ಅಕ್ರಮ ಗಣಿಗಾರಿಕೆ | ಲೂಟಿಕೋರರ ಪರ ನಿಂತಿರುವ ಕಾಂಗ್ರೆಸ್ ಸರ್ಕಾರ: ಎಎಪಿ ಆರೋಪ

Date:

“ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಣಕಾಸು ಕ್ರೋಡೀಕರಣದ ನೆಪದಲ್ಲಿ ಹಲವು ವರ್ಷಗಳಿಂದ ಅಕ್ರಮ ಗಣಿಗಾರಿಕೆಗಳನ್ನು ಮಾಡಿ ಸಾವಿರಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡಿರುವ ಗಣಿ ಮಾಲೀಕರುಗಳಿಗೆ ಬೆಂಬಲ ನೀಡುತ್ತ ಬಂದಿದೆ. ಅದೇ ರೀತಿಯಲ್ಲಿ ಒಟಿಎಸ್ ಪದ್ದತಿಯನ್ನು ಜಾರಿಗೆ ತಂದಿರುವುದು ಸರ್ಕಾರ ಲೂಟಿಕೋರರ ಪರ ನಿಂತಿರುವುದು ಸ್ಪಷ್ಟವಾಗುತ್ತಿದೆ” ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

“ಜಿಎಸ್‌ಟಿ ಕಟ್ಟದೆ ಸಾವಿರಾರು ಕೋಟಿ ವಂಚಿಸಿರುವ ವಂಚಕರಿಗೂ ಸಹ ಈ ಒಟಿಎಸ್ ನೀತಿಯನ್ನು ಜಾರಿಗೆ ತರುತ್ತಿರುವುದು ಮತ್ತಷ್ಟು ಆತಂಕದ ಸಂಗತಿ. ಈಗಾಗಲೇ ಅಕ್ರಮ ಗಣಿಗಾರಿಕೆಗಳ ವಿರುದ್ಧ ಹೋರಾಟ ಮಾಡುತ್ತಿರುವ ಎಸ್ ಆರ್‌ ಹಿರೇಮಠ್ ರಂತಹ ಹೋರಾಟಗಾರರಿಗೆ ಮಾಡುತ್ತಿರುವ ಅಪಮಾನ ಹಾಗೂ ಮುಂದಿನ ಪೀಳಿಗೆಗಳಿಗೆ ರಾಜ್ಯದ ನೈಸರ್ಗಿಕ ಸಂಪತ್ತನ್ನು ಉಳಿಸದೆ ಎಲ್ಲವನ್ನು ತಮ್ಮ ಅವಧಿಯಲ್ಲಿಯೇ ಲೂಟಿ ಮಾಡಿ ಸರ್ಕಾರ ಉಳಿಸಿಕೊಳ್ಳುವ ಇರಾದೆ” ಎಂದು ಹೇಳಿದರು.

“ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಾಂಜನಪ್ಪ ದಾಖಲೆಗಳನ್ನು ಬಿಡುಗಡೆ ಮಾಡಿ, ಪಾವಗಡ ಕ್ಷೇತ್ರದ ಶಾಸಕ ಎಚ್‌.ವಿ. ವೆಂಕಟೇಶ್ ಅವರ ಪತ್ನಿಯ ಒಡೆತನದ ವೆಂಕಟೇಶ್ವರ ಸ್ಟೋನ್ ಕ್ರಷರ್ ಈಗಾಗಲೇ ಸರ್ಕಾರಕ್ಕೆ 10 ಕೋಟಿ ರೂ.ಗಳಿಗೂ ಹೆಚ್ಚು ರಾಜಧನ ಹಾಗೂ ದಂಡದ ಮೊತ್ತ ಬಾಕಿ ಉಳಿಸಿಕೊಂಡಿದೆ. ಇವರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳದೆ ಒಟಿಎಸ್ ನೀತಿಯ ಮೂಲಕ ಅವರ ಬೆಂಬಲಕ್ಕೆ ನಿಂತಿರುವುದು ಸ್ಪಷ್ಟವಾಗಿದೆ. ಈ ಕೂಡಲೇ ಒಟಿಎಸ್ ಅನ್ನು ರದ್ದುಗೊಳಿಸಬೇಕು. ಅಕ್ರಮ ಗಣಿ ಮಾಲೀಕರುಗಳ ಆಸ್ತಿಗಳನ್ನು ಜಪ್ತಿ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಿಂದೂ ದೇವಾಲಯದ ಬಳಿಯಿದ್ದ ತಮ್ಮದೇ ಮನೆ ಕೆಡವಿ ‘ಅಗತ್ಯ ವಸ್ತುಗಳನ್ನಾದರೂ ರಕ್ಷಿಸಿಕೊಳ್ಳಬಹುದು’ ಎಂದ ಮುಸ್ಲಿಮರು!

“ಶಾಸಕ ವೆಂಕಟೇಶ್ 20 ಎಕರೆ ಗಡಿಯಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದು ಇವರ ಮೇಲೆ ಹಾಕಿರುವ ದಂಡದ ಮೊತ್ತ ಕೇವಲ ಐದು ಎಕರೆಗಳಿಗೆ ಮಾತ್ರ ಆಗಿದೆ. ಈ ದಂಡದ ಮೊತ್ತ 40 ಕೋಟಿ ರೂ.ಗಳಿಗೂ ಹೆಚ್ಚು ಆಗಿದ್ದು ಕೂಡಲೇ ಮರುಪರಿಶೀಲಿಸಿ ಹಾಲಿ ಶಾಸಕರ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಬೇಕು ಹಾಗೂ ಕೂಡಲೇ ಅವರ ಬಳಿ ದಂಡದ ಮೊತ್ತವನ್ನು ವಸೂಲಿ ಮಾಡಿ ರಾಜ್ಯದ ಬೊಕ್ಕಸಕ್ಕೆ ತುಂಬಿಸಬೇಕೆಂದು” ಆಗ್ರಹಿಸಿದರು.

“ಇದೇ ರೀತಿ ರಾಜ್ಯದ ಅನೇಕ ಹಾಲಿ ಶಾಸಕರುಗಳು ಮಾಜಿ ಶಾಸಕರುಗಳು ಮಂತ್ರಿಗಳು ಅಕ್ರಮ ಗಣಿಗಾರಿಕೆಯಲ್ಲಿ ನಿರತರಾಗಿದ್ದು, ದಂಡದ ಮೊತ್ತ ಸಾವಿರಾರು ಕೋಟಿ ಆಗಿದೆ. ಇವರುಗಳನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ ನಿಂತಿರುವುದು ರಾಜ್ಯದ ದೌರ್ಭಾಗ್ಯ , ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಳ್ಳುತ್ತಿದ್ದಲ್ಲಿ ಆಮ್ ಆದ್ಮಿ ಪಕ್ಷ ಬೃಹತ್ ಜನಾಂದೋಲನಕ್ಕೆ ಸಿದ್ಧವಾಗಲಿದೆ” ಎಂದು ರಾಮಾಂಜಿನಪ್ಪ ಸರ್ಕಾರವನ್ನು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...