ಸಿಎಂ ಸಿದ್ಧರಾಮಯ್ಯ ಬೆಂಬಲಿಸಿ ಅಹಿಂದ ಸಂಘಟನೆಯಿಂದ ಇಂದು ‘ಶಿಕಾರಿಪುರ’ ಬಂದ್‌ಗೆ ಕರೆ

Date:

ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿದೆ. ಇದನ್ನು ಖಂಡಿಸಿ ಸೆ.26ರಂದು(ಇಂದು) ಶಿಕಾರಿಪುರ ಪಟ್ಟಣವನ್ನು ಸಂಪೂರ್ಣವಾಗಿ ಬಂದ್ ಮಾಡಲು ತಾಲೂಕು ಅಹಿಂದ ಸಂಘಟನೆ ಕರೆ ನೀಡಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಶಿಕಾರಿಪುರ ತಾಲೂಕು ಅಹಿಂದ ಒಕ್ಕೂಟದ ಯುವ ಘಟಕದ ಅಧ್ಯಕ್ಷ ಮಾಲತೇಶ್, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜಕಾರಣದಲ್ಲಿ ಬಿಳಿ ಹಾಳೆಯಂತಿರುವ ಸಿದ್ದರಾಮಯ್ಯನವರಿಗೆ ಕಳಂಕ ಅಂಟಿಸಲು ಕುತಂತ್ರ ನಡೆಸಿದ್ದಾರೆ. ಈ ಉದ್ದೇಶಕ್ಕಾಗಿ ಮುಡಾ ಹಗರಣ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಂದ್ 4

ಬಿಜೆಪಿ, ಜೆಡಿಎಸ್ ನಾಯಕರ ಕುತಂತ್ರವನ್ನು ಖಂಡಿಸಿ ಬಂದ್‌ಗೆ ಕರೆ ನೀಡಲಾಗಿದೆ. ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ವ್ಯಾಪಾರಸ್ಥರು ಅಂಗಡಿ ಮುಂಗಟ್ಟು ಬಂದ್‌ ಮಾಡಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸಂಜೆ ಆರು ಗಂಟೆಯವರೆಗೆ ಈ ಬಂದ್ ಇರಲಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ನೀಡಿರುವಂತಹ ಸಿದ್ದರಾಮಯ್ಯ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆಸಲಾಗುತ್ತಿದೆ. ಇದನ್ನು ಜನತೆ ವಿರೋಧಿಸಬೇಕು. ಬಂದ್‌ಗೆ ಎಲ್ಲರೂ ಸಹಕರಿಸಬೇಕು ಎಂದು ಇಂದು ಬೆಳಗ್ಗಿನಿಂದಲೇ ಮೈಕ್ ಮೂಲಕ ಘೋಷಣೆ ಮಾಡಲಾಗಿತ್ತು. ಶಾಲಾ-ಕಾಲೇಜುಗಳು ಎಂದಿನಂತೆ ನಡೆಯುತ್ತಿದೆ.

ಇದನ್ನು ಓದಿದ್ದೀರಾ? ಬಾಗಲಕೋಟೆ | ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಬಂದ್‌ ಕರೆಗೆ ಸ್ವಯಂಪ್ರೇರಿತವಾಗಿ ಸಾರ್ವಜನಿಕರು ಸ್ಪಂದಿಸಿದ್ದು, ಶಿಕಾರಿಪುರ ಪಟ್ಟಣದಲ್ಲಿ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟುಗಳು ಬಂದ್ ಆಗಿದೆ. ಸಾರಿಗೆ ಕೂಡ ಬಂದ್ ಆಗಿದೆ. ಸ್ವಂತ ವಾಹನ ಇರುವವರು ಓಡಾಡುತ್ತಿದ್ದಾರೆ. ಆದರೂ, ಶಿಕಾರಿಪುರ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಪ್ರತಿಭಟನೆ

ಅಲ್ಲದೇ, ತಾಲೂಕು ಅಹಿಂದ ಸಂಘಟನೆಯ ವತಿಯಿಂದ ಬಿಜೆಪಿ-ಜೆಡಿಎಸ್‌ ವಿರುದ್ಧ ಪ್ರತಿಭಟನೆ ಕೂಡ ಹಮ್ಮಿಕೊಳ್ಳಲಾಗಿದೆ.

ನಗರದ ಕನಕ ಪಾರ್ಕ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮಾಲಾರ್ಪಣೆ ಮಾಡಲಾಯಿತು. ನಂತರ ಖಾಸಗಿ ಬಸ್ ನಿಲ್ದಾಣದವರೆಗೆ ಬೃಹತ್ ಮೆರವಣಿಗೆ ಕೂಡ ಹಮ್ಮಿಕೊಳ್ಳಲಾಯಿತು.

ಪ್ರತಿಭಟನೆಯಲ್ಲಿ ಅಹಿಂದ ಯುವ ಘಟಕದ ಅಧ್ಯಕ್ಷ ನಗರದ ಮಾಲತೇಶ್, ಪುರಸಭಾ ಸದಸ್ಯ ಉಳ್ಳಿ ದರ್ಶನ್, ಭಂಡಾರಿ ಮಾಲತೇಶ್, ತಾಲೂಕು ಅಹಿಂದ ಸಂಘಟನೆ ಅಧ್ಯಕ್ಷ ಕಾಗಿನಲ್ಲಿ ರಂಗಪ್ಪ, ಕಸಬಾ ಸೊಸೈಟಿ ನಿರ್ದೇಶಕ ನಗರದ ರವಿ ಕಿರಣ್, ಡಿ.ಆರ್.ಗಿರೀಶ್, ಅಹಿಂದ ಮುಖಂಡರಾದ ನಗರದ ರವೀಂದ್ರ ಕಿಟ್ಟಿ, ಬನ್ನೂರು ಸುನಿಲ್ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...