ಡಿಜಿಟಲ್ ಯೋಜನೆಗಳ ಅನುಷ್ಠಾನ: ಬಿಎಂಟಿಸಿ ಹೆಗಲಿಗೆ ಎಎಸ್‌ಟಿಆರ್‌ಟಿಯುವಿನಿಂದ ‘ಎಕ್ಸಲೆನ್ಸ್ ಪ್ರಶಸ್ತಿ’

Date:

ಡಿಜಿಟಲ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದ ಹಿನ್ನೆಲೆಯಲ್ಲಿ ಬಿಎಂಟಿಸಿ ಹೆಗಲಿಗೆ ಎಸ್‌ಟಿಆರ್‌ಟಿಯುವಿನಿಂದ ‘ಎಕ್ಸಲೆನ್ಸ್ ಪ್ರಶಸ್ತಿ’ ಲಭಿಸಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಆಸೋಸಿಯೇಷನ್ ಆಫ್ ಸ್ಟೇಟ್ ರೋಡ್ ಟ್ರಾನ್ಸ್ಪೋರ್ಟ್ ಅಂಡರ್ಟೇಕಿಂಗ್ಸ್ (ASRTU) ಮೂಲಕ ಪ್ರದಾನಿಸಲಾದ ಪ್ರಖ್ಯಾತ ರಾಷ್ಟ್ರೀಯ ಪಬ್ಲಿಕ್ ಬಸ್ ಟ್ರಾನ್ಸ್ಪೋರ್ಟ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಡಿಜಿಟಲ್ ಪ್ರಾಕ್ಟಿಸಸ್ ಅಡಿಯಲ್ಲಿ ಹೊಸ ಉಪಕ್ರಮಗಳ ವಿಭಾಗದಲ್ಲಿ ಗೆದ್ದಿದೆ.

ಬೆಂ.ಮ.ಸಾ.ಸಂಸ್ಥೆಯ ಮೆಟ್ರೋ ಫೀಡರ್ ಕ್ಯೂ ಆರ್ ಕೋಡ್ ಸೇವೆಗಳನ್ನು ಗುರುತಿಸಿ ಈ ಪ್ರಶಸ್ತಿ ಲಭಿಸಿದೆ. ಪ್ರಯಾಣಿಕರ ಅನುಕೂಲಕ್ಕೆ ಕ್ಯೂ ಆರ್ ಕೋಡ್ ಸೇವೆಯನ್ನು ತೊಡಗಿಸಿಕೊಂಡು, ಸಾರ್ವಜನಿಕ ಸಾರಿಗೆಯನ್ನು ಆಧುನಿಕಗೊಳಿಸಲು ಮತ್ತು ಡಿಜಿಟಲ್ ಪರಿಹಾರಗಳ ಮೂಲಕ ಸೇವಾ ಸರಬರಾಜು ಮಾಡುವ ಬದ್ಧತೆಯನ್ನು ಗುರುತಿಸಿ ಈ ಪ್ರಶಸ್ತಿ ಲಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್, ಅಧಿಕಾರಿ ಡಾ.ಕಿರಣ್ ಬೇಡಿ ಪ್ರಶಸ್ತಿ ಪ್ರದಾನ ಮಾಡಿದರು. ಬೆಂಮಸಾಸಂಸ್ಥೆಯ ಗಣಕ ಶಾಖೆಯ ಸಹಾಯಕ ಸಂಚಾರ ಅಧೀಕ್ಷಕರಾದ ಶ್ರೀಮತಿ ಯಶೋಧ.ಬಿ.ಎಸ್ ನಿಗಮದ ಪರವಾಗಿ ಪ್ರಶಸ್ತಿಗಳನ್ನು ಸ್ವೀಕರಿಸಿದರು.

ಇದೇ ವೇಳೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬೆಂಮಸಾಸಂಸ್ಥೆಯ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಸವಿತಾ, (ಬಿಲ್ಲೆ ಸಂಖ್ಯೆ 8617), ಶ್ರೀಮತಿ ಸಿ.ಎನ್.ಕುಸುಮ(ಬಿಲ್ಲೆ ಸಂಖ್ಯೆ 8625) ಮತ್ತು ಶ್ರೀಮತಿ ಮಂಜುಳಾ, (ಬಿಲ್ಲೆ ಸಂಖ್ಯೆ 9232) ಇವರುಗಳಿಗೆ ಸಂಸ್ಥೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಮತ್ತು ಎಎಸ್ಆರ್‌ಟಿಯು ನಿರ್ವಾಹಕ ನಿರ್ದೇಶಕ ಸೂರ್ಯಕಿರಣ್ ಉಪಸ್ಥಿತರಿದ್ದರು.

WhatsApp Image 2025 03 10 at 11.16.31 AM 1

ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ASRTU) ಅಡಿಯಲ್ಲಿ ಸದಸ್ಯತ್ವವನ್ನು ಹೊಂದಿವೆ. ಒಕ್ಕೂಟವು 13-08-1965 ರಂದು ಅಸ್ತಿತ್ವಕ್ಕೆ ಬಂದಿತ್ತು. ಇದು ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ನಿರ್ದೇಶನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಬೆಂ.ಮ.ಸಾ.ಸಂಸ್ಥೆಯ ಮೆಟ್ರೋ ಫೀಡರ್ QR ಕೋಡ್ ಸೇವೆಗಳು ಪ್ರಯಾಣಿಕರಿಗೆ ಮೆಟ್ರೋ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುವ ಬಸ್ ಸೇವೆಗಳನ್ನು ಉಪಯೋಗಿಸಲು ಅವಕಾಶ ನೀಡುತ್ತವೆ, ಇದು ಅವರ ಪ್ರಯಾಣವನ್ನು ಸರಳಗೊಳಿಸುತ್ತದೆ. ಟಿಕೆಟ್ ಪ್ರಕ್ರಿಯೆಯಲ್ಲಿ QR ಕೋಡ್‌ಗಳನ್ನು ಸಂಯೋಜನೆ ಮಾಡುವ ಮೂಲಕ, ಸಂಸ್ಥೆಯು ಪ್ರಯಾಣಿಕರಿಗೆ ತಮ್ಮ ಪ್ರಯಾಣಗಳನ್ನು ಡಿಜಿಟಲ್ ಆಗಿ ಪಾವತಿಸುವಲ್ಲಿ ಹೆಚ್ಚು ಅನುಕೂಲ ನೀಡಿದೆ. ಈ ನಾವೀನ್ಯತೆಯು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮತ್ತು ಪ್ರಯಾಣಿಕರಿಗೆ ತಡೆರಹಿತ, ಪರಿಣಾಮಕಾರಿ ಅನುಭವವನ್ನು ಒದಗಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯಾಪಕ ಪ್ರಯತ್ನಗಳ ಭಾಗವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...