ಕೇರಳದಲ್ಲಿ ಅಮೀಬಾ ವೈರಸ್ ಪ್ರಕರಣ ಹೆಚ್ಚಳ: ಚಾಮರಾಜನಗರ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಣೆ

Date:

ಕೇರಳದಲ್ಲಿ ಅಮೀಬಾ ವೈರಸ್ ಪ್ರಕರಣ(ಮೆದುಳು ಜ್ವರ)ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಚಾಮರಾಜನಗರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ಚಾಮರಾಜನಗರ ಜಿಲ್ಲೆಯ ಗಡಿಭಾಗದಲ್ಲಿ, ವಿಶೇಷವಾಗಿ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್​ಪೋಸ್ಟ್​​ನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರಿಗೆ ಮೆದುಳು ತಿನ್ನುವ ಅಮೀಬಾದ ಕುರಿತು ಕುರಿತು ಮಾಹಿತಿ ನೀಡಲಾಗುತ್ತಿದೆ.

“ಮೆದುಳು ಜ್ವರ ನೈಗ್ಲೇರಿಯಾ ಫೌಲೇರಿ ಎಂಬ ಪರಾವಲಂಬಿಯಿಂದ ಬರುವ ಅಪರೂಪದ ಕಾಯಿಲೆಯಾಗಿದೆ. ಕರ್ನಾಟಕದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದಾಗ್ಯೂ, ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯ” ಎಂದು ಗುಂಡ್ಲುಪೇಟೆ ತಾಲೂಕು ಆರೋಗ್ಯ ಅಧಿಕಾರಿ ಡಾ. ಅಲೀಂ ಪಾಷಾ ಬಿ ಆರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುನ್ನೆಚ್ಚರಿಕೆ ಕ್ರಮವಾಗಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮತ್ತು ಸ್ವಚ್ಛತೆ ಕಾಪಾಡುವ ಕುರಿತು ಕರಪತ್ರಗಳನ್ನು ವಿತರಿಸಲಾಗುತ್ತಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವೈದ್ಯಾಧಿಕಾರಿಗಳ ತಂಡಗಳು ಈ ಜಾಗೃತಿ ಕಾರ್ಯದಲ್ಲಿ ನಿರತವಾಗಿವೆ.

ಮೆದುಳು ಜ್ವರದ ಲಕ್ಷಣ 1

ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು

ಮೆದುಳಿನ ಜ್ವರವನ್ನು ತಪ್ಪಿಸಲು ಬಯಸಿದರೆ, ಕಲುಷಿತ ನೀರಿನಲ್ಲಿ ಈಜುವುದು, ಡೈವಿಂಗ್ ಮಾಡುವುದು ಅಥವಾ ಕೆರೆಗಳು, ಕೊಳಗಳು ಮತ್ತು ಸರಿಯಾಗಿ ನಿರ್ವಹಿಸದ ಕೊಳಗಳಲ್ಲಿ ಮುಳುಗುವುದನ್ನು ತಪ್ಪಿಸುವುದು ಮುಖ್ಯ. ಮೂಗಿನ ಹೊಳ್ಳೆಗಳೊಳಗೆ ನೀರು ಹೋಗದಂತೆ ನೋಡಿಕೊಳ್ಳುವುದರಿಂದ ಅಮೀಬಾದ ಅನಿವಾರ್ಯ ಸಂಪರ್ಕವನ್ನು ಕಡಿಮೆ ಮಾಡಬಹುದು.‌

ಇದನ್ನೂ ಓದಿದ್ದೀರಾ? ಮೆದುಳು ಜ್ವರದ ಭೀತಿ ಬೇಡ, ಜಾಗೃತಿ ಇರಲಿ: ಸೋಂಕು ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ

1. ನಿಯಮಿತವಾಗಿ ಕ್ಲೋರಿನೀಕರಣ ಮಾಡಿಸಿಕೊಳ್ಳಬಹುದು.

2. ಬಾವಿಗಳು, ಟ್ಯಾಂಕ್‌ಗಳು ಮತ್ತು ಗೃಹಬಳಕೆಯ ನೀರು ಸಂಗ್ರಹಣೆ ಮಾಡುವ ನೀರಿನ ಮೂಲಗಳನ್ನು ಸ್ವಚ್ಛಗೊಳಿಸುವ ಮೂಲಕ ನೀರಿನ ಮಾಲಿನ್ಯವನ್ನು ಕಡಿಮೆ ಮಾಡಬಹುದು.

3. ಜನರು ಆರೋಗ್ಯದ ಬಗ್ಗೆ, ವಿಶೇಷವಾಗಿ ಬೇಸಿಗೆ ಸಮಯದಲ್ಲಿ ಆರೋಗ್ಯದ ಕುರಿತು ಮುಂಜಾಗೃತೆ ವಹಿಸಬೇಕು.

4. ಧಾರ್ಮಿಕ ಆಚರಣೆಗಳು ಅಥವಾ ನೀರಿನ ಬಳಕೆಯ ಅಗತ್ಯವಿರುವ ಚಟುವಟಿಕೆಗಳಲ್ಲಿ ಭಾಗವಹಿಸುವಾಗ ಜಾಗರೂಕರಾಗಿರಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...