ಉಡುಪಿ ವಿವಾದ | ಘಟನೆ ನಡೆದಿಲ್ಲ ಅಂತ ಎಲ್ಲೂ ಹೇಳಿಲ್ಲ: ಎಬಿವಿಪಿ ಕಾರ್ಯಕರ್ತರಿಗೆ ಎಸ್‌ಪಿ ಸ್ಪಷ್ಟನೆ

Date:

  • ಬೆಂಗಳೂರಿನಲ್ಲಿ ಬಿಜೆಪಿ, ಉಡುಪಿಯಲ್ಲಿ ಎಬಿವಿಪಿ ಪ್ರತಿಭಟನೆ
  • ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟ ಪ್ರಕರಣ

ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಮತ್ತು ಉಡುಪಿಯಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು.

ಪೊಲೀಸರು ತನಿಖೆಯ ಹಾದಿ ತಪ್ಪಿಸುತ್ತಿರುವುದಾಗಿ ಆರೋಪಿಸಿ ಎಬಿವಿಪಿ ಉಡುಪಿಯಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರ ಮಧ್ಯೆ ತಳ್ಳಾಟ ನೂಕಾಟವೂ ನಡೆಯಿತು.

ಬಳಿಕ ಸ್ಥಳಕ್ಕೆ ಬಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೇ ಅಕ್ಷಯ್ ಮಚ್ಚೀಂದ್ರ ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿದ್ದು, ‘ನಾನು ಈ ಪ್ರಕರಣದ ಸಂಬಂಧ ನಡೆಸಿದ್ದ ಪತ್ರಿಕಾಗೋಷ್ಠಿಯ ವೇಳೆ ಘಟನೆಯೇ ನಡೆದಿಲ್ಲ ಅಂತ ಹೇಳಿಲ್ಲ. ವಿಡಿಯೋ ವೈರಲ್ ಆಗಿಲ್ಲ ಅಂತ ಅಷ್ಟೇ ಹೇಳಿದ್ದೇನೆ’ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಈ ಬಗ್ಗೆ ತನಿಖೆ ನಡೆಸಲು ನಾವು ತಯಾರಿಲ್ಲ ಎಂದು ಎಲ್ಲಿಯೂ ನಾವು ಹೇಳಿಲ್ಲ. ತನಿಖೆ ನಡೆಸಲು ಬದ್ಧರಾಗಿದ್ದೇವೆ. ನಾನು ಅವತ್ತು ಪ್ರೆಸ್‌ಮೀಟ್‌ನಲ್ಲಿ ಎರಡು ಮೂರು ವಿಚಾರಗಳನ್ನು ಹೇಳಿದ್ದೇನೆ. ಕೆಲವು ಫೇಕ್ ವಿಡಿಯೋಗಳನ್ನು ಹರಿಯಬಿಟ್ಟು ಉಡುಪಿಯಲ್ಲಿ ನಡೆದದ್ದು ಅಂತ ಹರಿಯಬಿಟ್ಟಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ವೈರಲ್ ಆಗಿರುವ ವಿಡಿಯೋ ಎಲ್ಲಿಯೂ ನಮ್ಮ ಗಮನಕ್ಕೆ ಬಂದಿಲ್ಲ ಅಂತ ಅವತ್ತೂ ಹೇಳಿದ್ದೇನೆ, ಇವತ್ತೂ ಹೇಳುತ್ತಿದ್ದೇನೆ. ಈ ಬಗ್ಗೆ ಎಲ್ಲ ರೀತಿಯ ತನಿಖೆಗೆ ನಾವು ಸಿದ್ಧರಿದ್ದೇವೆ” ಎಂದು ಪ್ರತಿಭಟನಾನಿರತ ಎಬಿವಿಪಿ ಸಂಘಟನೆಯವರ ಮುಂದೆಯೇ ನೇರವಾಗಿ ತಿಳಿಸಿದರು.

sp udupi

‘ವಿದ್ಯಾರ್ಥಿನಿಯರ ಮೊಬೈಲ್ ಅನ್ನು ಕಾಲೇಜಿನವರೇ ಜು.22ರಂದು ನಮಗೆ ಹಸ್ತಾಂತರಿಸಿ, ವಿಡಿಯೋ ವೈರಲ್ ಮಾಡಲಾಗಿದೆಯೇ ಎಂದು ಪರಿಶೀಲಿಸಲು ತಿಳಿಸಿದ್ದರು. ಅದು ವೈರಲ್ ಆಗಿಲ್ಲ ಅಂತ ನಮ್ಮ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೇ ನಮ್ಮಲ್ಲಿ ಇಲ್ಲ. ಇಲಾಖೆ ಮೇಲೆ ಯಾವುದೇ ಒತ್ತಡ ಯಾರಿಂದಲೂ ಇಲ್ಲ’ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ತಿಳಿಸಿದರು.

ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ರೀತಿಯ ತನಿಖೆಯನ್ನು ನಡೆಸಿ ತಪ್ಪಿತಸ್ಥರ ಮೇಲೆ ಕಾನೂನಾತ್ಮಕ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಎಬಿವಿಪಿಯವರು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಆಗಮಿಸಿದಾಗ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ತಳ್ಳಾಟ ನೂಕಾಟವೂ ನಡೆದಾಗ, ಸ್ಥಳದಲ್ಲಿ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಇಂದು ಪ್ರತಿಭಟನೆ ನಡೆಸಿದ ಬಿಜೆಪಿ ಮಹಿಳಾ ಮೋರ್ಚಾ, ಪ್ರಕರಣದ ಬಗ್ಗೆ ಸಿಐಡಿ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

bjp protest 2

‘ಇದು ಇಡೀ ಸಮಾಜ ತಲೆತಗ್ಗಿಸುವ ಅತ್ಯಂತ ಖೇದಕರ ಘಟನೆ. ಶೌಚಾಲಯದಲ್ಲಿ, ಬಾತ್‌ರೂಂನಲ್ಲಿ ಕ್ಯಾಮೆರಾ ಇಟ್ಟು ವಿಡಿಯೋ ಮಾಡಿರುವುದು ನಾಚಿಕೆಗೇಡಿನ ಸಂಗತಿ. ವಿಳಂಬವಾಗಿ ಎಫ್‌ಐಆರ್ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಷಡ್ಯಂತ್ರ ನಡೆಸಲಾಗಿದೆ’ ಎಂದು ಆರೋಪಿಸಿದರು.

ಹಣೆಗೆ ಕಪ್ಪು ಪಟ್ಟಿ ಧರಿಸಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ಪರಿಷತ್ ಸದಸ್ಯ ಎಂ ಎನ್ ರವಿಕುಮಾರ್, ಮಹಿಳಾ ಮೋರ್ಚಾದ ಆಶಾ ರಾವ್, ರೇಖಾ ಗೋವಿಂದ, ವಿಜಯಲಕ್ಷ್ಮೀ ಆನಂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...