ದೇವರಾಜ ಅರಸು ನಾಡು ಕಂಡ ಮುತ್ಸದ್ದಿ ರಾಜಕಾರಣಿ: ಸಿಎಂ ಸಿದ್ದರಾಮಯ್ಯ ಬಣ್ಣನೆ

Date:

  • ರಾಜಕೀಯ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯ ತರಲು ಅರಸು ಶ್ರಮಿಸಿದರು
  • ಅರಸು ಸ್ಮರಣಾರ್ಥ ಮಾಲಿನ್ಯ ತಡೆಗಟ್ಟುವ ವಿಶೇಷ ಗಿಡ ನೆಟ್ಟ ಸಿದ್ದರಾಮಯ್ಯ

ದೇವರಾಜ ಅರಸು ಅವರು ನಾಡು ಕಂಡ ಮುತ್ಸದ್ದಿ ರಾಜಕಾರಣಿ. ಸರ್ಕಾರ ಗೌರವಯುತವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ. ಅವರು ಮುಖ್ಯಮಂತ್ರಿಯಾಗಿ ಹಾಗೂ ಅವರ ಜೀವಿತ ಕಾಲದಲ್ಲಿ ಮಾಡಿದ ಕೆಲಸ ನಮಗೆ ಸ್ಪೂರ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ದೇವರಾಜ ಅರಸು ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಮಾಲಿನ್ಯ ತಡೆಗಟ್ಟುವ ವಿಶೇಷ ಮಡಗಾಸ್ಕರ್ ದೇಶದ ಗಿಡ ನೆಟ್ಟು ಮಾತನಾಡಿದ ಅವರು, “ಅನೇಕ ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು. ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿಯನ್ನು ನಿಲ್ಲಿಸಿದ್ದು, ರೈತರ ಸಾಲ ವಿಮೋಚನಾ ಕಾಯ್ದೆ, ಹಾವನೂರು ಆಯೋಗ ರಚಿಸಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ, ಧ್ವನಿಯಿಲ್ಲದ ಜನರ ದನಿಯಾದರು. ಸಾಮಾಜಿಕ ನ್ಯಾಯದ ಹರಿಕಾರ” ಎಂದು ತಿಳಿಸಿದರು.

“ಸದಾ ಹಸಿರಾಗಿರುವ, ಸುಮಾರು 40 ಅಡಿ ಎತ್ತರ ಬೆಳೆಯುವ, ಮಾಲಿನ್ಯ ತಡೆಗಟ್ಟುವ ವಿಶೇಷ ಗಿಡವನ್ನು ಅರಸು ಅವರ ನೆನಪಿಗೆ ವಿಧಾನಸೌಧ ಆವರಣದಲ್ಲಿ ನೆಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸ್ಮರಣೆ | ಎಲ್ಲಾ ಕಾಲಕ್ಕೂ ಸಲ್ಲುವ ಅರಸು ಚಿಂತನೆ

ರಾಜಕೀಯ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯ

ಅನೇಕ ಜನರನ್ನು ಶಾಸಕರನ್ನಾಗಿಸಿ ಅವರಿಗೆ ಪ್ರಾತಿನಿಧ್ಯ ನೀಡುವ ಕೆಲಸ ಮಾಡಿದರು. ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದರು. ಅಧಿಕಾರ ಎಲ್ಲರಿಗೂ ದೊರೆಯಬೇಕೆಂಬ ನಂಬಿಕೆ ಉಳ್ಳವರಾಗಿದ್ದರು. ಉಳುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡಿದವರು. ಅವರ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

“ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದಿಂದ 1972 ರಿಂದ 80 ರವರೆಗೆ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳು ಜನರ ಮನಸ್ಸಿನಲ್ಲಿ ಸದಾ ಉಳಿದಿವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...