‘ನನ್ನ ಕಿಡ್ನಿ ಮಾರಿದ್ದೇನೆ, ಮಕ್ಕಳ ಕಿಡ್ನಿಯನ್ನೂ ಮಾರುವಂತೆ ಒತ್ತಾಯಿಸುತ್ತಿದ್ದಾರೆ’; ಮೈಕ್ರೋಫೈನಾನ್ಸ್‌ ಕಿರುಕುಳ ಬಿಚ್ಚಿಟ್ಟ ಮಹಿಳೆ

Date:

ಮೈಕ್ರೋಫೈನಾನ್ಸ್‌ನಿಂದ ಪಡೆದಿದ್ದ ಸಾಲ ತೀರಿಸಲು ನಾನು ನನ್ನ ಕಿಡ್ನಿ ಮಾರಿದ್ದೇನೆ. ಆದರೂ, ಸಾಲದಾತರು ಸಾಲ ಮುಗಿದಿಲ್ಲ ಎನ್ನುತ್ತಿದ್ದಾರೆ. ನನ್ನ ಇಬ್ಬರು ಹೆಣ್ಣುಮಕ್ಕಳ ಕಿಡ್ನಿಗಳನ್ನೂ ಮಾರಾಟ ಮಾಡಿ, ಹಣ ಪಾವತಿಸುವಂತೆ ಮೈಕ್ರೋಫೈನಾನ್ಸ್‌ ಏಜೆಂಟರು ಒತ್ತಾಯಿಸುತ್ತಿದ್ದಾರೆ ಎಂದು ರಾಮನಗರ ಜಿಲ್ಲೆಯ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಜಿಲ್ಲೆಯ ಮಾಗಡಿ ಪಟ್ಟದ ನಿವಾಸಿ, ಕೃಷಿ ಕಾರ್ಮಿಕ ಮಹಿಳೆ ಗೀತಾ ಅವರು ಮೈಕ್ರೋಫೈನಾನ್ಸ್‌ ನೀಡುತ್ತಿರುವ ಕಿರುಕುಳದ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. “2013ರಲ್ಲಿ ತನ್ನ ಪತಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆಗ, ಮೈಕ್ರೋಫೈನಾನ್ಸ್‌ ನಡೆಸುತ್ತಿದ್ದ ಮಂಜುನಾಥ್ ಎಂಬಾತ ತಮಗೆ 2.5 ಲಕ್ಷ ರೂ. ಸಾಲ ನೀಡಿದ್ದರು. ಆದರೆ, ಚಿಕಿತ್ಸೆ ಫಲಿಸದೆ ತಮ್ಮ ಪತಿ ಸಾವನ್ನಪ್ಪಿದರು. ಜೀವನ ನಡೆಸುವುದೇ ಕಷ್ಟವಾಗಿತ್ತು. ಹೀಗಿದ್ದರೂ, ಕಷ್ಟದಿಂದ ದುಡಿತು ಇಬ್ಬರು ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿಸಿ, ಮದುವೆ ಮಾಡಿದ್ದೇನೆ” ಎಂದು ಮಹಿಳೆ ಹೇಳಿದ್ದಾರೆ.

“ಸಾಲ ನೀಡಿದ್ದ ಮಂಜುನಾಥ್ ಸಾಲ ಮರುಪಾವತಿ ಮಾಡುವಂತಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಸಾಲ ತೀರಿಸಲು ಕಿಡ್ನಿ ಮಾರುವಂತೆ ಒತ್ತಾಯಿಸಿದರು. ಅವರೇ ಆಸ್ಪತ್ರೆಗೆ ಕರೆದೊಯ್ದು ಕಡ್ನಿ ಮಾರಿಸಿದರು. ಮೂರು ವರ್ಷಗಳ ಹಿಂದೆ, ನನ್ನ ಒಂದು ಕಿಡ್ನಿಯನ್ನು 2.5 ಲಕ್ಷ ರೂ.ಗೆ ಮಾರಾಟ ಮಾಡಿ, ಸಾಲ ಮರುಪಾವತಿ ಮಾಡಿದ್ದೇನೆ. ಆದರೆ, ಈಗ ಕೆಲವು ವಾರಗಳಿಂದ ಮಂಜುನಾಥ್ ಮತ್ತೆ ಹಣ ಪಾವತಿ ಮಾಡಬೇಕೆಂದು ಕೇಳುತ್ತಿದ್ದಾರೆ” ಎಂದು ಮಹಿಳೆ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಇನ್ನಾವುದೇ ಹಣವನ್ನು ನೀಡುವುದಿಲ್ಲ ಎಂದು ಪ್ರತಿಭಟಿಸಿದೆ. ಆದರೆ, ಅವರು ನನ್ನ ಇಬ್ಬರು ವಿವಾಹಿತ ಹೆಣ್ಣುಮಕ್ಕಳಿಗೆ ಅವರ ಕಿಡ್ನಿಯನ್ನು ಮಾರಾಟ ಮಾಡಲು ಮನವೊಲಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಆದರೆ, ನಾನು ಅವರೊಂದಿಗೆ ಜಗಳ ಮಾಡಿದ್ಧೇನೆ. ಇನ್ನಾವುದೇ ಸಾಲವೂ ಉಳಿದಿಲ್ಲವೆಂದು ನಿರಕಾರಿಸಿದ್ದೇನೆ” ಎಂದು ಮಹಿಳೆ ಹೇಳಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...