ಕೇಂದ್ರದ ಯೋಜನೆ ರಾಜ್ಯದ ಜನರಿಗೆ ತಲುಪಿಸುವಲ್ಲಿ ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟ: ಬೊಮ್ಮಾಯಿ

Date:

  • ‘ಕೇಂದ್ರ ಸರ್ಕಾರಕ್ಕೆ 9 ವರ್ಷ, ನರೇಂದ್ರ ಮೋದಿ ಆಡಳಿತ ಮುಂದುವರೆಯಲಿʼ
  • ‘ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ’

ಕೇಂದ್ರದ ಯೋಜನೆಗಳನ್ನು ರಾಜ್ಯದ ಜನರಿಗೆ ತಲುಪಿಸುವಲ್ಲಿ ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಕೇಂದ್ರ ಸರ್ಕಾರ ಒಂಬತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

“ನರೇಂದ್ರ‌ ಮೋದಿ ನೇತೃತ್ವದ ಸರ್ಕಾರ 9 ವರ್ಷ ಪೂರ್ಣಗೊಳಿಸಿದೆ. ಒಂಭತ್ತು ವರ್ಷದಲ್ಲಿ ಸಾಕಷ್ಟು ಬದಲಾಗಿದೆ. ಪ್ರತಿಯೊಬ್ಬ ನಾಗರಿಕನ ಬದುಕಿನಲ್ಲಿ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಉನ್ನತೀಕರಣ ಆಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುಪಿಎ ಅವಧಿಯಲ್ಲಿ ಭಯೋತ್ಪಾದಕ ಚಟುವಟಿಕೆ ಹೆಚ್ಚಾಗಿತ್ತು. ರಾಷ್ಟ್ರದ ಸುರಕ್ಷತೆ ಮತ್ತು ಏಕತೆ ಅಖಂಡತೆಯನ್ನು ಕಾಪಾಡುವ ಕೆಲಸ ಮಾಡಿದರು. ಆರ್ಟಿಕಲ್ 370 ರದ್ದು ಮಾಡುವ ಮೂಲಕ ದೇಶದ ಏಕತೆ ಕಾಪಾಡಿದರು. ಪ್ರಧಾನಿಯಾದ ಮೇಲೆ ಮೋದಿಯವರು ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿ.ಎಸ್.ಟಿ ಜಾರಿಗೆ ತಂದರು. ಇದರಿಂದ ದೇಶ ಹಾಗೂ ರಾಜ್ಯಗಳ ಆರ್ಥಿಕ ಪ್ರಗತಿ ಹೆಚ್ಚಾಯಿತು. ಮೊದಲ ಐದು ರಾಜ್ಯಗಳಿಗೆ 14% ಗ್ಯಾರಂಟಿ ಫಂಡ್ ಬರುವಂತೆ ಮಾಡಿದರು” ಎಂದರು.

“ಪ್ರಧಾನಮಂತ್ರಿ ನರೇಂದ್ರ ಮೋದಿ ನೀತಿ ಆಯೋಗ ಜಾರಿಗೆ ತಂದು, ರಾಜ್ಯಗಳಿಗೆ 40 ರಷ್ಟು ಫಂಡ್ ಡೆವ್ಯಲೂಸನ್ ಮಾಡಿದರು. ಶಿಕ್ಷಣ ಪದ್ದತಿಯಲ್ಲಿ ಆಮೂಲಾಗ್ರ ಬದಲಾವಣೆ ತರಲು ಎನ್ ಇಪಿ ಜಾರಿಗೆ ತಂದಿದ್ದಾರೆ. ಕರ್ನಾಟಕ ಎನ್ ಇಪಿ ಜಾರಿಗೆ ತಂದಿರುವ ಮೊದಲ ರಾಜ್ಯವಾಗಿದೆ. ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಇಲ್ಲಿದೆ ಪೂರ್ಣ ಮಾಹಿತಿ

“ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಸುಮಾರು 54 ಲಕ್ಷ ರೈತರಿಗೆ ಸುಮಾರು 16,000 ಕೋಟಿ ರೂ. ನೇರವಾಗಿ ರೈತರಿಗೆ ತಲುಪಿದೆ. ಮುದ್ರಾ ಯೋಜನೆ ಅಡಿಯಲ್ಲಿ 60 ಲಕ್ಷ ಉದ್ಯಮಿಗಳಿಗೆ ಅನುಕೂಲವಾಗಿದೆ‌. ರೈತರಿಗೆ ಅತ್ಯಂತ ಪ್ರಮುಖವಾಗಿ ಎಮ್ ಎಸ್ ಪಿ ನೀಡುವ ಮೂಲಕ ರೈತರ ನೆರವಿಗೆ ನಿಂತಿದ್ದಾರೆ” ಎಂದು ಹೇಳಿದರು.

ಗ್ಯಾರಂಟಿ ಅನುಷ್ಠಾನದಲ್ಲಿ ಜನತೆಗೆ ದೋಖಾ

ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ. ಕಾಂಗ್ರೆಸ್ ನವರು ಚುನಾವಣೆ ಸಂದರ್ಭದಲ್ಲಿ ಎಲ್ಲರಿಗೂ ಉಚಿತ, ನಮಗೂ ಫ್ರೀ ನಿಮಗೂ ಫ್ರೀ ಅಂತ ಜನರಿಗೆ ಭರವಸೆ ನೀಡಿ, ಈಗ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿರುವುದು ನೋಡಿದರೆ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ” ಎಂದು ಹರಿಹಾಯ್ದರು.

“ತಾತ್ವಿಕ ಆದೇಶದಲ್ಲಿಯೂ ಎಲ್ಲರಿಗೂ ಉಚಿತ ಎಂದು ಹೇಳಿದ್ದರು. ಈಗ ಬೇರೆ ಬೇರೆ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನವರು ಹೇಳುವುದೊಂದು ಮಾಡುವುದೊಂದು. ಅವರ ಬಣ್ಣ ಬಯಲಾಗುತ್ತದೆ” ಎಂದು ಇದೇ ವೇಳೆ ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...