ಗದಗ | ರೈತ ಸಂಘಟನೆಗಳು ಅನ್ನದಾತರಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸಬೇಕು: ಬೈರೇಗೌಡ

Date:

ನಲವತ್ತು ನಾಲ್ಕು ವರ್ಷಗಳ ಹಿಂದೆ ರೈತರ ಮೇಲೆ ನಡೆದ ದೌರ್ಜನ್ಯ ಹಿನ್ನೆಲೆಯಿಂದ ಈ ರೈತ ಸಂಘಟನೆ ಹುಟ್ಟಿಕೊಂಡಿತು. ರೈತ ಸಂಘಟಕರೆಲ್ಲ ನಾನು ಎಂಬ ಅಹಂಕಾರ ಬಿಟ್ಟು ನಾವು ಎಂಬ ಭಾವನೆ ಎಲ್ಲ ಧರ್ಮದ ಜಾತಿಗಳನ್ನು ದೂರವಿಟ್ಟು ನೊಂದ ರೈತರ ಅನ್ನದಾತರಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸಬೇಕು ಎಂದು ರೈತ ಮುಖಂಡ ಬೈರೇಗೌಡ ಅಭಿಪ್ರಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುರಣಗಿ ಗ್ರಾಮ ಘಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ರೈತರು ಬಹಳ ಕಷ್ಟದಲ್ಲಿ ಜೀವನ ಸಾಗಿಸಸುತ್ತಿದ್ದಾರೆ. ರೈತ ಸಂಘಟನೆಗಳು ನಿರಂತರ ಹೋರಾಟದಿಂದ ನ್ಯಾಯ ದೊರಕಿಸಿಕೊಡಬೇಕು. ಕೊಳವೆ ಬಾವಿಗೆ ನೀರಾವರಿ ಇರುವಂತ ರೈತರಿಗೆ ಆಧಾರ್ ಲಿಂಕ್ ಮಾಡುವಂತೆ ಸರಕಾರದ ನಿರ್ಧಾರ ಮಾಡಿದೆ. ಇದನ್ನು ನಾವು ವಿರೋಧಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 30 at 2.19.30 PM

ಹಾವೇರಿ ಜಿಲ್ಲಾಧ್ಯಕ್ಷ ಹನುಮಂತಪ್ಪ ಹುಚ್ಚಣ್ಣವರ್ ಮಾತನಾಡಿ, “ರೈತರು ಈ ವರ್ಷ ಸ್ಪಿಂಕ್ಲರ್ ಗೆ ಅರ್ಜಿ ಹಾಕಿದ್ರೆ ಒಂದು ವರ್ಷದ ನಂತರ ಅಥವಾ ಎರಡು ವರ್ಷದ ನಂತರ ಕೃಷಿ ಇಲಾಖೆ ರೈತರಿಗೆ ಒದಗಿಸುತ್ತಿದೆ. ಗದಗ ಜಿಲ್ಲಾ ರೈತರಿಗೆ ಎಷ್ಟು ಅನ್ಯಾಯ ಆಗುತ್ತಿದೆ ಎಂಬುದನ್ನು ಕಾಣುವಾಗ ಕಂಡು ಬೇಸರವಾಗುತ್ತಿದೆ. ಹಾವೇರಿ ಜಿಲ್ಲೆಯ ರೈತರಿಗೆ ತ್ವರಿತವಾಗಿ ಎಲ್ಲಾ ಇಲಾಖೆಯಿಂದ ನೆರವು ಸಿಗುತ್ತದೆ. ಗದಗ ಜಿಲ್ಲೆಯ ರೈತರಿಗೆ ಬಹಳ ಅನ್ಯಾಯ ಆಗುತ್ತಿದೆ. ನೊಂದಿರುವ ರೈತರಿಗೆ ನ್ಯಾಯ ದೊರಕಿಸಿಕೊಡೋಣ” ಎಂದರು.

ರಾಜ್ಯ ಹಸಿರು ಸೇನೆ ರಾಜ್ಯ ಅಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಮಾತನಾಡಿದರು. ಹೂವಿನ ಶಿಗ್ಲಿಯ ವಿರಕ್ತಮಠದ ಶ್ರೀ ಮನಿಪ್ರ ಚನ್ನವೀರಮಹಾಸ್ವಾಮಿಗಳು ಉದ್ಘಾಟಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಟಿ ಡಿ ಬಸವರಾಜ ಮತ್ತು ಸೂರಣಗಿ ಗ್ರಾಮ ಘಟಕ ಅಧ್ಯಕ್ಷ ಬಸವ ವಿ ಮಾದಾಪೂರಮಠ, ಗ್ರಾಮ ಘಟಕ ಉಪಾಧ್ಯಕ್ಷ ಚಂದ್ರಶೇಖರ್ ಚ ಶಿರನಹಳ್ಳಿ ಸೂರಣಗಿ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.

ವರದಿ: ಕೇಶವ ಕಟ್ಟಿಮನಿ. ಸಿಟಿಝನ್ ಜರ್ನಲಿಸ್ಟ್, ಲಕ್ಷ್ಮೇಶ್ವರ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...