ವಸತಿ ಇಲಾಖೆಯಲ್ಲಿ ಲಂಚ ಪಡೆದವರನ್ನು ಪತ್ತೆ ಹಚ್ಚಿ: ಲೋಕಾಯುಕ್ತಕ್ಕೆ ನೈಜ ಹೋರಾಟಗಾರರ ವೇದಿಕೆ ದೂರು

Date:

ಕೆಲವು ದಿನಗಳ ಹಿಂದೆ ವಸತಿ ಯೋಜನೆಯಡಿ ಮನೆ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರ ಆರೋಪದ ಬಗ್ಗೆ ಸೂಕ್ತವಾದ ತನಿಖೆ ನಡೆಸಬೇಕು ಹಾಗೂ ಸರ್ಕಾರದ ಸೇವೆಯನ್ನು ಪಡೆಯಲು ಲಂಚ ಪಡೆಯುವ ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳು ಯಾರೆಂದು ಗುರುತಿಸಿ ಅವರಿಗೆ ಕಾನೂನಿನ ಚೌಕಟ್ಟಿನೊಳಗಡೆ ಶಿಕ್ಷೆಗೆ ಒಳಪಡಿಸ ಬೇಕು ಎಂದು ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ.

ಈ ಬಗ್ಗೆ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ದೂರನ್ನು ಸಲ್ಲಿಸಿರುವ ವೇದಿಕೆಯ ಮುಖಂಡರಾದ ಹೆಚ್ ಎಂ ವೆಂಕಟೇಶ್ ನೇತೃತ್ವದ ನಿಯೋಗವು, ನಮ್ಮ ದೂರನ್ನು ಆಧರಿಸಿ ಪ್ರಥಮ ವರ್ತಮಾನ ವರದಿಯನ್ನು ದಾಖಲಿಸಿ ತನಿಖೆಯನ್ನು ನಡೆಸಬೇಕು ಎಂದು ಒತ್ತಾಯಿಸಿದೆ.

ಸರ್ಕಾರದ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಳಂದ ಕ್ಷೇತ್ರದ ಶಾಸಕರಾದ ಬಿ. ಆರ್ ಪಾಟೀಲ್ ಅವರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಕಾರ್ಯದರ್ಶಿ ಸರ್ಫರಾಜ್ ಜೊತೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆನ್ನಲಾದ ಆಡಿಯೋ ರಾಜ್ಯದಾದ್ಯಂತ ಸಂಚಲನವನ್ನುಂಟುಮಾಡಿ ಈಗ ಸುದ್ದಿಯಲ್ಲಿದೆ. ಇದರಲ್ಲಿ ಬಹಳ ಪ್ರಮುಖವಾಗಿ ರಾಜೀವ್ ಗಾಂಧಿ ವಸತಿ ನಿಗಮದಿಂದ ದೀನ ದುರ್ಬಲರಿಗೆ ವಸತಿ ಹೀನರಿಗೆ ಸರ್ಕಾರ ಹಂಚಿಕೆ ಮಾಡುವ ಮನೆಗಳನ್ನು ಪಡೆದುಕೊಳ್ಳಲು ಹಣ ಕೊಟ್ಟರೆ ಮಾತ್ರ ಹಂಚಿಕೆಯಾಗುತ್ತದೆ ಎಂಬ ಸಂಭಾಷಣೆ ನಡೆದಿರುವುದು ಅತ್ಯಂತ ಆಘಾತಕಾರಿಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2024 09 19 103603
ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್

ಬಿ ಆರ್ ಪಾಟೀಲ್ ಅವರು ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಹಾಗೂ ಸರ್ಕಾರದ ಅಂಗವಾದ ನೀತಿ ಆಯೋಗದ (ಯೋಜನಾ ಆಯೋಗ) ಉಪಾಧ್ಯಕ್ಷರಾಗಿಯು ಸೇವೆ ಸಲ್ಲಿಸುತ್ತಿದ್ದಾರೆ. ಇವರ ಈ ಹೇಳಿಕೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭ್ರಷ್ಟಾ ಆಡಳಿತದ ಅಂಶ ಚರ್ಚೆಯಾಗಿರುವುದು ಅಘಾತಕಾರಿಯಾಗಿದೆ. ಲಂಚ ಕೊಟ್ಟವರಿಗೆ ಮಾತ್ರ ಮನೆ ಹಂಚಿಕೆಯಾಗುತ್ತದೆ ಎಂದು ಬಿ ಆರ್ ಪಾಟೀಲ್ ಅವರು ಹೇಳಿರುವುದು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ಹೇಳಿಕೆ ಯಾವುದೇ ಜನಸಾಮಾನ್ಯ ವ್ಯಕ್ತಿ ಹೇಳಿಕೆಯಲ್ಲ. ಇದು ಜವಾಬ್ದಾರಿಯುತಾ ಸ್ನಾನದಲ್ಲಿರುವ ಕಾನೂನುಗಳನ್ನು ರೂಪಿಸುವ ಮತ್ತು ಯೋಜನೆಗಳನ್ನು ರೂಪಿಸಿ ಜಾರಿಗೆ ತರುವ ನೀತಿ ಆಯೋಗದ ಉಪಾಧ್ಯಕ್ಷರಾಗಿರುವ ಬಿಆರ್ ಪಾಟೀಲ್ ಅವರು ಹೇಳಿರುವುದನ್ನು ನಾವೆಲ್ಲರೂ ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

ಭ್ರಷ್ಟಾಚಾರದ ಆಡಿಯೋ ಸಂಭಾಷಣೆ ಮತ್ತು ಮಾಧ್ಯಮಗಳ ವರದಿಯು ಜನರ ನಡುವೆ ಚರ್ಚೆಗೆ ಗ್ರಾಸವಾಗುತ್ತಿದ್ದರೂ ಸಹ ಸಂಭಾಷಣೆಯಲ್ಲಿ ಭಾಗಿಯಾಗಿರುವವರನ್ನು ಪತ್ತೆ ಮಾಡಲು ಸರ್ಕಾರದ ಅಧಿಕಾರಿ ಸರ್ಫ್ ರಾಜ್ ಖಾನ್ ಅಥವಾ ಜನಪ್ರತಿನಿಧಿಗಳಾದ ಬಿ ಆರ್ ಪಾಟೀಲ್ ಈವರೆಗೂ ದೂರು ದೂರು ನೀಡಿಲ್ಲ. ಭ್ರಷ್ಟಾಚಾರದ ಈ ಸಂಭಾಷಣೆ ವಸತಿ ಇಲಾಖೆಯಲ್ಲಿನ ಇಡೀ ರಾಜ್ಯದಾದ್ಯಂತ ಪ್ರಸಾರವಾದರೂ ಸಹ ಸರ್ಕಾರವು ಕೂಡ ಈ ಬಗ್ಗೆ ತನಿಖೆಗೆ ಮುಂದಾಗಿಲ್ಲ. ಮುಖ್ಯವಾಗಿ ಭ್ರಷ್ಟಾಚಾರವನ್ನು ತಡೆಗಟ್ಟಬೇಕಾದ ಲೋಕಾಯುಕ್ತ ಸಂಸ್ಥೆಯು ಸ್ವಯಂ ಪ್ರೇರಿತವಾಗಿ ದೂರನ್ನು ದಾಖಲಿಸಿ ತನಿಖೆಗೆ ಮುಂದಾಗದೆ ಇರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತವು ಜನಪ್ರತಿನಿಧಿಗಳು ಮತ್ತು ಸರ್ಕಾರದ ಅಧಿಕಾರಿಗಳು ಕರ್ತವ್ಯ ಲೋಪ ಮತ್ತು ಲಂಚ ಪ್ರಕರಣದಲ್ಲಿ ಭಾಗಿಯಾದಾಗ ಅವರನ್ನು ತನಿಖೆಗೆ ಒಳಪಡಿಸಿ ಸತ್ಯಾಸತ್ಯತೆಯನ್ನು ಹೊರಗೆ ತಂದು ತಪ್ಪಿತಸ್ಥರಿಗೆ ಶಿಕ್ಷೆ ಕೊಡಲು ಈ ಸಂಸ್ಥೆಯನ್ನು 1984ರಲ್ಲಿ ರಾಜ್ಯ ಸರ್ಕಾರವು ಹುಟ್ಟು ಹಾಕಿದೆ. ಆದುದರಿಂದ ಸರ್ಕಾರದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಈ ಸಂಭಾಷಣೆಯ ಬಗ್ಗೆ ಲೋಕಾಯುಕ್ತ ಸಂಸ್ಥೆಯು ತಕ್ಷಣ ಮಧ್ಯ ಪ್ರವೇಶಿಸಿ ಕಾನೂನು ಕ್ರಮಗಳನ್ನು ಜರುಗಿಸಬೇಕೆಂದು ನೈಜ ಹೋರಾಟಗಾರರ ವೇದಿಕೆಯಿಂದ ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ಸಾಬರ ಹೆಸ್ರಿಗೆ ಜಮೀನು ಮಾಡಿದ್ರೆ ನೇಣಿಗೆ ಹಾಕೋದು ಗ್ಯಾರಂಟಿ: ದ್ವೇಷ ಹರಡಿದ ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ!

ಆಡಿಯೋ ಸಂಭಾಷಣೆಯಲ್ಲಿ ಬಿ ಆರ್ ಪಾಟೀಲ್ ಅವರು ನಾನು ಸಂಪೂರ್ಣವಾಗಿ ಬಾಯಿಬಿಟ್ಟರೆ ಸರ್ಕಾರವೇ ಅಲುಗಾಡುತ್ತದೆ ಎಂದು ಹೇಳಿದ್ದಾರೆ. ಆದುದರಿಂದ ಈ ಸಂಭಾಷಣೆಯನ್ನು ಅತ್ಯಂತ ಆಳವಾಗಿ ತನಿಖೆಗೆ ಒಳಪಡಿಸಬೇಕಾದ ಅಗತ್ಯತೆ ಇದೆ. ಪಂಚಾಯಿತಿಯ ಅಧ್ಯಕ್ಷರು ಪತ್ರ ತೆಗೆದುಕೊಂಡು ಹೋಗಿ ಲಂಚ (ಹಣ) ಕೊಟ್ಟರೆ ಅವರು ಹೇಳಿದ ವ್ಯಕ್ತಿಗಳಿಗೆ ಮನೆಗಳು ಮಂಜೂರಾಗುತ್ತವೆ. ನನ್ನ ಪತ್ರಕ್ಕೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ ಎಂಬ ಅರ್ಥದಲ್ಲಿ ಹೇಳಿರುತ್ತಾರೆ. ಲಂಚ ಪಡೆಯುವ ಅಧಿಕಾರಿ ಯಾರು? ಲಂಚ ಕೊಡುವವರು ಯಾರು? ಎಂಬುದನ್ನು ಆಳವಾಗಿ ತನಿಖೆ ನಡೆಸಿ, ಸರ್ಕಾರದ ಸೇವೆಯನ್ನು ಪಡೆಯಲು ಲಂಚ ಪಡೆಯುವ ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳು ಯಾರೆಂದು ಗುರುತಿಸಬೇಕು. ಅವರನ್ನು ಕಾನೂನಿನ ಚೌಕಟ್ಟಿನೊಳಗಡೆ ಶಿಕ್ಷೆಗೆ ಒಳಪಡಿಸಬೇಕು ಮತ್ತು ಈ ದೂರನ್ನು ಆಧರಿಸಿ ಎಫ್‌ಐಆರ್ ಅನ್ನು ದಾಖಲಿಸಿ ತನಿಖೆ ನಡೆಸಬೇಕೆಂದು ನೈಜ ಹೋರಾಟಗಾರರ ವೇದಿಕೆಯು ಕರ್ನಾಟಕ ಲೋಕಾಯುಕ್ತ ಪೊಲೀಸರನ್ನು ಆಗ್ರಹಿಸಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ನೈಜ ಹೋರಾಟಗಾರರ ವೇದಿಕೆಯ ಮುಖಂಡರಾದ ಬಿ ಎಸ್ ಲೋಕೇಶ್ ಹಾಗೂ ಎಂ ಜಗದೀಶ್ ಅವರು ನಿಯೋಗದಲ್ಲಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...