ಮೈಸೂರು | ವ್ಯಸನ ಮುಕ್ತ ಜೀವನಕ್ಕೆ ಆದರ್ಶ ಮೌಲ್ಯಗಳು ಅಡಿಗಲ್ಲಾಗಬೇಕು : ಡಾ. ಜೆ. ಲೋಹಿತ್

Date:

ಮೈಸೂರು ನಗರದ ಹೆಬ್ಬಾಳಿನಲ್ಲಿ ಇರುವ ಬಸವಮಾರ್ಗ ವ್ಯಸನ ಮುಕ್ತ ಕೇಂದ್ರದ ವತಿಯಿಂದ ಆಯೋಜಿಸಿದ್ದ ‘ ಜೀವನ ಉತ್ಸಾಹ ‘ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ವಿಶ್ವ ವಿದ್ಯಾನಿಲಯದ ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕರಾದ ಡಾ.ಜೆ. ಲೋಹಿತ್ ಮಾತನಾಡಿ ‘ ವ್ಯಸನ ಮುಕ್ತ ಜೀವನಕ್ಕೆ ಆದರ್ಶ ಮೌಲ್ಯಗಳು ಅಡಿಗಲ್ಲಾಗಬೇಕು ‘ ಎಂದರು.

” ನಮ್ಮ ಬದುಕಿಗೆ ನಾವೇ ಶಿಲ್ಪಿಗಳಾಗಿದ್ದು, ವ್ಯಸನ ಮುಕ್ತ ಜೀವನಕ್ಕೆ ಆದರ್ಶ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸದಾ ಚಂಚಲವಾಗಿರುವ ಮನಸನ್ನು ಹಿರಿಯರು ಮರ್ಕಟಕ್ಕೆ ಹೋಲಿಕೆ ಮಾಡಿದ್ದಾರೆ. ಮನಸ್ಸು ಮತ್ತು ಬುದ್ದಿ ನಮ್ಮ ಹಿಡಿತದಲ್ಲಿ ಇರಬೇಕು. ಒಂದು ವೇಳೆ ಆ ಮನಸ್ಸು ನಮ್ಮ ಹಿಡಿತದಲ್ಲಿ ಇಲ್ಲ ಎಂದರೆ ಬದುಕು ಸೂತ್ರ ಕಿತ್ತ ಗಾಳಿಪಟದಂತೆ ಹಾರಾಡುತ್ತದೆ. ವ್ಯಸನಕ್ಕೆ ಬಲಿಯಾದವರಲ್ಲಿ ನಕಾರಾತ್ಮಕ ಯೋಚನೆಗಳು ಬರುವುದು ಸಹಜ. ಆದರೆ, ಸಕಾರಾತ್ಮಕ ಯೋಚನೆ ಬೆಳಸಿಕೊಳ್ಳಲು ಹಾಗೂ ಉತ್ತಮ ಬದುಕು ಕಲ್ಪಿಸಿಕೊಳ್ಳುವುದಕ್ಕೂ ಅವಕಾಶ ಇದೆ ಎನ್ನುವುದನ್ನು ಮರೆಯಬಾರದು. ಆ ಭರವಸೆಯನ್ನು ನಾವು ಎಂದಿಗೂ ಕಳೆದುಕೊಳ್ಳಬಾರದು ” ಎಂದು ಉತ್ಸಾಹ ತುಂಬಿದರು.

” ಜೀವನದ ನಿಜವಾದ ಉದ್ದೇಶವನ್ನು ನಾವು ಅರ್ಥಮಾಡಿಕೊಳ್ಳಬೇಕು. ಸರಿಯಾದ ಮಾರ್ಗದಲ್ಲಿ ಜೀವನ ನಡೆಸಬೇಕು. ಇತರರಿಗೆ ಮಾದರಿಯಾಗಿ ಬಾಳಬೇಕು. ಇದಕ್ಕೆ ನಮ್ಮ ಅರಿವನ್ನು ಹೆಚ್ಚಿಸಿಕೊಳ್ಳಬೇಕು. ಉತ್ತಮ ಗೆಳೆಯರ ಸಹವಾಸ ಮಾಡಬೇಕು. ಉತ್ತಮ ಪುಸ್ತಕಗಳನ್ನು ಓದವೇಕು. ಬದಲಾವಣೆಗೆ ಸಿಕ್ಕಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಬದುಕನ್ನು ಸವಾಲಾಗಿ ಸ್ವೀಕಾರ ಮಾಡಿ ವ್ಯಸನದಿಂದ ಹೊರ ಬಂದು ಸಮಾಜಕ್ಕೆ ಆಸ್ತಿಯಾಗಿ ಬಾಳಬೇಕು ” ಎಂದು ಮಾರ್ಗದರ್ಶನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವ್ಯಸನಕ್ಕೆ ಬಲಿಯಾದವರನ್ನು ಮತ್ತೆ ಸಮಾಜ ಸ್ವೀಕಾರ ಮಾಡುವುದಿಲ್ಲ. ನಂಬುವುದಿಲ್ಲ. ಅವರನ್ನು ನೋಡುವ ದೃಷ್ಟಿಕೋನವೇ ಬದಲಾಗಿಬಿಡುತ್ತದೆ. ಸಮಾಜ ನಮ್ಮನ್ನು ಅನುಮಾನದಿಂದಲೇ ನೋಡುತ್ತದೆ ಎಂದು ಬಹುತೇಕ ವ್ಯಸನಿಗಳು ಹೇಳುತ್ತಾರೆ. ಇದು ಸಹಜ. ಇಷ್ಟು ದಿನ ನಾವು ವ್ಯಸನದಿಂದ ಹಲವಾರು ಸಮಸ್ಯೆ, ಅವಾಂತರಗಳನ್ನು ಸೃಷ್ಟಿ ಮಾಡಿರುತ್ತೇವೆ. ಸುಲಭವಾಗಿ ಯಾರೂ ಕೂಡ ನಮ್ಮನ್ನು ನಂಬುವುದಿಲ್ಲ. ಆದರೆ, ಇತರರಲ್ಲಿ ಆ ನಂಬಿಕೆಯನ್ನು ಮೂಡಿಸುವುದಕ್ಕೆ ನಿಮ್ಮ ಪ್ರಮಾಣಿಕ ಪ್ರಯತ್ನ ನಿರಂತರವಾಗಿ ಇರಬೇಕು. ಒಂದಲ್ಲ ಒಂದು ದಿ‌ನ ಸಮಾಜ ನಿಮ್ಮನ್ನು ನಂಬುತ್ತದೆ, ಒಪ್ಪುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಸಮತೋಲನ ನಿವಾರಣೆ ಕುರಿತು ಪರಾಮರ್ಶೆ : ಪ್ರೊ. ಎಂ ಗೋವಿಂದ ರಾವ್

ಕಾರ್ಯಕ್ರಮದಲ್ಲಿ ಸಂಸ್ಥೆಯ ಯೋಗ‌ ಶಿಕ್ಷಕ ಎಚ್.ಪಿ. ನವೀನ್ ಕುಮಾರ್, ವ್ಯವಸ್ಥಾಪಕ ಸಂಜಯ್, ರವೀಂದ್ರ, ಮಹೇಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...