ಅಧಿವೇಶನ | ಎಸ್ಸಿ, ಎಸ್ಟಿ ವ್ಯಕ್ತಿಗಳು ಕೈಗೊಳ್ಳುವ ಟೆಂಡರ್‌ ಕಾಮಗಾರಿಗಳ ಮೊತ್ತ 1 ಕೋಟಿ ರೂ.ಗೆ ಹೆಚ್ಚಳ

Date:

  • ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮಕ್ಕೆ ತಿದ್ದುಪಡಿ
  • ಮುಂಗಡವಾಗಿ ಟೆಂಡರ್‌ ಹಣ ನೀಡಲು ಶಾಸಕ ಶಿವಲಿಂಗೇಗೌಡ ಸಲಹೆ

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮಕ್ಕೆ ತಿದ್ದುಪಡಿ ತಂದು, ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ವ್ಯಕ್ತಿಗಳಿಗೆ ಟೆಂಡರ್‌ ಕಾಮಗಾರಿಗಳ ಮೊತ್ತ 50 ಲಕ್ಷ ರೂ.ದಿಂದ 1 ಕೋಟಿ ರೂ.ಗೆ ಹೆಚ್ಚಳ ಮಾಡುತ್ತಿದ್ದೇವೆ ಎಂದು ಕಾನೂನು ಸಚಿವ ಎಚ್‌ ಕೆ ಪಾಟೀಲ್‌ ತಿಳಿಸಿದರು.

10ನೇ ದಿನದ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದರು.

“ಸಾರ್ವಜನಿಕ ಸಂಗ್ರಹದಲ್ಲಿ ಪಾರದರ್ಶಕತೆ ಅಧಿನಿಯಮವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಸರ್ಕಾರ ಉದ್ದೇಶಿಸಿದೆ. 2016 ತಿದ್ದುಪಡಿ ಮಾಡಲಾಗಿತ್ತು. ಹಾಗೆಯೇ 2018ರಲ್ಲೂ ತಿದ್ದುಪಡಿ ತರಲಾಗಿತ್ತು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಹಣದ ಮೊತ್ತ ಹೆಚ್ಚಿಸುವ ಬಗ್ಗೆ ಚರ್ಚೆಯಾಗಿತ್ತು. ನಮ್ಮ ಸರ್ಕಾರ ಈಗ ಎಸ್ಸಿ, ಎಸ್ಟಿ ವರ್ಗಗಳಿಗೆ ಕೈಗೊಳ್ಳುವ ಟೆಂಡರ್‌ ಮೊತ್ತವನ್ನು 50 ಲಕ್ಷದಿಂದ 1 ಕೋಟಿಗೆ ಹೆಚ್ಚಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿರೋಧ ಪಕ್ಷದ ಸದಸ್ಯ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕ ಸಂಗ್ರಹದಲ್ಲಿ ಪಾರದರ್ಶಕತೆ ಅಧಿನಿಯಮ ತಿದ್ದುಪಡಿ ಸ್ವಾಗತಿಸಿ, “ನಮ್ಮ ಸರ್ಕಾರದ ಬಜೆಟ್‌ನಲ್ಲಿ ಇದನ್ನು ಘೋಷಿಸಿದ್ದೆವು. ಎಸ್ಸಿ ಎಸ್ಟಿಗಳಿಗೆ ಮೀಸಲಾಗಿದ್ದ 50 ಲಕ್ಷ ದಿಂದ 1 ಕೋಟಿಗೆ ಕಾಮಗಾರಿ ಮೊತ್ತವನ್ನು ಹೆಚ್ಚಿಸಿರುವುದನ್ನು ಸ್ವಾಗತಿಸುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಮತ್ತೆ ಮೇಲೆದ್ದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ಮುಖ್ಯಮಂತ್ರಿ ಹೊಗಳಿ ಪತ್ರ ಬರೆದ ವೀರೇಂದ್ರ ಹೆಗ್ಗಡೆ

ಆರಗ ಜ್ಞಾನೇಂದ್ರ ಮಾತನಾಡಿ, “ಈ ಬಿಲ್‌ಅನ್ನು ಸ್ವಾಗತಿಸುತ್ತೇನೆ. ಇಲ್ಲಿ ಲೋಪದೋಷಗಳು ಇವೆ. ಎಸ್ಸಿ ಎಸ್ಟಿಗಳ ಹೆಸರಲ್ಲಿ ಜನರಲ್‌ ಸಮುದಾಯದವರು ಗುತ್ತಿಗೆ ತೆಗೆದುಕೊಂಡು ಅವರಿಗೆ ಪರ್ಸೆಂಟೇಜ್‌ ಕೊಡುತ್ತಾರೆ. ಇದು ನಿಲ್ಲಬೇಕು. ತಳಸಮುದಾಯದ ವ್ಯಕ್ತಿಗಳು ಮುಂದೆ ಬರಬೇಕು ಎಂದರೆ ಪ್ರಾಮಾಣಿಕವಾಗಿ ಅದೇ ಸಮುದಾಯದ ವ್ಯಕ್ತಿಗಳಿಗೆ ಈ ಕಾಮಗಾರಿಗಳ ಕೆಲಸ ಸಿಗಬೇಕು” ಎಂದರು.

ಶಿವಲಿಂಗೇಗೌಡ ಮಾತನಾಡಿ, “ಸ್ವಯಂ ಉದ್ಯೋಗ ಕಂಡುಹಿಡಿಯಲು ಎಸ್ಸಿ ಎಸ್ಟಿ ಅವರಿಗೆ 50 ಲಕ್ಷದಿಂದ 1 ಕೋಟಿಗೆ ಹೆಚ್ಚಿಸಿರುವುದು ಸ್ವಾಗತಾರ್ಹ. ಆದ್ರೆ ತಳಮಟ್ಟದಲ್ಲಿ ಎಸ್ಸಿ ಎಸ್ಟಿ ವ್ಯಕ್ತಿಗಳು ನಿರ್ವಹಿಸಬೇಕಾದ ಕೆಲಸಗಳನ್ನು ಬೇರೆಯವರು ನಿರ್ವಹಿಸುತ್ತಾರೆ. ಅದಕ್ಕೆ ಕಾರಣ ಬಂಡವಾಳದ ಕೊರತೆ. ಹೀಗಾಗಿ ಮುಂಗಡ ಹಣ ನೀಡಿದರೆ ಆ ಸಮುದಾಯದ ವ್ವಕ್ತಿಗಳೇ ಕಾಮಗಾರಿ ನಿರ್ವಹಿಸಲು ಮುಂದೆ ಬರುತ್ತಾರೆ. ಸರ್ಕಾರ ಈ ಬಗ್ಗೆ ಯೋಚಿಸಿದ್ರೆ ಒಳ್ಳೆಯದು” ಎಂದು ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...