ಇದ್ರೀಸ್‌ ಕುಟುಂಬಕ್ಕೆ ₹25 ಲಕ್ಷ ಪರಿಹಾರ: ಸಿಎಂ ವಿರುದ್ಧ ಪುನೀತ್‌ ಕೆರೆಹಳ್ಳಿ ವಾಗ್ದಾಳಿ, ವಿಡಿಯೋ ವೈರಲ್

Date:

ಇದ್ರೀಸ್‌ ಪಾಷಾ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರವನ್ನು ಸರಕಾರದಿಂದ ನೀಡಿರುವುದಕ್ಕೆ, ಇದ್ರೀಸ್‌ ಪಾಷಾ ಹತ್ಯೆಯ ಪ್ರಮುಖ ಆರೋಪಿ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಯಬಿಟ್ಟಿರುವ ವಿಡಿಯೋ ವೈರಲ್ ಆಗಿದೆ.

ಆರು ನಿಮಿಷ ಮಾತನಾಡಿರುವ ವಿಡಿಯೋವನ್ನು ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿರುವ ಆರೋಪಿ ಪುನೀತ್‌ ಕೆರೆಹಳ್ಳಿ “ನಮ್ಮ ತೆರಿಗೆ ಹಣವನ್ನು ಯಾವ ಆಧಾರದಲ್ಲಿ, ಯಾವ ಕಾರಣಕ್ಕೆ ಇದ್ರೀಸ್‌ ಕುಟುಂಬಕ್ಕೆ ಕೊಟ್ರಿ? ನ್ಯಾಯಾಲಯ ಕೊಲೆ ಎಂದು ತೀರ್ಮಾನಿಸುವ ಮುನ್ನ ನೀವೇಕೆ 25 ಲಕ್ಷ ಕೊಟ್ರಿ? ನೀವು ಪ್ರಚೋದನೆ ಮಾಡುತ್ತಿದ್ದೀರಾ?” ಎಂದು ಸಿಎಂಗೆ ಪ್ರಶ್ನಿಸಿದ್ದಾನೆ.

“ಅಕ್ರಮವಾಗಿ 17 ಜಾನುವಾರು ಸಾಗಾಟ ಮಾಡಿದ್ದು ಅಕ್ರಮ ಅಲ್ವ? ಸಿದ್ದರಾಮಯ್ಯನವರೇ ರಾಜ್ಯದ ಮುಖ್ಯಮಂತ್ರಿಯಾಗಿ ಏನು ಮಾಡ್ತಿದ್ದೀರಾ? ಯಾಕೆ ಗೋರಕ್ಷಕರ ಹೊಟ್ಟೆ ಉರಿಸ್ತಿದ್ದೀರಾ? ಯಾಕೆ ಹಿಂದುಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದೀರಿ? ಯಾವ ಅಧಿಕಾರ ಇದೆ ಎಂದು ನಮ್ಮ‌ ಮೇಲೆ ನೀವು ಈ ರೀತಿ‌ ಮಾಡ್ತಿದ್ದೀರಾ?” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮನ್ನು ಜೈಲಿಗೆ ಹಾಕಿದ್ದೀರಾ, ನಾಳೆ ನಿರಪರಾಧಿ ಎಂದು ಸಾಬೀತಾದರೆ 25 ಲಕ್ಷ ರೂಪಾಯಿ ನಮಗೆ ಕೊಡ್ತೀರಾ? ಯಾವ ಆಧಾರದಲ್ಲಿ ಅವರಿಗೆ ಹಣ ಕೊಟ್ರಿ? ಯಾರ ಅಪ್ಪನ ಮನೆಯಿಂದ ಹಣ ಕೊಟ್ರಿ? ರಾಜ್ಯದ ಮುಖ್ಯಮಂತ್ರಿಯಾಗಿ ನೀವು ಗೋ ಹತ್ಯೆಗೆ ಪ್ರಚೋದನೆ ಕೊಡ್ತಿದ್ದೀರಾ?” ಎಂದು ವಾಗ್ದಾಳಿ ನಡೆಸಿದ್ದಾನೆ.

“ಕಾನೂನು ಮೀರಿದವರಿಗೆ ಹಣ ಕೊಡ್ತಿದ್ದೀರಿ, ನಿಮಗೆ ಗೋಮಾತೆ ಕ್ಷಮಿಸುವುದಿಲ್ಲ, ಗೋ ಮಾತೆ ನಿಮಗೆ ಶಿಕ್ಷೆ ಕೊಡ್ತಾಳೆ” ಎನ್ನವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಗೃಹಜ್ಯೋತಿ ಯೋಜನೆ; ರಾತ್ರಿ ವೇಳೆ ಸರ್ವರ್ ಸಕ್ರಿಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...