ಕೇರಳದಲ್ಲಿ ಅಮೀಬಾ ವೈರಸ್ ಪ್ರಕರಣ(ಮೆದುಳು ಜ್ವರ)ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಚಾಮರಾಜನಗರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಚಾಮರಾಜನಗರ ಜಿಲ್ಲೆಯ ಗಡಿಭಾಗದಲ್ಲಿ, ವಿಶೇಷವಾಗಿ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರಿಗೆ ಮೆದುಳು ತಿನ್ನುವ ಅಮೀಬಾದ ಕುರಿತು ಕುರಿತು ಮಾಹಿತಿ ನೀಡಲಾಗುತ್ತಿದೆ.
“ಮೆದುಳು ಜ್ವರ ನೈಗ್ಲೇರಿಯಾ ಫೌಲೇರಿ ಎಂಬ ಪರಾವಲಂಬಿಯಿಂದ ಬರುವ ಅಪರೂಪದ ಕಾಯಿಲೆಯಾಗಿದೆ. ಕರ್ನಾಟಕದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದಾಗ್ಯೂ, ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯ” ಎಂದು ಗುಂಡ್ಲುಪೇಟೆ ತಾಲೂಕು ಆರೋಗ್ಯ ಅಧಿಕಾರಿ ಡಾ. ಅಲೀಂ ಪಾಷಾ ಬಿ ಆರ್ ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮತ್ತು ಸ್ವಚ್ಛತೆ ಕಾಪಾಡುವ ಕುರಿತು ಕರಪತ್ರಗಳನ್ನು ವಿತರಿಸಲಾಗುತ್ತಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವೈದ್ಯಾಧಿಕಾರಿಗಳ ತಂಡಗಳು ಈ ಜಾಗೃತಿ ಕಾರ್ಯದಲ್ಲಿ ನಿರತವಾಗಿವೆ.

ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು
ಮೆದುಳಿನ ಜ್ವರವನ್ನು ತಪ್ಪಿಸಲು ಬಯಸಿದರೆ, ಕಲುಷಿತ ನೀರಿನಲ್ಲಿ ಈಜುವುದು, ಡೈವಿಂಗ್ ಮಾಡುವುದು ಅಥವಾ ಕೆರೆಗಳು, ಕೊಳಗಳು ಮತ್ತು ಸರಿಯಾಗಿ ನಿರ್ವಹಿಸದ ಕೊಳಗಳಲ್ಲಿ ಮುಳುಗುವುದನ್ನು ತಪ್ಪಿಸುವುದು ಮುಖ್ಯ. ಮೂಗಿನ ಹೊಳ್ಳೆಗಳೊಳಗೆ ನೀರು ಹೋಗದಂತೆ ನೋಡಿಕೊಳ್ಳುವುದರಿಂದ ಅಮೀಬಾದ ಅನಿವಾರ್ಯ ಸಂಪರ್ಕವನ್ನು ಕಡಿಮೆ ಮಾಡಬಹುದು.
ಇದನ್ನೂ ಓದಿದ್ದೀರಾ? ಮೆದುಳು ಜ್ವರದ ಭೀತಿ ಬೇಡ, ಜಾಗೃತಿ ಇರಲಿ: ಸೋಂಕು ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ
1. ನಿಯಮಿತವಾಗಿ ಕ್ಲೋರಿನೀಕರಣ ಮಾಡಿಸಿಕೊಳ್ಳಬಹುದು.
2. ಬಾವಿಗಳು, ಟ್ಯಾಂಕ್ಗಳು ಮತ್ತು ಗೃಹಬಳಕೆಯ ನೀರು ಸಂಗ್ರಹಣೆ ಮಾಡುವ ನೀರಿನ ಮೂಲಗಳನ್ನು ಸ್ವಚ್ಛಗೊಳಿಸುವ ಮೂಲಕ ನೀರಿನ ಮಾಲಿನ್ಯವನ್ನು ಕಡಿಮೆ ಮಾಡಬಹುದು.
3. ಜನರು ಆರೋಗ್ಯದ ಬಗ್ಗೆ, ವಿಶೇಷವಾಗಿ ಬೇಸಿಗೆ ಸಮಯದಲ್ಲಿ ಆರೋಗ್ಯದ ಕುರಿತು ಮುಂಜಾಗೃತೆ ವಹಿಸಬೇಕು.
4. ಧಾರ್ಮಿಕ ಆಚರಣೆಗಳು ಅಥವಾ ನೀರಿನ ಬಳಕೆಯ ಅಗತ್ಯವಿರುವ ಚಟುವಟಿಕೆಗಳಲ್ಲಿ ಭಾಗವಹಿಸುವಾಗ ಜಾಗರೂಕರಾಗಿರಬೇಕು.





