ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ‘ಮಾನವ ಸರಪಳಿ’

Date:

ಹಮಸ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ವೇಳೆ ಗಾಝಾದ ಮೇಲೆ ಇಸ್ರೇಲ್ ನಿರಂತರವಾಗಿ ಬಾಂಬ್ ಸುರಿಯುತ್ತಿರುವುದನ್ನು ಖಂಡಿಸಿ, ಬೆಂಗಳೂರಿನಲ್ಲಿ ನಾಗರಿಕರು ಸೋಮವಾರ(ಅ.16) ಮಾನವ ಸರಪಳಿ ನಡೆಸುವ ಮೂಲಕ ಮೌನ ಪ್ರತಿಭಟನೆ ನಡೆಸಿದರು.

ಬಹುತ್ವ ಕರ್ನಾಟಕ ನೀಡಿದ್ದ ಕರೆಗೆ ಬೆಂಗಳೂರಿನ ಎಂಜಿ ರಸ್ತೆಯ ಮೆಟ್ರೋ ರೈಲು ನಿಲ್ದಾಣದ ಸಮೀಪ ಜಮಾವಣೆಗೊಂಡಿದ್ದ ಸಾವಿರಕ್ಕೂ ಅಧಿಕ ಮಂದಿ ನಾಗರಿಕರು, ಪ್ಯಾಲೆಸ್ತೀನ್ ಜೊತೆ ನಾವು ನಿಲ್ಲುತ್ತೇವೆ. ಇಸ್ರೇಲ್ ನಡೆಸುತ್ತಿರುವ ನರಮೇಧವನ್ನು ಖಂಡಿಸುತ್ತೇವೆ. ಗಾಝಾ ಮೇಲೆ ನಡೆಯುತ್ತಿರುವ ಅಕ್ರಮ ದಾಳಿಯನ್ನು ನಿಲ್ಲಿಸುವಂತೆ ಭಾರತ ಸರ್ಕಾರವು ಇಸ್ರೇಲ್ ಮೇಲೆ ಒತ್ತಡ ಹಾಕಬೇಕು ಎಂದು ಆಗ್ರಹಿಸಿದರು.

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಸಂಘರ್ಷ ನಿಲ್ಲಬೇಕೆಂದರೆ, ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ದೇಶವಾಗಿ ಗುರುತಿಸಿ ಅಲ್ಲಿನ ಜನರಿಗೆ ಮೂಲಭೂತ ಹಕ್ಕುಗಳು ನೀಡುವುದೇ ಪರಿಹಾರ ಎಂದು ಬರೆದಿದ್ದ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದೇಶಾಂಗ ಸಚಿವಾಲಯದ ವಕ್ತಾರರು ಇತ್ತೀಚೆಗೆ ಮಾಧ್ಯಮಗೊಂದಿಗೆ ಮಾತನಾಡಿದ್ದ ವೇಳೆ, ‘ಭಾರತವು ಯಾವಾಗಲೂ ಪ್ಯಾಲೆಸ್ತೀನ್ ಸಾರ್ವಭೌಮ, ಸ್ವತಂತ್ರ ಮತ್ತು ಕಾರ್ಯಸಾಧ್ಯವಾದ ರಾಜ್ಯವನ್ನು ಸ್ಥಾಪಿಸಲು ನೇರ ಮಾತುಕತೆಗಳ ಪುನರಾರಂಭವನ್ನು ಪ್ರತಿಪಾದಿಸುತ್ತದೆ ಹಾಗೂ ಇಸ್ರೇಲ್‌ನೊಂದಿಗೆ ಅಕ್ಕಪಕ್ಕದಲ್ಲಿ, ಶಾಂತಿಯಿಂದ ಸುರಕ್ಷಿತ ಮತ್ತು ಮಾನ್ಯತೆ ಪಡೆದ ಗಡಿಗಳಲ್ಲಿ ವಾಸಿಸುವ ಹಾಗೆ ಪ್ರತಿಪಾದಿಸುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸ್ವಾಗತಾರ್ಹ. ಈ ಗುರಿ ತಲುಪುವಂತೆ ವಿಶ್ವಸಂಸ್ಥೆ ಮೇಲೆ ಸಹ ಒತ್ತಡ ಹಾಕಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

gaza 1

ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಸದ್ಯಕ್ಕೆ ನಡೆಯುತ್ತಿರುವ ಯುದ್ಧದ ಬಗ್ಗೆ ತನಿಖೆ ನಡೆಸಬೇಕು ಹಾಗೂ ವರದಿಯನ್ನು ಬಹಿರಂಗಪಡಿಸಬೇಕು. ಪ್ಯಾಲೆಸ್ತೀನ್ ಪರ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಾಕಿರುವವರ ಮೇಲೆ, ಪ್ಯಾಲೆಸ್ತೀನ್ ಪರ ಪ್ರತಿಭಟಿಸುವವರ‌ ಮೇಲೆ ಪೊಲೀಸರ ಕ್ರಮವನ್ನು ಖಂಡಿಸುವುದಾಗಿ ತಿಳಿಸಿದರು.

ಪ್ಯಾಲೆಸ್ತೀನ್‌ಗೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡುವವರನ್ನು ಬಂಧಿಸುವುದು, ಪ್ರಕರಣ ದಾಖಲಿಸುವುದು ನಿಲ್ಲಬೇಕು. ಭಾರತೀಯ ವಾಕ್ ಸ್ವಾತಂತ್ರ್ಯವನ್ನು ಕೇಂದ್ರ ಸರ್ಕಾರ ಹಾಗೂ ಎಲ್ಲ ರಾಜ್ಯ ಸರ್ಕಾರಗಳು ಕಾಪಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕೆಲವರ ಬಂಧನ

ಮೌನ ಪ್ರತಿಭಟನೆ ನಡೆಸಿದ್ದರೂ ಕೂಡ ಮುಂಚೂಣಿಯಲ್ಲಿದ್ದ ಕೆಲವು ಪ್ರತಿಭಟನಾಕಾರರನ್ನು ಕಬ್ಬನ್ ಪಾರ್ಕ್‌ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದುದನ್ನು ಗಮನಿಸಿದ ಪೊಲೀಸರು, ಮುನ್ನೆಚ್ಚರಿಕಾ ಕ್ರಮವಾಗಿ ಠಾಣೆಗೆ ಕರೆದೊಯ್ದಿದ್ದಾರೆ. ವಶಕ್ಕೆ ಪಡೆಯುವ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರೊಂದಿಗೆ ವಾಗ್ವಾದವೂ ನಡೆಯಿತು.

vinay

ಈ ಮೌನ ಪ್ರತಿಭಟನೆಗೆ ವಿವಿಧ ಜನಪರ ಸಂಘಟನೆಗಳ ಪದಾಧಿಕಾರಿಗಳು ಬೆಂಬಲ ಸೂಚಿಸಿ, ಭಾಗವಹಿಸಿದ್ದರು. ಈ ವೇಳೆ ಬಹುತ್ವ ಕರ್ನಾಟಕದ ವಿನಯ್ ಶ್ರೀನಿವಾಸ್, ಮಧು ಭೂಷಣ್, ಮಮತಾ ಸಾಗರ್, ಕ್ಲಿಫ್ಟನ್ ರೊಜಾರಿಯೋ, ನಿಶಾ, ನರಸಿಂಹ ಮೂರ್ತಿ, ತೌಸೀಫ್ ಮಸೂದ್, ತನ್ವೀರ್ ಅಹ್ಮದ್, ಸೋಲಿಡಾರಿಟಿ ಯೂತ್ ಮೂಮೆಂಟ್‌ನ ಲಬೀದ್ ಶಾಫಿ, ದಾನಿಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...