ಬೀದರ್‌ | ದಲಿತರ ಮೇಲೆ ನಿಲ್ಲದ ದೌರ್ಜನ್ಯ: ಭಾಲ್ಕಿ ಡಿವೈಎಸ್‌ಪಿ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಬೀದರ ಜಿಲ್ಲೆಯ ಭಾಲ್ಕಿ ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟಿ ಅಧಿಕಾರ ವಹಿಸಿಕೊಂಡ ಬಳಿಕ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ಘಟನೆಗಳು ನಡೆಯುತ್ತಿವೆ. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಪ್ರತಿಭಟನೆ ನಡೆಸಿದರು.

ಬೀದರ್ ನಗರದ ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದಿಂದ ಭಗತ್‌ ಸಿಂಗ್‌ ವೃತ್ತ, ತಹಸೀಲ್‌ ಕಚೇರಿ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರಿಗೆ ಸಲ್ಲಿಸಿದರು.

ʼಡಾ.ಬಿ.ಆರ್.‌ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಾಕಿ ಅವಹೇಳನಕಾರಿ ಪದ ಬಳಸಿ ಅವಮಾನಿಸಿದ ಆರೋಪಿಯನ್ನು ಬಂಧಿಸಿಲ್ಲ. ಈ ಕುರಿತು ಭಾಲ್ಕಿ ಪಟ್ಟಣ ಠಾಣೆಯಲ್ಲಿ 2023ರ ನವೆಂಬರ್‌ 4ರಂದು ಪ್ರಕರಣ ದಾಖಲಾದರೂ ಕ್ರಮ ಕೈಗೊಂಡಿಲ್ಲ. ಭಾಲ್ಕಿ ತಾಲೂಕಿನ ಮಳಚಾಪೂರ ಗ್ರಾಮದಲ್ಲಿ 2024ರ ಫೆ.9ರಂದು ನಡೆದಿರುವ ಸಂವಿಧಾನ ಜಾಗೃತಿ ಜಾಥಕ್ಕೆ ಅಡ್ಡಿ ಉಂಟು ಮಾಡಿ ಜೈ ಶ್ರೀರಾಮ ಘೋಷಣೆ ಕೂಗಿದವರ ವಿರುದ್ಧ ಪ್ರಕರಣ ದಾಖಲಿಸಲಿಲ್ಲ. ಹಲ್ಲೆ ಖಂಡಿಸಿ ಅದೇ ಗ್ರಾಮದ ಪರಿಶಿಷ್ಟ ಜಾತಿ ವ್ಯಕ್ತಿಯೊಬ್ಬರು ಠಾಣೆಗೆ ದೂರು ನೀಡಿದರೂ ಅದು ʼನಾಮ್‌ ಕೇ ವಾಸ್ತೆʼ ಪ್ರಕರಣ ದಾಖಲಾಗಿದೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಭಾಲ್ಕಿ ತಾಲೂಕಿನ ತಳವಾಡ (ಕೆ) ಗ್ರಾಮದ ಮೇಲ್ಜಾತಿ ಮಹಿಳೆ ಪರಿಶಿಷ್ಟ ಜಾತಿ ವ್ಯಕ್ತಿಗೆ ಜಾತಿ ನಿಂದನೆ ಮಾಡಿದರೂ, ಮಹಿಳೆ ಮೇಲೆ ಕ್ರಮಕೈಗೊಳ್ಳಲು ದೂರು ನೀಡಿದರೂ ಠಾಣೆಯಲ್ಲಿ ಹೆಸರಿಗಷ್ಟೇ ಪ್ರಕರಣ ದಾಖಲಾಗಿದೆ. ಹಾಲಹಿಪ್ಪರ್ಗಾ ಗ್ರಾಮದ ದಲಿತ ವ್ಯಕ್ತಿಗೆ ಮೇಲ್ಟಾತಿ ವ್ಯಕ್ತಿಗಳಿಂದ ಕರೆ ಮೂಲಕ ಜೀವ ಬೆದರಿಕೆ ಹಾಕಿದರು, ಈ ಕುರಿತು ಧನ್ನೂರ ಠಾಣೆಯಲ್ಲಿ 4 ಜನರ ಮೇಲೆ ಪ್ರಕರಣ ದಾಖಲಾಗಿದ್ದು, ಹೆಸರಿಗಷ್ಟೇ ಪ್ರಕರಣವಾಗಿದೆ. ಔರಾದ್‌ ತಾಲೂಕಿನ ಕೌಡಗಾಂವ್‌ ಗ್ರಾಮದ ಅಂಬೇಡ್ಕರ್‌ ವೃತ್ತ ತೆರವು ಪ್ರಕರಣ ಸಂಬಂಧ ಸಂತಪೂರ ಠಾಣೆಯಲ್ಲಿ ದೂರು ದಾಖಲಾದರೂ ಯಾರೊಬ್ಬರಿಗೂ ಬಂಧಿಸಿಲ್ಲʼ ಎಂದು ಆರೋಪಿಸಿದರು.

ʼಭಾಲ್ಕಿ ತಾಲೂಕಿನ ರಾಚಪ್ಪಾ ಗೌಡಗಾಂವ ಗ್ರಾಮದ ಪರಿಶಿಷ್ಟ ಜಾತಿ ಮಹಿಳೆ ಮೇಲೆ ಅದೇ ಗ್ರಾಮದ ಮೇಲ್ಟಾತಿಯ ಇಬ್ಬರು ಯುವಕರು ಮಾರಣಾಂತಿಕ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದರು. ಈ ಕುರಿತು ಕೊಲೆ ಯತ್ನ ಪ್ರಕರಣ ದಾಖಲಿಸದೇ ಹೆಸರಿಗಷ್ಟೇ ಪ್ರಕರಣ ದಾಖಲಿಸಿ ಪ್ರಕರಣ ಮುಚ್ಚಿ ಹಾಕುವ ಹುನ್ನಾರದಿಂದ ದಲಿತ ಮಹಿಳೆಗೆ ಯಾರೂ ಕೂಡ ಹಲ್ಲೆ ನಡೆಸಿಲ್ಲ ಎಂದು ಹೇಳಿರುವುದು ಖಂಡನೀಯʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಭಾಲ್ಕಿ ತಾಲೂಕಿನ ರಾಚಪ್ಪಾ ಗೌಡಗಾಂವ್‌ ಗ್ರಾಮದ ದಲಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಇಬ್ಬರು ಯುವಕರನ್ನು ಕೂಡಲೇ ಬಂಧಿಸಬೇಕು. ಭಾಲ್ಕಿ ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟಿ ಅಧಿಕಾರವಧಿಯಲ್ಲಿ ದಲಿತರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳನ್ನು ತನಿಖೆ ನಡೆಸಿ ದಲಿತರಿಗೆ ನ್ಯಾಯ ಒದಗಿಸಬೇಕು. ಸದರಿ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕುʼ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಈ ಸಂಧರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಮೂಲಭಾರತಿ, ಅಂಬೇಡ್ಕರ್ ಯುವ ಸೇನೆ ರಾಜ್ಯಾಧ್ಯಕ್ಷ ರಾಜಕುಮಾರ ಗುನಳ್ಳಿ, ಭೀಮ ಆರ್ಮಿ ಜಿಲ್ಲಾಧ್ಯಕ್ಷ ಅಂಬರೀಶ ಕುದುರೆ ಹಾಗೂ ಪ್ರಮುಖರಾದ ಮಹೇಶ ಗೋರನಾಳಕರ್, ಸಂತೋಷ ಏಣಕೋರೆ, ಪ್ರಕಾಶ ರಾವಣ, ಅವಿನಾಶ ದೀನೆ, ವೈಜಿನಾಥ ಶಿಂಧೆ, ಗೌತಮ್ ಪ್ರಸಾದ್, ಮಾರುತಿ ಸೂರ್ಯವಂಶಿ,‌ ಪ್ರದೀಪ ಭಾವಿಕಟ್ಟಿ, ಉತ್ತಮ ಕುಂದೆ, ಜಗನ್ನಾಥ ಹೊನ್ನಾ ಸೇರಿದಂತೆ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...