ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿ ಜಪ್ತಿ

Date:

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿ 14 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಘಟನೆ ಬಳಿಕ ಎಚ್ಚೆತ್ತ ಅಧಿಕಾರಿಗಳು ದೇವನಹಳ್ಳಿ, ಚಿಕ್ಕಮಗಳೂರು ಸೇರಿದಂತೆ ಕೆಲ ಕಡೆ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿಯನ್ನು ಬುಧವಾರ ಜಪ್ತಿ ಮಾಡಿದ್ದಾರೆ.

ಅಗ್ನಿ ದುರಂತದ ಬಳಿಕ ಮುಖ್ಯಮಂತ್ರಿ ಅವರು ಸಭೆ ನಡೆಸಿ ಅಧಿಕಾರಿಗಳು ಪಟಾಕಿ ಮಳಿಗೆಗಳ ಮೇಲೆ ಕಣ್ಣಿಡಲು ಸೂಚನೆ ನೀಡಿದ್ದರು. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಲ್ಲಿ ಅಧಿಕಾರಿಗಳು ಪಟಾಕಿ ಮಳಿಗೆಗಳ ಮೇಲೆ ದಾಳಿ ಮಾಡಿದ್ದಾರೆ.

ದೇವನಹಳ್ಳಿ ತಹಶೀಲ್ದಾರ್, ವಿಜಯಪುರ ಪೊಲೀಸರು ಕಾರ್ಯಾಚರಣೆ ನಡೆಸಿ ದೇವನಹಳ್ಳಿ ಪಟ್ಟಣ, ಚನ್ನರಾಯಪಟ್ಟಣ ಮತ್ತು ವಿಜಯಪುರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿ ಜಪ್ತಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರದಲ್ಲಿ ಎಂಟಿಆರ್ ರಮೇಶ್ ಎಂಬುವವನಿಗೆ ಸೇರಿದ ಪಟಾಕಿ ಗೋದಾಮಿನಮೇಲೆ ತಹಶಿಲ್ದಾರ್ ಶಿವರಾಜ್, ಇನ್ಸ್ಪೆಕ್ಟರ್​​ ಪ್ರಶಾಂತ್ ನೇತೃತ್ವದ ತಂಡ ದಾಳಿ ನಡೆಸಿ ದೀಪಾವಳಿ ಹಬ್ಬಕ್ಕೆ ಮಾರಾಟ ಮಾಡಲು ಅಕ್ರಮವಾಗಿ ಗೋದಾಮಿನಲ್ಲಿ ದಾಸ್ತಾನು ಮಾಡಲಾಗಿದ್ದ ಸುಮಾರು ₹25 ಲಕ್ಷ ಮೌಲ್ಯದ ಪಟಾಕಿ ವಶಕ್ಕೆ ಪಡೆಯಲಾಗಿದೆ. ಪೊಲೀಸರು ದಾಳಿ ಮಾಡುತ್ತಿದ್ದಂತೆ ಗೋದಾಮಿನ​​ ಮಾಲೀಕ ಪರಾರಿಯಾಗಿದ್ದಾನೆ.

ಚಿಕ್ಕಮಗಳೂರು ನಗರದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಟಾಕಿಗಳನ್ನು ಜಪ್ತಿ ಮಾಡಿದ್ದಾರೆ. ಚಿಕ್ಕಮಗಳೂರು ನಗರ, ಬಸವನಹಳ್ಳಿ ಠಾಣೆಯ ಪೊಲೀಸರು ದಾಳಿ ನಡೆಸಿ ಪರವಾನಗಿ ಪಡೆಯದೆ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ₹7 ಲಕ್ಷದ 60 ಸಾವಿರ ಮೌಲ್ಯದ ಪಟಾಕಿ ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮ್ಟೆ ಸೂಚನೆ ಮೇರೆಗೆ ಶರೀಫ್ ಗಲ್ಲಿ, ಬಿ.ಎಮ್ ರಸ್ತೆ, ಹಾಲೆನಹಳ್ಳಿ ಬಳಿ ಇರುವ ಗೋದಾಮಗಳ ಮೇಲೆ ದಾಳಿ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 18 ಮಾದರಿಯಲ್ಲಿ ​​​ಸೈಬರ್​​ ಕ್ರೈಂ; ಬರೋಬ್ಬರಿ ₹470 ಕೋಟಿ ವಂಚನೆ

ರಾಜಕೀಯ ಕಾರ್ಯಕ್ರಮ, ಮೆರವಣಿಗೆ, ಮದುವೆ, ಗಣೇಶ ಹಬ್ಬ, ಸೇರಿದಂತೆ ಇತರೆ ಕಾರ್ಯಕ್ರಮಗಳಲ್ಲಿ ಯಾವುದೇ ರೀತಿಯ ಪಟಾಕಿ ಬಳಕೆಮಾಡದಂತೆ ಸರ್ಕಾರ ಆದೇಶ ಹೊರಡಿಸಿದೆ. ದೀಪಾವಳಿ ಹಬ್ಬದಂದು ಕೇವಲ ಹಸಿರು ಪಟಾಕಿಯನ್ನಷ್ಟೇ ಸಿಡಿಸಿ ಹಬ್ಬ ಆಚರಿಸಲು ಸರ್ಕಾರ ಸಲಹೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...