ಮಂಗಳೂರು | ಹಿರಿಯ ತುಳು ಕಲಾವಿದ ದೇವದಾಸ್ ಕಾಪಿಕಾಡ್‌ರನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಜೆಪಿ!

Date:

ಬಿಜೆಪಿಯವರ ಒಂದು ಸಂದೇಶವು ಕರಾವಳಿ ಭಾಗದ ಹಿರಿಯ ತುಳು ಕಲಾವಿದ, ನಿರ್ದೇಶಕ ದೇವದಾಸ್ ಕಾಪಿಕಾಡ್‌ರನ್ನು ಇಕ್ಕಟ್ಟಿಗೆ ಸಿಲುಕಿಸಿದ ಬೆಳವಣಿಗೆ ನಡೆದಿದೆ. ಕೊನೆಗೆ ಖುದ್ದು ‘ತೆಲಿಕೆದ ಬೊಳ್ಳಿ’ಯೇ ಸ್ಪಷ್ಟನೆ ನೀಡಬೇಕಾದ ಅನಿವಾರ್ಯತೆ ಒದಗಿಬಂತು.

ಕಾರಣ ಇಷ್ಟೇ. ಪಕ್ಷದ ಸಂಘಟನೆಯ ದೃಷ್ಟಿಯಿಂದ ಬಿಜೆಪಿಯವರು ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ ಮಾಜಿ ಸಿಎಂ ಸದಾನಂದ ಗೌಡ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಸಿದ್ಧ ತುಳು ನಾಟಕ ಕಲಾವಿದ, ಸಿನಿಮಾ ನಟ, ನಿರ್ದೇಶಕರೂ ಆಗಿರುವ ತೆಲಿಕೆದ ಬೊಳ್ಳಿ’ ಖ್ಯಾತಿಯ ದೇವದಾಸ್ ಕಾಪಿಕಾಡ್‌ ಅವರ ಮನೆಗೆ ತೆರಳಿದೆ. ಆ ಬಳಿಕ ಬಿಜೆಪಿ ಕರ್ನಾಟಕ ಘಟಕವು ಫೋಟೋ ಹಂಚಿಕೊಂಡು, “ತುಳು ರಂಗಭೂಮಿಯ ಜನಪ್ರಿಯ ಕಲಾವಿದ ‘ತೆಲಿಕೆದ ಬೊಳ್ಳಿ’ ಡಾ.ದೇವದಾಸ್ ಕಾಪಿಕಾಡ್ ಅವರು ಬಿಜೆಪಿ ಸದಸ್ಯತ್ವವನ್ನು ಪಡೆದರು” ಎಂದು ಪೋಸ್ಟ್ ಮಾಡಿತ್ತು.

ದೇವದಾಸ್ ಕಾಪಿಕಾಡ್ ಅವರು ಕರಾವಳಿಯಲ್ಲಿ ಎಲ್ಲ ಧರ್ಮ, ಜಾತಿಗಳ ಅಭಿಮಾನಿಗಳನ್ನು ಹೊಂದಿದ್ದಾರೆ. ಕಾಪಿಕಾಡ್ ಅವರ ತಂಡವು ಕೇವಲ ಮಂಗಳೂರು, ಉಡುಪಿ ಮಾತ್ರವಲ್ಲದೆ, ವಿದೇಶಗಳಲ್ಲೂ ಕಾರ್ಯಕ್ರಮಗಳನ್ನು ನೀಡುವ ಮೂಲಕ ಗಮನ ಸೆಳೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಸೇರ್ಪಡೆಯಾಗಿದ್ದಾರೆಂಬ ಸುದ್ದಿ ವೈರಲ್ ಆಗುತ್ತಿದ್ದಂತೆ ಹಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇವದಾಸ್ ಕಾಪಿಕಾಡ್‌ಗೆ ಫೋನ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ನಟವಾಗಿ ಎಲ್ಲಾ ರಾಜಕೀಯ ಪಕ್ಷಗಳು, ಧರ್ಮಗಳ ಅಭಿಮಾನಿಗಳು ನಿಮ್ಮನ್ನು ಒಪ್ಪಿಕೊಳ್ಳುತ್ತಾರೆ. ಹೀಗಿರುವಾಗ ಒಂದು ಪಕ್ಷದ ಸದಸ್ಯತ್ವ ಪಡೆದುಕೊಂಡರೆ ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದ್ದಾರೆ.

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾದ ಹಿನ್ನೆಲೆಯಲ್ಲಿ ದೇವದಾಸ್ ಕಾಪಿಕಾಡ್ ಇದಕ್ಕೆ ಸ್ಪಷ್ಟನೆ ನೀಡಿದ್ದು, ಆಡಿಯೋವೊಂದನ್ನು ಹರಿಯಬಿಟ್ಟಿದ್ದು, “ನಾನು ಯಾವುದೇ ಪಕ್ಷದ ಸದಸ್ಯತ್ವವನ್ನು ಪಡೆದಿಲ್ಲ. ನನಗೆ ಎಲ್ಲ ಪಕ್ಷದಲ್ಲೂ ಸ್ನೇಹಿತರಿದ್ದಾರೆ. ಅಭಿಮಾನಿಗಳಿದ್ದಾರೆ. ನಾನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂಬ ಸುದ್ದಿ ಸುಳ್ಳು” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಎತ್ತಿನಹೊಳೆ | ಮುಖ್ಯಮಂತ್ರಿ ಅವರಿಂದ ಬಾಗಿನ ಅರ್ಪಿಸಲು ನಿರ್ಮಿಸಲಾಗಿದ್ದ ಮಂಟಪ ದಿಢೀರ್‌ ಕುಸಿತ

“ನಾನೊಬ್ಬ ಕಲಾವಿದ, ಎಲ್ಲಾ ಜಾತಿ ಮತ ಧರ್ಮಗಳ ಜನರು ನನ್ನ ಅಭಿಮಾನಿಗಳಾಗಿದ್ದು ನನ್ನನ್ನು ಪ್ರೀತಿ ಮಾಡುತ್ತಾರೆ, ನನಗೆ ಯಾವ ಪಕ್ಷವೂ ಬೇಕಿಲ್ಲ, ಎಲ್ಲಾ ಪಕ್ಷಗಳ ನಾಯಕರ ಜೊತೆಗೂ ನನಗೆ ಭಾಂಧವ್ಯ ಇದೆ. ರಮಾನಾಥ ರೈ, ಯು.ಟಿ ಖಾದರ್, ನಳಿನ್ ಕುಮಾರ್ ಕಟೀಲ್ ಸೇರಿದಂತೆ ನನಗೆ ಎಲ್ಲರೂ ಒಳ್ಳೆಯ ಸ್ನೇಹಿತರು. ನನ್ನ ಮನೆಗೆ ಯಾವ ಪಕ್ಷದ ನಾಯಕರು ಬಂದರೂ ಸ್ವಾಗತಿಸಿ ಆತಿಥ್ಯ ನೀಡಿ ಫೋಟೋ ತೆಗೆಸಿಕೊಳ್ಳುತ್ತೇನೆ’ ಎಂದಿದ್ದಾರೆ.

ದೇವದಾಸ್ ಕಾಪಿಕಾಡ್ ಸೋಷಿಯಲ್ ಮೀಡಿಯಾಗಳಲ್ಲಿ ಸ್ಪಷ್ಟನೆ ನೀಡಿರುವ ಆಡಿಯೋ

ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ ಎಂಬ ಸುದ್ದಿ ಹರಿದಾಡಿದ ಬಳಿಕ, ಸೋಷಿಯಲ್ ಮೀಡಿಯಾಗಳಲ್ಲಿ ‘ಬಾಯ್ಕಾಟ್ ದೇವದಾಸ್ ಕಾಪಿಕಾಡ್ ಅಭಿಯಾನ’ ನಡೆಯುತ್ತಿರುವುದು ಕಂಡುಬಂದಿದೆ. ಅದರ ಬೆನ್ನಲ್ಲೇ ದೇವದಾಸ್ ಕಾಪಿಕಾಡ್ ಅವರಿಂದ ಸ್ಪಷ್ಟನೆ ಹೊರಬಂದಿದೆ. ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿ ಅರೇಬಿಯಾದಲ್ಲಿ ಪ್ರಸಿದ್ದ ನಟನ ಕಾರ್ಯಕ್ರಮ ಬಹಿಷ್ಕಾರ ಹಾಕಲಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ ಇದು ಅಧಿಕೃತವಾಗಿ ಯಾವುದೇ ಆಯೋಜಕರಿಂದ ಬಂದಿಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...