ಡಾಲಿ ಚಾಯ್‌ವಾಲ ಮಂಗಳೂರಿನವನಾಗಿದ್ದಿದ್ದರೆ ಆತನ ಸ್ಟಾಲ್ ಕೂಡ ಬುಲ್ಡೋಜ್ ಆಗುತ್ತಿತ್ತು : ನಟ ರಾಜ್ ಬಿ ಶೆಟ್ಟಿ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಲೇಡಿಹಿಲ್ ಸುತ್ತಲೂ ಸಂಜೆ ಹೊತ್ತು ಟೀ, ಕಾಫಿ, ಚುರುಮುರಿ, ಆಮ್ಲೆಟ್, ಫ್ರುಟ್ ಸಲಾಡ್ ವ್ಯಾಪಾರ ಮಾಡುತ್ತಿದ್ದ ಬಿಜೆಪಿ ಆಡಳಿತರನ್ನು ಬಿಜೆಪಿ ಆಡಳಿತದ ಮಂಗಳೂರು ನಗರ ಪಾಲಿಕೆ ‘ಟೈಗರ್ ಕಾರ್ಯಾಚರಣೆ’ ಅಂತ ಹೆಸರಿಟ್ಟು ಬುಲ್ಡೋಜರ್ ಬಳಸಿ ಕಿತ್ತು ಬಿಸಾಕಿತ್ತು. ಇದಕ್ಕೆ ಟ್ರಾಫಿಕ್ ಕಿರಿಕಿರಿ, ಪಾರ್ಕಿಂಗ್ ಸಮಸ್ಯೆ, ಫುಟ್ ಪಾತ್ ಅತಿಕ್ರಮಣ ತೆರವು ಅಂತ ಕುಂಟು ನೆಪಗಳನ್ನು ಬಿಜೆಪಿ ಮೇಯರ್, ಶಾಸಕರು ನೀಡಿದ್ದರು.

ಈ ನಡುವೆಯೇ ಇತ್ತೀಚೆಗೆ ಅದೇ ಲೇಡಿಹಿಲ್ ಸರ್ಕಲ್ ಸುತ್ತಲೂ ಬಿಜೆಪಿ ಶಾಸಕರ ನೇತೃತ್ವದಲ್ಲಿ ಐದು ದಿನಗಳ ಅದ್ದೂರಿ ಫುಡ್ ಫೆಸ್ಟಿವಲ್ ನಡೆಯುತ್ತಿದೆ. ಅಂದರೆ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಜನವರಿ 18 ರಿಂದ 22ರ ವರೆಗೆ ಐದು ದಿನಗಳ ಕಾಲ ನಗರದಲ್ಲಿ ‘ಮಂಗಳೂರು ಸ್ಟ್ರೀಟ್‌ ಫುಡ್‌ ಫಿಯೆಸ್ಟ’ ಹಮ್ಮಿಕೊಂಡಿದೆ. ಇದಕ್ಕೆ ಮಂಗಳೂರು ಭಾಗದ ಪ್ರಗತಿಪರ ಹೋರಾಟಗಾರರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಬೀದಿ ಬದಿ ವ್ಯಾಪಾರಸ್ಥರನ್ನು ಬುಲ್ಡೋಜರ್ ಬಳಸಿ ಓಡಿಸಿದ ಅದೇ ಸ್ಥಳಗಳಲ್ಲಿ ನೂರಾರು ಸ್ಟಾಲ್‌ಗಳನ್ನು ಹಾಕಲಾಗಿದೆ.

ಈ ಫುಡ್ ಫೆಸ್ಟಿವಲ್‌ಗೆ ಮೊದಲ ದಿನದಂದು ಮುಂಬೈಯ ಡಾಲಿ ಚಾಯ್‌ವಾಲ ಅವರು ಭಾಗವಹಿಸಿದ್ದರು. ಡಾಲಿ ಚಾಯ್‌ವಾಲ ಭಾಗವಹಿಸಿದ ಬೆನ್ನಲ್ಲೇ ಭಾರೀ ಚರ್ಚೆಗೂ ಇದು ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಲ್ಲ ಚರ್ಚೆಯ ನಡುವೆಯೇ ಮಂಗಳೂರಿನ ಬೀದಿಬದಿ ವ್ಯಾಪಾರಸ್ಥರ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತಿರುವ ಕರಾವಳಿಯ ನಿವಾಸಿ, ಕನ್ನಡ ಸಿನಿಮಾ ರಂಗದ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ,”ಡಾಲಿ ಚಾಯ್ ವಾಲ ಮಂಗಳೂರಿನ ಬೀದಿ ಬದಿ ವ್ಯಾಪಾರಸ್ಥನಾಗಿರುತ್ತಿದ್ದರೆ ಆತನ ಸ್ಟಾಲ್ ಕೂಡ ಬುಲ್ಡೋಜ್ ಆಗುತ್ತಿತ್ತು” ಎಂದು ಪೋಸ್ಟ್ ಹಾಕುವ ಮೂಲಕ ಬಿಜೆಪಿ ಆಡಳಿತದ ಮಂಗಳೂರು ನಗರ ಪಾಲಿಕೆಗೆ ಟಾಂಗ್ ನೀಡಿದ್ದಾರೆ.

raj b shetty
ರಾಜ್ ಬಿ ಶೆಟ್ಟಿಯವರ ಇನ್‌ಸ್ಟಾಗ್ರಾಮ್‌ ಸ್ಟೋರಿ

ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಇಂಗ್ಲಿಷ್‌ನಲ್ಲಿ ಪೋಸ್ಟ್ ಹಾಕಿರುವ ‘ಒಂದು ಮೊಟ್ಟೆಯ ಕಥೆ’ ಸಿನಿಮಾದ ನಿರ್ದೇಶಕ, “ಮಂಗಳೂರಿನಲ್ಲಿ ಬೀದಿಬದಿಯ ಚಹಾ ಮಾರಾಟಗಾರ ಡಾಲಿ ಚಾಯ್‌ವಾಲಾ ಅವರನ್ನು ಕರೆಸಿ ಸಂಭ್ರಮಿಸಲಾಯಿತು. ಕೆಲವು ತಿಂಗಳುಗಳ ಹಿಂದೆ ಇದೇ ನಗರವು ಬೀದಿ ಬದಿ ಆಹಾರ ಮಾರಾಟಗಾರರನ್ನು ಬುಲ್ಡೋಜರ್‌ ಕಾರ್ಯಾಚರಣೆ ನಡೆಸಿ, ಓಡಿಸಿತ್ತು. ಡಾಲಿ ಚಾಯ್‌ವಾಲ ಮಂಗಳೂರಿನವನಲ್ಲ ಎಂಬುದು ಸಂತೋಷದ ವಿಷಯ. ಒಂದು ವೇಳೆ, ಡಾಲಿ ಚಾಯ್‌ವಾಲ ಮಂಗಳೂರಿನವನಾಗಿರುತ್ತಿದ್ದರೆ ಆತನ ಸ್ಟಾಲ್ ಕೂಡ ಬುಲ್ಡೋಜ್ ಆಗುತ್ತಿತ್ತು” ಎನ್ನುವ ಮೂಲಕ ಬೀದಿ ಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತದ ಮಂಗಳೂರು ನಗರ ಪಾಲಿಕೆ ‘ಟೈಗರ್ ಕಾರ್ಯಾಚರಣೆ’ಯ ವಿರುದ್ಧ ಧ್ವನಿ ಎತ್ತುವ ಮೂಲಕ ಸುದ್ದಿಯಾಗಿದ್ದಾರೆ.

ನಿರ್ದೇಶಕ ರಾಜ್ ಬಿ ಶೆಟ್ಟಿ ಹಾಕಿರುವ ಈ ಪೋಸ್ಟ್ ಬಿಜೆಪಿ ಹಾಗೂ ಮಂಗಳೂರು ನಗರ ಪಾಲಿಕೆಯ ನಿದ್ದೆಗೆಡಿಸುತ್ತಾ ಅನ್ನುವುದನ್ನು ಕಾದುನೋಡಬೇಕಿದೆ.

ಅಸಹ್ಯ ಚಾಯ್‌ವಾಲನನ್ನು ಕರೆಸಿ ಮಂಗಳೂರಿನ ಮಾನ ಹರಾಜಿಗಿಟ್ಟ ಬಿಜೆಪಿ: ಬಿಕೆ ಇಮ್ತಿಯಾಜ್

ಮಂಗಳೂರಿನ ಲೇಡಿಹಿಲ್, ಮಣ್ಣಗುಡ್ಡೆ ಪರಿಸರದ ಬೀದಿ ಆಹಾರ ಮಾರಾಟಗಾರರ ಗೂಡಂಗಡಿಗಳ ಮೇಲೆ ಬುಲ್ಡೋಝರ್ ಹಾಯಿಸಿ ಅವರ ಬದುಕನ್ನು ನಾಶ ಮಾಡಿದವರು, ಇಂದು ಅಸಹ್ಯವಾಗಿ ಟೀ ಮಾಡಿಕೊಡುವ ಡಾಲಿ ಚಾಯ್‌ವಾಲಾನನ್ನು ಮಂಗಳೂರಿಗೆ ಕರೆಸಿಕೊಂಡಿದ್ದರು. ಶುಚಿತ್ವ ಮತ್ತು ಗುಣಮಟ್ಟಕ್ಕೆ ಒತ್ತು ಕೊಡುವ ಮಂಗಳೂರಿಗರ ಪ್ರಜ್ಞಾವಂತಿಕೆಯನ್ನು ಶಾಸಕ ವೇದವ್ಯಾಸ ಕಾಮತ್ ಮತ್ತು ಬಿಜೆಪಿ ಮುಖಂಡರು ಹರಾಜಿಗಿಟ್ಟರು ಎಂದು ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಧ್ಯಕ್ಷ ಬಿಕೆ ಇಮ್ತಿಯಾಜ್ ಹೇಳಿಕೆ ನೀಡಿದ್ದಾರೆ.

bk 2

ನಗರದಲ್ಲಿ ನೂರಾರು ಬಡ ಚಾಯಿವಾಲಗಳ ಬದುಕು ನಾಶ ಮಾಡಿ ವಾರಗಟ್ಟಲೆ ರಸ್ತೆಗಳನ್ನು ಮುಚ್ಚಿ ಸಾರ್ವಜನಿಕರಿಗೆ ತೊಂದರೆ ನೀಡಿ ಕಾನೂನು ಉಲ್ಲಂಘನೆ ಆಗುತ್ತಿದ್ದರೂ ಕಾನೂನು ಪರಿಪಾಲಕರೇ ಆಯೋಜಕರ ಪರ ನಿಂತಿರುವುದು ದುರದೃಷ್ಟ ಎಂದು ಮನಪಾ ಆಡಳಿತ ಹಾಗೂ ಮಂಗಳೂರು ನಗರ ಪೊಲೀಸರ ವಿರುದ್ಧ ಬೀದಿಬದಿ ವ್ಯಾಪಾರಸ್ಥರ ಸಂಘ ಗುಡುಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...