ಮಂಗಳೂರು ಜೆರೋಸಾ ಶಾಲೆ ವಿವಾದ: ತನಿಖೆ ಆರಂಭಿಸಿದ ಐಎಎಸ್ ಅಧಿಕಾರಿ ಆಕಾಶ್ ಶಂಕರ್

Date:

ಮಂಗಳೂರು ಜೆರೋಸಾ ಶಾಲೆಯಲ್ಲಿ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾರೆಂಬ ಆರೋಪದ ಬಗ್ಗೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ. ಆಕಾಶ್ ಶಂಕರ್ ಮಂಗಳೂರಿಗೆ ಸೋಮವಾರ ಆಗಮಿಸಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಡಿಡಿಪಿಐ, ಬಿಇಓ ಮತ್ತು ಇಲಾಖೆಯ ಇತರ ಅಧಿಕಾರಿಗಳು ಈವರೆಗೆ ಆಗಿರುವ ಬೆಳವಣಿಗೆಯ ಬಗ್ಗೆ ತನಿಖಾಧಿಕಾರಿ ಮುಂದೆ ಮಾಹಿತಿ ನೀಡಿದ್ದಾರೆ. ಮಂಗಳೂರಿನ ಜಿಲ್ಲಾ ಪಂಚಾಯತ್ ಬಳಿಯ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳನ್ನು ಒಬ್ಬೊಬ್ಬರನ್ನೇ ಕರೆದು ಮಾಹಿತಿ ಸಂಗ್ರಹಿಸಿದ್ದಾರೆ.

ಆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಡಾ. ಆಕಾಶ್ ಶಂಕರ್, “ತನಿಖೆಯ ಹಂತದಲ್ಲಿ ಯಾವುದನ್ನೂ ಹೇಳಲಾಗದು. ಯಾವ ರೀತಿ ತನಿಖೆ ನಡೆಸಬೇಕು ಎಂಬುದರ ಬಗ್ಗೆ ನಾನು ಯೋಜನೆ ಹಾಕಿಕೊಂಡಿದ್ದೇನೆ. ಎರಡು ದಿನ ಇಲ್ಲೇ ಇರುತ್ತೇನೆ. ಯಾವ ರೀತಿಯ ತನಿಖೆ ಎನ್ನುವುದನ್ನು ಬಹಿರಂಗವಾಗಿ ಹೇಳುವುದಕ್ಕಾಗುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲೆಯ ಶಿಕ್ಷಕರು, ಮಕ್ಕಳನ್ನು ಮಾತನಾಡಿಸುತ್ತೀರಾ ಎಂದು ಪತ್ರಕರ್ತರು ಕೇಳಿದ್ದಕ್ಕೆ, “ಅದನ್ನು ಯಾವುದನ್ನೂ ಹೇಳುವುದಿಲ್ಲ. ಸತ್ಯಾನ್ವೇಷಣೆಗೆ ಬಂದಿದ್ದೇನೆ. ಆದಷ್ಟು ವೇಗ ತನಿಖೆ ಪೂರ್ಣಗೊಳಿಸಿ, ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ. ಎಲ್ಲರೂ ತನಿಖೆಗೆ ಸಹಕರಿಸಬೇಕು” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು ಪ್ರಕರಣ | ಬಿಜೆಪಿ ಶಾಸಕರ ಮೇಲಿನ ಎಫ್‌ಐಆರ್ ಖಂಡಿಸಿ ರಸ್ತೆ ತಡೆ: ಸಂಘಪರಿವಾರದ ಕಾರ್ಯಕರ್ತರ ಬಂಧನ

ಜೆರೋಸಾ ಶಾಲೆಯ ವಿಚಾರದಲ್ಲಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಪ್ರತಿಭಟನೆ ನಡೆಸಿರುವುದು, ಶಾಲೆಯಲ್ಲಿ ಹಿಂದೂ ದೇವರ ಅವಹೇಳನ ಮಾಡಿದ್ದಾರೆಂದು ಶಿಕ್ಷಕಿ ವಿರುದ್ಧ ಕೇಳಿಬಂದ ಆರೋಪದ ಬಗ್ಗೆ ಹಾಗೂ ಒಟ್ಟು ಬೆಳವಣಿಗೆ ತನಿಖೆಗೆ ಗುಲ್ಬರ್ಗ ವಿಭಾಗದ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ್ ಶಂಕರ್ ಅವರನ್ನು ಸರ್ಕಾರ ನೇಮಿಕಗೊಳಿಸಿ, ಆದೇಶಿಸಿತ್ತು.

ಎಫ್‌ಐಆರ್ ಖಂಡಿಸಿ ರಸ್ತೆ ತಡೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರು

ಈ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರವೇಶ ಮಾಡಿ ವಿದ್ಯಾರ್ಥಿಗಳನ್ನು ಪ್ರಚೋದಿಸಿದ್ದ ಬಿಜೆಪಿ ಶಾಸಕರು, ಹಿಂದೂ ಸಂಘಟನೆಯ ಪ್ರಮುಖರ ಮೇಲೆ ಎಫ್‌ಐಆರ್ ದಾಖಲು ಮಾಡಿರುವುದನ್ನು ಖಂಡಿಸಿ ಸಂಘಪರಿವಾರದ ಕಾರ್ಯಕರ್ತರು ಮಂಗಳೂರಿನಲ್ಲಿ ದಿಡೀರ್ ರಸ್ತೆ ತಡೆ ನಡೆಸಲು ಯತ್ನಿಸಿದ ಘಟನೆ ನಡೆದಿತ್ತು. ಎಲ್ಲರನ್ನೂ ಪೊಲೀಸರು ಬಂಧಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...