಾರ ರಾಜ್ಯದ ಪೊಲೀಸರ ಸಹಕಾರದೊಂದಿಗೆ ಆರೋಪಿತಗಳಾದ ಹರಿನಗರ ಬಡಾವಣೆ ವಾಸಿಯಾದ ರಿಷಿಕೇಶ್ ಕುಮಾರ್ ಸಿಂಗ್ ಹಾಗೂ ಬಾಗಲ್ಪುರ ಜಿಲ್ಲೆಯ ಪಂಕಜ್ ಕುಮಾರ್ ಎಂಬುವವರನ್ನು ದರ್ಬಾಂಗ್ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ, ಆರೋಪಿತಗಳು ದರೋಡೆ ಮಾಡಿದ್ದ 12.5 ಗ್ರಾಂ ತೂಕದ ಚಿನ್ನದ ಆಭರಣಗಳು, ₹92,000 ರೂಪಾಯಿ ನಗದು ಹಣ, ಸೈಗೋಲ್ಡ್ ಚಿಹ್ನೆ ಇರುವ ಒಂದು ಬಾಕ್ಸ್ ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ರಾಯಲ್ ಎನ್ಫೀಲ್ಡ್ ಬೈಕನ್ನು ವಶಪಡಿಸಿಕೊಂಡಿದ್ದಾರೆ.
ಈ ವಿಶೇಷ ಸುದ್ದಿ ಓದಿದ್ದೀರಾ? ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಪ್ರಸ್ತಾವಿತ ಯೋಜನೆಯ ಸಾಧಕ-ಬಾಧಕಗಳೇನು?
ಕಾರ್ಯಾಚರಣೆಯಲ್ಲಿ ಭಾಗಿಯಾಗಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ತನಿಖಾ ತಂಡಕ್ಕೆ ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿಯವರು ಪ್ರಶಂಸಿದ್ದಾರೆ.





