ಬೆಂಗಳೂರು | ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್‌ನಿಂದ ಇಫ್ತಾರ್ ಕೂಟ, ಸನ್ಮಾನ ಕಾರ್ಯಕ್ರಮ

Date:

ಬೆಂಗಳೂರಿನ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಹೆಚ್‌ಬಿಆರ್‌ ಲೇಔಟ್‌ನಲ್ಲಿರುವ ಬ್ಯಾರೀಸ್ ಸೌಹಾರ್ದ ಭವನದಲ್ಲಿ ಶುಕ್ರವಾರ ಸಂಜೆ ಇಫ್ತಾರ್ ಕೂಟ ಹಾಗೂ ಸಾಧಕರಿಬ್ಬರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷರಾಗಿ ಇತ್ತೀಚಿಗೆ ನೇಮಕಗೊಂಡಿದ್ದ ಡಾ.ಯು.ಟಿ.ಇಫ್ತಿಕಾರ್ ಫರೀದ್‌ ಹಾಗೂ ಕರ್ನಾಟಕ ಮಾಹಿತಿ ಆಯೋಗಕ್ಕೆ ನೂತನವಾಗಿ ಮಾಹಿತಿ ಆಯುಕ್ತರಾಗಿ ನೇಮಕವಾಗಿರುವ ಹಿರಿಯ ಪತ್ರಕರ್ತ ಬದ್ರುದ್ದೀನ್ ಮಾಣಿ ಅವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.

1003707404

ಸನ್ಮಾನ ಸ್ವೀಕರಿಸಿ ಮಾತನಾಡಿದ ಯು ಟಿ‌ ಇಫ್ತಿಕಾರ್, ‘ಬ್ಯಾರಿ ಸಮುದಾಯದ ಉನ್ನತಿಗಾಗಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ತುಂಬಾ ಕೆಲಸ ಮಾಡುತ್ತಿರುವುದು ಖುಷಿಯ ವಿಚಾರ. ವೈದ್ಯರು ಸೇರಿದಂತೆ ಉನ್ನತಮಟ್ಟದ ಸ್ಥಾನಕ್ಕೆ ಬ್ಯಾರಿ ಸಮುದಾಯದ ಯುವಕ-ಯುವತಿಯರು ಬರಬೇಕು. ‌ಈ ನಿಟ್ಟಿನಲ್ಲಿ ಸಮುದಾಯದ ಹಿರಿಯ ಮುಖಂಡರು ವೈದ್ಯಕೀಯ ಕಾಲೇಜುಗಳನ್ನು ತೆರೆಯಬೇಕು. ಆ ಮೂಲಕ ಸಮುದಾಯದ ಉನ್ನತಿಗಾಗಿ ಪ್ರಯತ್ನಿಸಬೇಕು. ‌ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾದ ಬಿ.ಎಂ. ಫಾರೂಕ್ ಅವರು ಮೈಸೂರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ನಿರ್ಧರಿಸಿ, ಕಾರ್ಯಗತಗೊಳಿಸಲು ಪ್ರಯತ್ನಿಸಿರುವುದು ಖುಷಿಯ ವಿಚಾರ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬದ್ರುದ್ದೀನ್ ಮಾಣಿ ಮಾತನಾಡಿ, ‘ಬ್ಯಾರಿ ಸಮುದಾಯದ ಸಂಘಟನೆಯಾದ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲ್ಪಪಟ್ಟದ್ದು ಖುಷಿಕೊಟ್ಟಿದೆ’ ಎಂದು ತಿಳಿಸಿದರು.

1003707409

ಕಾರ್ಯಕ್ರಮದಲ್ಲಿ ಪೌರಾಡಳಿತ ಸಚಿವರಾದ ರಹೀಂ ಖಾನ್, ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾದ ಬಿ.ಎಂ. ಫಾರೂಕ್, ಬ್ಯಾರೀಸ್ ಗ್ರೂಪ್‌ನ ಸಯ್ಯದ್ ಮೊಹಮ್ಮದ್ ಬ್ಯಾರಿ, ಟೀಕೇಸ್ ಗ್ರೂಪ್‌ನ ಅಧ್ಯಕ್ಷರಾದ ಉಮರ್ ಟಿ.ಕೆ, ಜಿ ಎ ಬಾವಾ, ಇಕ್ಬಾಲ್ ಅಹ್ಮದ್, ಡಾ ಮಕ್ಸೂದ್ ಅಹ್ಮದ್, ಎ ಬಿ ಬಜಾಲ್, ಬ್ಯಾರೀಸ್ ಗ್ರೂಪ್‌ನ ಸಿದ್ದೀಕ್ ಬ್ಯಾರಿ, ಶರೀಫ್ ಟಿ ಕೆ, ತಸ್ಲೀಲ್ ಮೊಹಮ್ಮದ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸನ್ಮಾನಿತರ ಸಾಧನಾ ಪತ್ರವನ್ನು ಆಸಿಫ್ ಅಹ್ಮದ್ ಹಾಗೂ ಅತ್ತೂರು ಚೈಯಬ್ಬ ವಾಚಿಸಿದರು. ಮಸೂದ್ ಕಾರ್ಯಕ್ರಮ ನಿರೂಪಿಸಿದರು. ಮೊಹಮ್ಮದ್ ನವೀದ್ ಕಿರಾಅತ್ ಪಠಿಸಿದರು.

1003707410

ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಉಮರ್ ಯು ಹೆಚ್, ಸುಲ್ತಾನ್ ಗೋಲ್ಡ್‌ನ ರಿಯಾಝ್, ಬಿ ಎಂ ಹನೀಫ್, ಬ್ಯಾರಿ ಜಮಾಅತ್ ಅಧ್ಯಕ್ಷ ಡಾ ಹಮೀದ್, ಬೆಂಗಳೂರು ಬ್ಯಾರೀಸ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಶಬೀರ್ ಬ್ರಿಗೇಡ್ ಸೇರಿದಂತೆ ಪದಾಧಿಕಾರಿಗಳು, ಮಲಬಾರ್ ಅಸೋಸಿಯೇಷನ್‌ನ ಪದಾಧಿಕಾರಿಗಳು ಇನ್ನಿತರ ಸಂಘ ಸಂಸ್ಥೆಗಳ ಸದಸ್ಯರು ಮತ್ತು ಸಾವಿರಕ್ಕೂ ಮಿಕ್ಕಿದ ಬ್ಯಾರಿ ಸಮುದಾಯದ ಕುಟುಂಬಸ್ಥರು ಉಪಸ್ಥಿತರಿದ್ದರು.

1003707450
1003707446
1003707403
1003707384
1003707411
1003707412
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...