ಕಾವೇರಿ ವಿಚಾರದಲ್ಲಿ ನಾನು ಯಾವುದೇ ಸಲಹೆ ಕೊಡಲ್ಲ: ಹೆಚ್‌ ಡಿ ದೇವೇಗೌಡ

Date:

  • ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರೀಯ ಅಧ್ಯಕ್ಷರು, ನನ್ನ ಬಾಯಲ್ಲಿ ಅವರ ಬಗ್ಗೆ ಮಾತು ಬೇಡ
  • ಸಮಸ್ಯೆ ತಿಳಿಯಲು ರಾಜ್ಯದ ಅಧಿಕಾರಿಗಳನ್ನು ಕಳಿಸುವಂತೆ ರಾಜ್ಯಸಭೆಯಲ್ಲೇ ಹೇಳಿದ್ದೇನೆ

ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಕಾವೇರಿ ನದಿ ವಿಚಾರದಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದೇನೆ. ಆದರೆ, ಈ ವಿಚಾರದಲ್ಲಿ ನಾನು ಯಾವುದೇ ಸಲಹೆ ಕೊಡಲ್ಲ. ಸುಪ್ರೀಂಕೋರ್ಟ್​ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಈಗ ನಾನು ಏನೂ ಮಾತಾಡಲ್ಲ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್‌ ವರಿಷ್ಠ ಹೆಚ್‌ ಡಿ ದೇವೇಗೌಡ ತಿಳಿಸಿದರು.

ದೆಹಲಿಯ ಸಫ್ದರ್​ಜಂಗ್ ಲೇನ್​ನಲ್ಲಿರುವ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನೀರು ಬಿಟ್ಟಿದ್ದು ತಪ್ಪು ಅಂತಾ ಪಕ್ಷದ ಪರ ಹೆಚ್ ​​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕಾವೇರಿ ವಿಚಾರವಾಗಿ ವಸ್ತುಸ್ಥಿತಿ ಅರಿಯಲು ಬೇರೆ ರಾಜ್ಯದ ಅಧಿಕಾರಿಗಳನ್ನು ಕಳಿಸುವಂತೆ ರಾಜ್ಯಸಭೆಯಲ್ಲೇ ಸಲಹೆ ನೀಡಿದ್ದೇನೆ” ಎಂದರು.

“ಕಾವೇರಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಎಂಎಲ್​ಸಿ ಒಬ್ಬರನ್ನು ನನ್ನ ಬಳಿ ಕಳಿಸಿದ್ದರು. ನನ್ನ ಸಹಕಾರ ಇದೆ ಎಂದು ಹೇಳಿದ್ದೆ. ನಾನು ಸಂಸದರ ಸಭೆಯಲ್ಲಿ ಪಾಲ್ಗೊಳ್ಳಲು ಆಗಿಲ್ಲ. ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾವೇರಿ ಹೋರಾಟ | ಕಾವೇರಿ ನದಿಗಿಳಿದು ರೈತರ ಪ್ರತಿಭಟನೆ

“ರಾಜ್ಯಸಭೆಯಲ್ಲಿ ಕಾವೇರಿ ವಿಚಾರದಲ್ಲಿ ನಾನೊಬ್ಬನೆ ಮಾತನಾಡಿದೆ. ಮಲ್ಲಿಕಾರ್ಜುನ ಖರ್ಗೆ ಏಕೆ ಮಾತನಾಡಲಿಲ್ಲ ಎಂಬ ಪ್ರಶ್ನೆಗೆ ಈ ಬಗ್ಗೆ ನನ್ನ ಬಾಯಲ್ಲಿ ಏನೇನೋ ಹೇಳಿಸಬೇಡಿ. ಅವರೊಬ್ಬರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು” ಎಂದಷ್ಟೇ ಹೇಳಿದರು.

ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಮನಮೋಹನ್​ ಸಿಂಗ್ ಅವರ ಕೇಂದ್ರ​​ ಸರ್ಕಾರದಲ್ಲಿ ಕರ್ನಾಟಕದ ನಾಲ್ಕು ಜನ ಮಂತ್ರಿಗಳಿದ್ದರು. ಅವಾಗ ಕಾವೇರಿ ವಿಚಾರವಾಗಿ ಮಾತನಾಡಿದ್ರಾ” ಎಂದು ಪ್ರಶ್ನಿಸಿದರು.

ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, “ಬಿಜೆಪಿ-ಜೆಡಿಎಸ್​ ಮೈತ್ರಿ ವಿಚಾರದ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಈ ಹಿಂದೆಯೇ ಹೇಳಿದ್ದೇನೆ. ಮೈತ್ರಿ ವಿಚಾರದ ಬಗ್ಗೆ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಮಾತನಾಡುತ್ತಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...