ಎಮ್ಮೆದೊಡ್ಡಿ ಅರಣ್ಯ ಭೂಮಿ ಖಾಸಗಿಯವರಿಗೆ ಅಕ್ರಮ ಮಾರಾಟ, ತಹಶೀಲ್ದಾರ್ ಬಂಧನ

Date:

  • ತಹಶೀಲ್ದಾರ್ ಜೆ ಉಮೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ
  • ಕಾನೂನುಬಾಹಿರವಾಗಿ 18 ಜನರಿಗೆ ಭೂಮಿ ಮಂಜೂರು

ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ಬೀರೂರು ಹೋಬಳಿಯ ಎಮ್ಮೆದೊಡ್ಡಿ ಕಾವಲು ಗ್ರಾಮದ ಸರ್ವೇ ನಂ.70, 71 ಹಾಗೂ ಇತರೆ ಸರ್ವೇ ನಂಬರ್ ಗೆ ಸೇರಿದ ಅರಣ್ಯ ಭೂಮಿಯನ್ನು ಖಾಸಗಿಯವರಿಗೆ ಅಕ್ರಮವಾಗಿ ಮಾರಾಟ ಮಾಡಿದ್ದ ತಹಶೀಲ್ದಾರ್ ಜೆ ಉಮೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿ ಹಂಚಿಕೊಂಡಿರುವ ಅವರು, “ಭ್ರಷ್ಟ ಅಧಿಕಾರಿಯನ್ನು ಬಂಧಿಸಲಾಗಿದೆ. ಅಲ್ಲದೆ ಅಕ್ರಮದಲ್ಲಿ ಪಾಲ್ಗೊಂಡ ಇತರೆ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ” ಎಂದಿದ್ದಾರೆ.

ಪ್ರಸ್ತುತ ಕಾರವಾರದ ಸೀ ಬರ್ಡ್ ನೌಕಾನೆಲೆಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿರುವ, ಕಡೂರಿನಲ್ಲಿ ಈ ಹಿಂದೆ ತಹಶೀಲ್ದಾರ್ ಆಗಿದ್ದ ಜೆ.ಉಮೇಶ್ ಎಂಬ ಅಧಿಕಾರಿ ಬೀರೂರು ಹೋಬಳಿಯ ಎಮ್ಮೆದೊಡ್ಡಿ ಗ್ರಾಮದ ಸ.ನಂ.77ರ ಪ್ರದೇಶವು ಸೆಕ್ಷನ್ 4ರಡಿ ಪ್ರಾಥಮಿಕ ಅಧಿಸೂಚನೆಯಾಗಿ ತದ ನಂತರ ’ಹುಲಿ ಸಂರಕ್ಷಿತ’ ಪ್ರದೇಶ ಎಂದು ಘೋಷಿತವಾಗಿದ್ದರೂ ಅರಣ್ಯ ಇಲಾಖೆಯ ಅಭಿಪ್ರಾಯ ಕೂಡ ಪಡೆಯದೆ ಕಾನೂನುಬಾಹಿರವಾಗಿ 18 ಜನರಿಗೆ ಆ ಭೂಮಿಯನ್ನು ಮಂಜೂರು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಹುಲಿ ಸಂರಕ್ಷಿತ’ ಪ್ರದೇಶ ಎಂಬ ವಿಷಯ ಗೊತ್ತಿದ್ದರೂ ಸಹ ವಾಸ್ತವಾಂಶ ಮರೆಮಾಚಿ ಸ್ಥಳ ಪರಿಶೀಲನೆ ಮಾಡಿದ ರಾಜಸ್ವ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಕಡತದ ಮನವಿ ಪತ್ರಕ್ಕೆ ಮಂಜೂರಾತಿಗೆ ಶಿಫಾರಸು ಮಾಡಿದ್ದರು. ತಹಶೀಲ್ದಾರ್ ಜಿ.ಉಮೇಶ್ ಸಾಗುವಳಿ ಚೀಟಿಗೆ ಸಹಿ ಮಾಡಿ ಭೂಮಿ ತಂತ್ರಾಂಶದಲ್ಲಿ ಅನುಮೋದನೆ ನೀಡಿದ್ದರು. ನಂತರ ಶಿರಸ್ತೇದಾರರು, ರಾಜಸ್ವ ನಿರೀಕ್ಷಕರು ಅನುಮೋದಿಸಿ ಖಾತೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? 100ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ: ಕೃಷಿ ಸಚಿವ ಚಲುವರಾಯಸ್ವಾಮಿ

ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ವರದಿ ಸಲ್ಲಿಸಿದ್ದು, ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಗಳಿಗೆ ಹಕ್ಕು ದಾಖಲಿಸಿರುವ ಕುರಿತು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಬಗರ್ ಹುಕುಂ ಸಮಿತಿಯಲ್ಲಿ ನಮೂನೆ 50/53 ವಜಾಗೊಂಡಿದ್ದರೂ ಸಹ ಪುನಃ ನಕಲಿ ಸಾಗುವಳಿ ಚೀಟಿಯನ್ನು ಕಾನೂನುಬಾಹಿರವಾಗಿ ಸೃಷ್ಟಿಸಿ ಮಂಜೂರು ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

“ಚಿಕ್ಕಮಗಳೂರು ಜಿಲ್ಲಾಧಿಕಾರಿ ಅವರ ವರದಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ನ್ಯಾಯಯುತ ತನಿಖೆಗೆ ನಡೆಸಿ, ತಪ್ಪಿಸ್ಥರಿಗೆ ಶಿಕ್ಷೆ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಈಗಾಗಲೇ 13 ಜನರ ತಹಶೀಲ್ದಾರರ ತಂಡ ಚಿಕ್ಕಮಗಳೂರಿನಲ್ಲಿ ಬೀಡುಬಿಟ್ಟಿದ್ದು, ಖಾಸಗಿಯವರಿಗೆ ಅಕ್ರಮವಾಗಿ ಮಾರಾಟ ಮಾಡಲಾಗಿರುವ ಅರಣ್ಯ ಭೂಮಿಯ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ವೇಳೆ ಇಂತಹ ಮತ್ತೂ 22 ಪ್ರಕರಣಗಳು ಪತ್ತೆಯಾಗಿದೆ” ಎಂದು ಸಚಿವರು ತಿಳಿಸಿದ್ದಾರೆ.

“ಕಂದಾಯ ಇಲಾಖೆಯನ್ನು ಭ್ರಷ್ಟಾಚಾರ ಮುಕ್ತಗೊಳಿಸಿ ಜನಸ್ನೇಹಿ ಆಡಳಿತ ನೀಡುವ ಸರ್ಕಾರದ ಭರವಸೆಗೆ ನಾವು ಬದ್ಧರಾಗಿದ್ದೇವೆ. ಇಲಾಖೆಯಲ್ಲಿ ಯಾವುದೇ ಹಂತದಲ್ಲಿ ಯಾವುದೇ ವ್ಯಕ್ತಿಯ ಭ್ರಷ್ಟಾಚಾರವನ್ನು ಸಹಿಸಲು ಸಾಧ್ಯವಿಲ್ಲ. ಈಗಾಗಲೇ ಕಂದಾಯ ಇಲಾಖೆಯಲ್ಲಿ ಅಕ್ರಮ ಎಸಗಿದ್ದ 66 ಜನ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಮೂಲಕ ಮಾದರಿ ಹೆಜ್ಜೆ ಇಡಲಾಗಿದೆ. ಅಲ್ಲದೆ ವಿಚಾರಣೆಯ ಹಂತದಲ್ಲಿರುವ ಇತರ ಭ್ರಷ್ಟ ಅಧಿಕಾರಿಗಳ ಪಟ್ಟಿಯನ್ನು ನೀಡುವಂತೆಯೂ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ” ಎಂದಿದ್ದಾರೆ.

“ಎಮ್ಮೆದೊಡ್ಡಿ ಕಾವಲು ಗ್ರಾಮದ ಸ.ನಂ.70, 71, 12, 13, 14, 77, 84 ಮತ್ತು 1 ರಿಂದ 63ರವರೆಗಿನ 21 ಸಾವಿರ ಎಕರೆ ಜಾಗವನ್ನು Notification No:A.F.3892-Ft-137-41-2, Dt:04.02.1942 ರಂತೆ ಮೈಸೂರು ಗೇಮ್ ಅಂಡ್ ಫಿಷ್ ಪ್ರಿಸರ್ವೇಶನ್ ಕಾಯ್ದೆ Il of 1901 ರ ಕಲಂ-4(ಬಿ) ಅಡಿಯಲ್ಲಿ ಸರ್ಕಾರಿ ಆದೇಶದಂತೆ ಮೈಸೂರು ಒಡೆಯರ್ ಕಾಲದಲ್ಲೇ “ಎಮ್ಮೆದೊಡ್ಡಿ ಹುಲಿ ಸಂರಕ್ಷಿತ ಪ್ರದೇಶ”ವೆಂದು ಅಧಿಸೂಚಿಸಲ್ಪಟ್ಟಿದೆ.

ಸದರಿ ಪ್ರದೇಶ ಪ್ರಸ್ತುತ ಕರ್ನಾಟಕ ಅರಣ್ಯ ಕಾಯ್ದೆ-1963ರ ಕಲಂ-4ರಡಿಯೂ ಅಧಿಸೂಚಿತ ಪ್ರದೇಶವಾಗಿದೆ. ಹೀಗಾಗಿ ಈ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಯಾವುದೇ ಅಭಿಪ್ರಾಯ ಪಡೆಯದೆ ಸಮೂನೆ-50/53 ರಡಿಯಲ್ಲಿ ಸಾಗುವಳಿ ಚೀಟಿ, ಆರ್.ಟಿ.ಸಿ.ಗಳನ್ನು ನೀಡಲು ಕಾನೂನಿನ ಅಡಿಯಲ್ಲಿ ಅವಕಾಶ ಇರುವುದಿಲ್ಲ. ಒಂದು ವೇಳೆ ಹಾಗೆ ನೀಡಿದರೆ ಅರಣ್ಯ ಸಂರಕ್ಷಣಾ ಕಾಯ್ದೆ-1980ರ ಕಲಂ-2 ಮತ್ತು ಅರಣ್ಯ ಕಾಯ್ದೆ ಹಾಗೂ ಕಾನೂನಿನ್ವಯ ಉಲ್ಲಂಘನೆಯಾಗಿರುತ್ತದೆ. ಅಲ್ಲದೆ ಸರ್ವೋಚ್ಚ ನ್ಯಾಯಾಲಯದ ಆದೇಶಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕೃಷ್ಣಭೈರೇಗೌಡ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...