ರಾಯಚೂರು | ಅಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ

Date:

  • ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ನೀಲಪ್ಪ ಎಂಬುವವರ ಮೇಲೆ ಹಲ್ಲೆ
  • ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ

ಆಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ನೀಲಪ್ಪ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಅಧಿಕಾರಿಯನ್ನು ರಾಯಚೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಾನ್ವಿ ತಾಲ್ಲೂಕಿನ ಮದ್ಲಾಪೂರು ಕ್ರಾಸ್ ಬಳಿ ಘಟನೆ ಜರುಗಿದ್ದ ಹಲ್ಲೆ ಮಾಡಿದ ಆರೋಪಿಗಳಾದ ಗೋವಿನದೊಡ್ಡಿಯ ಶಿವು ಮಹಾದೇವಪ್ಪ, ವೆಂಕಟೇಶ ಮಹಾದೇವಪ್ಪ, ರಂಗನಾಥ ಶಿವಣ್ಣ, ಶಿವರಾಜ ನರಸಪ್ಪ, ಗಿರಿ ಕರಡಿಗುಡ್ಡ, ಶ್ರೀಕಾಂತ ವಡ್ಡರ್ ಸೇರಿದಂತೆ ಇತರರ ವಿರುದ್ದ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪೈಕಿ ರಂಗನಾಥ ಯರಗುಡ್ಡ ಮತ್ತು ಶಿವರಾಜ ಮಾನ್ವಿ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಏನಿದು ಘಟನೆ :

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ನೀಲಪ್ಪ ಮೇಲೆ ಮದ್ಲಾಪೂರು ಕ್ರಾಸ್ ಬಳಿ ಅಕ್ರಮ ಮರಳು ಸಾಗಾಣಿಕೆದಾರರು ದಾಳಿ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿತ್ತು.

ಮಾನ್ವಿ ತಾಲೂಕಿನ ತುಂಗಭದ್ರಾ ನದಿ ತೀರದ ಯಡಿವಾಳ, ಚೀಕಲಪರ್ವಿ, ಮದ್ಲಾಪುರ ಇನ್ನಿತರ ಗ್ರಾಮಗಳಲ್ಲಿ ರಾಯಲ್ಟಿ ಪಡೆದು ಮರಳು ಸಾಗಣೆ ಮಾಡುವ ವ್ಯವಸ್ಥೆ ಇದ್ದರೂ ಸಹ ಕೆಲವು ಮರಳು ದಂಧೆಕೋರರು ಬುರಾನಪುರ, ಬುದ್ದಿನ್ನಿ, ರಂಗದಾಳ, ಯಡಿವಾಳ, ಚೀಕಲಪರ್ವಿ, ಮದ್ಲಾಪುರ ಹಾಗೂ ಇತರ ಕಡೆ ಅಕ್ರಮವಾಗಿ ಸಂಗ್ರಹ ಮಾಡಿದ ಮರಳನ್ನು ರಾಯಲ್ಟಿ ಇಲ್ಲದೇ ಟಿಪ್ಪರ್ ಮತ್ತು ಟ್ರ‍್ಯಾಕ್ಟರ್‌ಗಳ ಮೂಲಕ ಹಗಲು-ರಾತ್ರಿ ಅಕ್ರಮವಾಗಿ ಸಾಗಣೆ ಮಾಡುತ್ತಿರುವ ಮಾಹಿತಿ ಪಡೆದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಮಂಜುನಾಥ ನೇತ್ರತ್ವದಲ್ಲಿ ಬುಧವಾರ ಸಾಯಂಕಾಲ ಇಲಾಖೆಯ ನಾಲೈದು ಜನ ಸಿಬ್ಬಂದಿ ಮಾನ್ವಿಗೆ ಆಗಮಿಸಿದ್ದರು.

ಖಚಿತ ಮಾಹಿತಿ ಮೇರೆಗೆ ಯಡಿವಾಳ ರಸ್ತೆ ಬದಿ ಅಕ್ರಮವಾಗಿ ಸಂಗ್ರಹಿಸಿದ ಮರಳನ್ನು ತುಂಬುವಾಗ ಪೋಲಿಸ್ ಅಧಿಕಾರಿಗಳ ನೇತೃತ್ವದ ತಂಡ ದಾಳಿ ನಡೆಸಿ ಟಿಪ್ಪರ್ ಮತ್ತು ಜೆಸಿಬಿಯನ್ನು ವಶಕ್ಕೆ ಪಡೆದ ಅಧಿಕಾರಿ ನೀಲಪ್ಪ ಜೊತೆಗೆ ಪೊಲೀಸ್ ಠಾಣೆಗೆ ಕಳಿಸುತ್ತಿರುವಾಗ ಮದ್ಲಾಪುರ ಕ್ರಾಸ್ ಬಳಿ ಅಡ್ಡಬಂದ ಶಿವು ಮತ್ತು ಜೆಸಿಬಿ ಚಾಲಕ ಮತ್ತು ಆತನ ಸಹಚರರು ಸೇರಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ನೀಲಪ್ಪ ಇವರ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೀಕಲಪರ್ವಿಯಲ್ಲಿ ಅಕ್ರಮ ಮರಳು ಸಾಗಣೆ ಸಂಬಂಧಪಟ್ಟಂತೆ ಮಂಗಳವಾರ ರಾತ್ರಿ ಪೊಲೀಸ್ ಇನ್ಸ್ಪೆಕ್ಟರ್ ವೀರಭದ್ರಯ್ಯ ಹಿರೇಮಠ ನೇತ್ರತ್ವದಲ್ಲಿ ದಾಳಿ ನಡೆಸಿ ಮರಳು ತುಂಬಿದ ಮೂರು ಟಿಪ್ಪರ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ದಾಳಿಯಾದ 24 ಗಂಟೆಯೊಳಗಾಗಿ ಬುಧವಾರ ಸಾಯಂಕಾಲ ಅಕ್ರಮ ಮರಳು ಸಾಗಣೆ ತಡೆಯಲು ಹೋದ ಗಣಿ ಇಲಾಖೆಯ ನೌಕರನ ಮೇಲೆ ಅಕ್ರಮ ಮರಳು ದಂಧೆಕೋರರು ಹಲ್ಲೆ ಮಾಡಲಾಗಿದೆ.

ನೌಕರ ನೀಲಪ್ಪ ಇವರಿಗೆ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ತಲೆಯಿಂದ ರಕ್ತಸ್ರಾವ ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಭಂಡಾರಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...