ಬೀದರ | ಬಹಮನಿ ಕೋಟೆ ಮೇಲೆ ಲೋಹದ ಹಕ್ಕಿಗಳ ಚಿತ್ತಾರ : ಕಣ್ತುಂಬಿಕೊಂಡ ಜನ

Date:

ಬೀದರ್ ಭಾರತೀಯ ವಾಯುಪಡೆ‌ ತರಬೇತಿ ಕೇಂದ್ರಕ್ಕೆ ಸೇರಿದ ಒಂಬತ್ತು ಸೂರ್ಯಕಿರಣ ವಿಮಾನಗಳ ಏರೋಬ್ಯಾಟಿಕ್ ತಂಡದಿಂದ ಶನಿವಾರ ಬಹಮನಿ ಕೋಟೆ ಮೇಲೆ ಆಯೋಜಿಸಿದ ಏರ್ ಶೋ ನೋಡುಗರ ಕಣ್ಮನ ಸೆಳೆಯಿತು.

WhatsApp Image 2024 09 21 at 8.56.43 PM 1

ಸೂರ್ಯಕಿರಣ ವಿಮಾನಗಳ ಟೀಂ ಲೀಡರ್ ಗ್ರುಪ್ ಕ್ಯಾಪ್ಟನ್ ಗುರುಪ್ರಿತ್ ಸಿಂಗ್ ದಿಲ್ಲೋನ್ ನೇತೃತ್ವದಲ್ಲಿ ನಡೆದ ಏರ್ ಶೋ ಕಾರ್ಯಕ್ರಮದಲ್ಲಿ 9 ಸೂರ್ಯಕಿರಣ ವಿಮಾನಗಳು ವಿವಿಧ ರೀತಿಯಲ್ಲಿ ಆಕರ್ಷಕ ಪ್ರದರ್ಶನ ನೋಡುಗರನ್ನು ಮಂತ್ರಮುಗ್ದಗೊಳಿಸಿತು.

WhatsApp Image 2024 09 21 at 8.56.43 PM 1 1

ಬೀದರ್‌ ನಗರದ ಬಹಮನಿ ಕೋಟೆಯ ಮೇಲೆ ಲೋಹದ ಹಕ್ಕಿಗಳ ಚಿತ್ತಾರ ಕಂಡ ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಭ್ರಮಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೂರ್ಯಕಿರಣ ವಿಮಾನಗಳು ಆಕಾಶದಲ್ಲಿ ಮೇಲಿನಿಂದ ಕೆಳಗೆ. ಪರಸ್ಪರ ಮುಖಾಮುಖಿ ಕ್ರಾಸಿಂಗ್, ಬ್ಯಾರಲ್ ರೋಲ್ ಸೇರಿದಂತೆ ಕೇಸರಿ, ಬಿಳಿ, ಹಸಿರು ಬಣ್ಣ ಹಾಗೂ ವಿವಿಧ ವೈಮಾನಿಕ ಪ್ರದರ್ಶನ ನೋಡುಗರನ್ನು ಮೂಕವಿಸ್ಮಿತಗೊಳಿಸಿ ಆಕಾಶದಲ್ಲಿ ಚಿತ್ತಾರಗಳನ್ನು ಮೂಡಿಸಿದವು. ಬಾನಂಗಳದಲ್ಲಿ ವಿಮಾನಗಳು ಯಾವ ದಿಕ್ಕಿನಿಂದ ಹಾರುತ್ತಿವೆ ಎನ್ನುವುದನ್ನು ಜನರು ಕುತೂಹಲದಿಂದ ವೀಕ್ಷಿಸುತ್ತಿದ್ದರು.

WhatsApp Image 2024 09 21 at 8.56.43 PM 2

1996ರಲ್ಲಿ ಆರಂಭಿಸಲಾದ ಸೂರ್ಯಕಿರಣ ಏರೋಬ್ಯಾಟಿಕ್ ತಂಡದ ವಿಮಾನಗಳು ಇಲ್ಲಿಯವರೆಗೆ ಭಾರತ ಮಾತ್ರವಲ್ಲದೆ ಶ್ರೀಲಂಕಾ, ಸಿಂಗಾಪುರ್, ದುಬೈ ಸೇರಿದಂತೆ ಇತರೆ ದೇಶಗಳಲ್ಲಿ 600 ಕ್ಕಿಂತಲೂ ಹೆಚ್ಚಿನ ಪ್ರದರ್ಶನಗಳನ್ನು ನೀಡಿದೆ. 9 ವಿಮಾನಗಳ ಈ ಏರ್ ಕ್ರಾಪ್ಟ್ ತಂಡ ಹೊಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ದೇಹ ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ಕೊಲೆಗಾರ

ಏರ್ ಶೋ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಮೋಹ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ವಾಯುಪಡೆ ತರಬೇತಿ ಕೇಂದ್ರದ ಕಮೊಡೋರ್ ಪರಾಗಲಾಲ್, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಕುಟುಂಬ ಸಮೇತವಾಗಿ ಆಗಮಿಸಿ ವೀಕ್ಷಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...