ಉಡುಪಿ | ಹೈಕಾಡಿಯ ನವೀಕೃತ ಮಸೀದಿ ಉದ್ಘಾಟನೆ ಹಾಗೂ ಸಾರ್ವಜನಿಕ ಮಸೀದಿ ಸಂದರ್ಶನ ಕಾರ್ಯಕ್ರಮ

Date:

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯ ನವೀಕೃತ ಮಸೀದಿಯ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮಸೀದಿ ಉದ್ಘಾಟಿಸಿದ ಉಡುಪಿಯ ಸೈಮ್ ಗ್ರೂಪ್ ನ ನಿರ್ದೇಶಕರಾದ ಜನಾಬ್ ಜಿ. ಇಮ್ತಿಯಾಝ್ ಇವರು ಸಭೆಯನ್ನುದ್ದೇಶಿಸಿ ಮಾತನಾಡುತ್ತಾ “ಜಾತಿ ಧರ್ಮಗಳ ನಡುವೆ ಉತ್ತಮ ಬಾಂಧವ್ಯ, ಸಾಮರಸ್ಯ, ಸಮುದಾಯದ ಬೆಳವಣಿಗೆಯಲ್ಲಿ ಧಾರ್ಮಿಕ ಕೇಂದ್ರವಾಗಿ ಮಸೀದಿ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಹೇಳಿದರು.

ಸಾರ್ವಜನಿಕರಿಗೆ ಮಸೀದಿ ಸಂದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಸಾರ್ವಜನಿಕ ಪ್ರವಚನ ನೀಡಿದ ಕರ್ನಾಟಕ ರಾಜ್ಯ ಜಮಾಆತೇ ಇಸ್ಲಾಮೀ ಹಿಂದ್ ನ ಕಾರ್ಯದರ್ಶಿ ಜನಾಬ್ ಅಕ್ಬರ್ ಆಲಿ ಮಾತನಾಡುತ್ತಾ, ಧಾರ್ಮಿಕ ಕೇಂದ್ರಗಳು ಕೇವಲ ಆರಾಧನೆಗೆ ಸೀಮಿತವಾಗಿರದೇ ಸಾಮಾಜಿಕ ಚಟುವಟಿಕೆಗಳು ನಡೆಯುವಂತಾಗಬೇಕು, ಆ ಬಾಗದ ಜನರ ಬೇಡಿಕೆಗಳನ್ನು ಈಡೇರಿಸುವ ಕೇಂದ್ರಗಳಾಗಿ ಮಾರ್ಪಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೆಂಗಳೂರು ಹೋಟೆಲ್ ಮಾಲಕರ ಸಂಘದ ಅಧ್ಯಕ್ಷರಾದ ಹೈಕಾಡಿಯವರಾದ ಶ್ರೀ ಜಿ.ಕೆ.ಶೆಟ್ಟಿ, ಪುರೋಹಿತರಾದ ಶ್ರೀ ಬಾಲಕೃಷ್ಣ ಭಟ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಜನಾಬ್ ಎಂ.ಎ. ಗಫೂರ್, ಜಮಾಆತಿನ ಹಿರಿಯ ಉಪಾಧ್ಯಕ್ಷರಾದ ಜನಾಬ್ ಖಾಜಿ ಶಬ್ಬೀರ್ ಸಾಹೇಬ್, ಖಜಾಂಚಿ ಜನಾಬ್ ಮೊಯಿದಿನ್ ಸಾಹೇಬ್ ಇವರುಗಳನ್ನು ಸನ್ಮಾನಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾರಂಭದ ಅಧ್ಯಕ್ಷತೆಯನ್ನು ಮಸೀದಿಯ ಅಧ್ಯಕ್ಷರಾದ ಜನಾಬ್ ಎಂ. ಅಸ್ಲಾಂ ಹೈಕಾಡಿ ವಹಿಸಿದರು. ವೇದಿಕೆಯಲ್ಲಿ ಆವರ್ಸೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀ ದಿವಾಕರ ಗಾಣಿಗ, ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸಮೀನ ಬಾನು, ಗ್ರಾಮ ಪಂಚಾಯತ್ ನ ಸದಸ್ಯರಾದ ಶ್ರೀ ಸಂತೋಷ ಶೆಟ್ಟಿ ಕೊಣ್ಣೆಮಕ್ಕಿ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಜನಾಬ್ ಎಂ.ಎ. ಮೌಲಾ, ಉಡುಪಿ ಸಾಲಿಹಾತ್ ಶಿಕ್ಷಣ ಸಂಸ್ಥೆ ಸಲಹಾ ಮಂಡಳಿ ಅಧ್ಯಕ್ಷರಾದ ಡಾಕ್ಟರ್ ಶಹನ್ವಾಜ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಜನಾಬ್ ಇರ್ಷಾದ್ ಮೀಫ್ ಸಂಸ್ಥೆಯ ಗೌರವಾಧ್ಯಕ್ಷರಾದ ಜನಾಬ್ ಶಬ್ಬೀ ಅಹ್ಮದ್ ಖಾಜಿ, ಉದ್ಯಮಿ ಯಾಸೀನ್ ಕೋಡಿಬೆಂಗ್ರೆ, ಕಾರ್ಯದರ್ಶಿ ಜನಾಬ್ ಬಿ. ಜಾಫರ್ ಸಾದಿಕ್ ಮುಂತಾದವರು ಉಪಸ್ಥಿತರಿದ್ದರು.

ಮೌಲಾನ ಬಿಲಾಲ್ ಇವರು ಕಿರಾತ್ ಪಠಿಸಿದರು. ಮುಸ್ಲಿಂ ವೆಲ್ ಫೇರ್ ಟ್ರಸ್ಟ್ ನ ಅಧ್ಯಕ್ಷರಾದ ಅಬ್ದುಲ್ ಸಮದ್ ಸ್ವಾಗತಿಸಿದರು. ಜಮಾತ್ ಸದಸ್ಯರಾದ ಅಜ್ಮಲ್ ಧನ್ಯವಾದವಿತ್ತರು. ಮಾಜಿ ಅಧ್ಯಕ್ಷರಾದ ಜನಾಬ್ ಹುಸೇನ್ ಹೈಕಾಡಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...