ಕುಮಾರಸ್ವಾಮಿ ಹೇಗೆಲ್ಲಾ ವರ್ಗಾವಣೆಗೆ ಸೂಚನೆ ಕೊಡುತ್ತಿದ್ದರು ಎಂಬುದು ಗೊತ್ತಿದೆ ಎಂದ ಗೃಹಸಚಿವ ಪರಮೇಶ್ವರ್‌

Date:

  • ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್: ಸಿಎಂ ಸಿದ್ದರಾಮಯ್ಯ
  • ಸರ್ಕಾರ ನಡೆಸುವವರು ನಾವು. ಸರಿ ಕಂಡಿದ್ದು ಮಾಡುತ್ತೇವೆ: ಪರಮೇಶ್ವರ್‌

ಎಚ್‌ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾನೇ ಗೃಹಸಚಿವನಾಗಿದ್ದೆ. ಆಗ ಅವರು ವರ್ಗಾವಣೆಗೆ ಯಾವ ರೀತಿ ಸಲಹೆ ಸೂಚನೆ ಕೊಡುತ್ತಿದ್ದರು ಎಂಬುದು ಗೊತ್ತಿದೆ. ಅದನ್ನು ನಾನು ಹೇಳಿಲ್ಲ. ನಮಗೂ ಹೇಳಲು ಬರುತ್ತದೆ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್‌ ತಿರುಗೇಟು ನೀಡಿದ್ದಾರೆ.

ಗೃಹ ಇಲಾಖೆಯಲ್ಲಿ ವರ್ಗಾವಣೆ ದಂಧೆ ಕುರಿತಂತೆ ಸರ್ಕಾರದ ಮೇಲೆ ಆರೋಪ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಮಾತಿಗೆ ಪ್ರತಿಕ್ರಿಯಿಸಿ, “ಕುಮಾರಸ್ವಾಮಿ ಅವರು ಏನು ಬೇಕಾದ್ರೂ ಕಮೆಂಟ್ ಮಾಡಲಿ. ಸರ್ಕಾರ ನಡೆಸುವವರು ನಾವು. ನಮಗೆ ಯಾವುದು ಸರಿ ಕಾಣುತ್ತದೆಯೋ ಅದನ್ನ ಮಾಡುತ್ತೇವೆ” ಎಂದರು.

“1200 ಇನ್ಸ್ ಪೆಕ್ಟರ್ ಗಳಿದ್ದಾರೆ. ಅಷ್ಟೂ ಜನರನ್ನು ನಾವು ವರ್ಗಾವಣೆ ಮಾಡುವುದಿಲ್ಲ. ಎಷ್ಟು ಮಂದಿ ಅಗತ್ಯ ಇದೆಯೋ ಅಷ್ಟು ಜನರನ್ನ ಮಾತ್ರ ವರ್ಗಾವಣೆ ಮಾಡುತ್ತೇವೆ. ಯಾವ ಏರಿಯಾದಲ್ಲಿ ಯಾವ ರೀತಿ ಯಾರನ್ನು ಹಾಕಿದರೆ ಅಪರಾಧ ಪ್ರಕರಣ ಕಂಟ್ರೋಲ್‌ಗೆ ಬರುತ್ತದೆ ಎಂಬುದು ಅವಲೋಕಿಸಿ ವರ್ಗಾವಣೆ ಮಾಡುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲವು ವರ್ಗಾವಣೆ ಸರಿ ಅನ್ನಿಸದೇ ಇರುವುದನ್ನು ನಿಲ್ಲಿಸಿದ್ದೇವೆ. ಅದನ್ನೆಲ್ಲ ನೋಡಿ ಸರಿ ಮಾಡಿ ವರ್ಗಾವಣೆ ಮಾಡುತ್ತೇವೆ. ಒಬ್ಬ ಇನ್ ಸ್ಪೆಕ್ಟರ್ ಗೆ 5, 6 ಕಡೆ ಅವಕಾಶ ಇದೆ. ಅದನ್ನು ನೋಡಿ ಸರಿ ಮಾಡಬೇಕು, ಸರಿ ಮಾಡುತ್ತೇವೆ” ಎಂದರು

ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್: ಸಿಎಂ ಸಿದ್ದರಾಮಯ್ಯ

ಎಚ್‌ ಡಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪಗಳನ್ನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಇನ್ ಸ್ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ʼವೈಎಸ್‍ಟಿ ಟ್ಯಾಕ್ಸ್ʼ ಏಕೆ ಉಪಸ್ಥಿತರಿದ್ದರು ಎಂದು ಪ್ರಶ್ನಿಸಿರುವ ಬಗ್ಗೆ ಪ್ರತಿಕ್ರಿಯಿಸಿ, “ಈ ಹಿಂದೆ ಪೆನ್‍ಡ್ರೈವ್ ತೋರಿಸಿದ್ದರು. ಅದನ್ನು ಸಾಬೀತು ಮಾಡಿದರೇ? ಅವರ ಹತ್ತಿರ ಪೆನ್‍ಡ್ರೈವ್ ಇದ್ದರಲ್ಲವೇ ಹೊರಗೆಬಿಡುವುದು” ಎಂದು ಕುಟುಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...