ರಾಜ್ಯದಲ್ಲಿ 350 ಆನೆಗಳು ಹೆಚ್ಚಳ: ಅರಣ್ಯ ಸಚಿವ ಈಶ್ವರ ಖಂಡ್ರೆ

Date:

  • 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು ಎಂದ ಸಚಿವ
  • ಆಗಸ್ಟ್ 12 ರಿಂದ ವಿಶ್ವ ಆನೆ ದಿನವನ್ನಾಗಿ ಆಚರಣೆ ಮಾಡಲು ನಿರ್ಧಾರ

ರಾಜ್ಯದ ಆನೆಗಳ ಸಂಖ್ಯೆಯಲ್ಲಿ ಸುಮಾರು 350 ಆನೆಗಳು ಹೆಚ್ಚಳವಾಗಿವೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿದ ಬಳಿಕ ಅವರು ಮಾತನಾಡಿದರು.

2017ರಲ್ಲಿ ರಾಜ್ಯದಲ್ಲಿ ಸುಮಾರು 6,049 ಆನೆಗಳಿದ್ದವು, ಈ ಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂದು ಅಂದಾಜು ಮಾಡಲಾಗಿದೆ. ಆ ಮೂಲಕ ಆನೆಗಳ ಸಂಖ್ಯೆಯಲ್ಲಿ ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆನೆಗಳು ಬಲಿಷ್ಠ ವನ್ಯಜೀವಿಯಾದರೂ ಭಾರತ ಸೇರಿದಂತೆ ವಿಶ್ವಾದ್ಯಂತ ಅಪಾಯದಲ್ಲಿವೆ. ಅವಸಾನದ ಅಂಚಿನಲ್ಲಿರುವ ಆನೆಗಳನ್ನು ಸಂರಕ್ಷಿಸುವ ಸಲುವಾಗಿ, ಆನೆಗಳಿಗೂ ನೆಮ್ಮದಿಯಿಂದ ಬದುಕಲು ಅವುಗಳ ಆವಾಸಸ್ಥಾನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು 2012 ಆಗಸ್ಟ್ 12 ರಿಂದ ವಿಶ್ವ ಆನೆ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಆನೆಗಳ ದಿನದಂದು ದೇಶದಲ್ಲಿ ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ ಅಥವಾ ಇಳಿಮುಖವಾಗಿದೆಯೇ ಎಂದು ತಿಳಿಯಲು ಆನೆಗಳ ಗಣತಿಯನ್ನು ಪ್ರತೀ ಐದು ವರ್ಷಗಳಿಗೊಮ್ಮೆ ಮಾಡಲಾಗುತ್ತದೆ. ಈ ಹಿಂದೆ ಆನೆ ಗಣತಿ 2017 ರಲ್ಲಿ ನಡೆದಿತ್ತು. ಬಳಿಕ 2022ರಲ್ಲಿ ಆನೆ ಗಣತಿಯನ್ನು ಅಖಿಲ ಭಾರತ ಹುಲಿ ಗಣತಿಯ ಭಾಗವಾಗಿ ಮಾಡಲು ಪ್ರಯತ್ನಿಸಲಾಯಿತು. ಆದರೆ ಈ ಸಮೀಕ್ಷೆಯು ಮಾದರಿ ಬ್ಲಾಕ್‌ ಎಣಿಕೆ (Sample Block Count) ಮತ್ತು ಆನೆಗಳ ಸಂಖ್ಯೆ ಸ್ವರೂಪದ (Population Structure) ಮೌಲ್ಯ ಮಾಪನವನ್ನು ಒಳಗೊಂಡಿರಲಿಲ್ಲ. ಈ ವಿಧಾನ ಆನೆಗಳ ಗಣತಿ ಮತ್ತು ಸಂಖ್ಯಾ ಸ್ವರೂಪ ಅಂದರೆ ಲಿಂಗ ಮತ್ತು ವಯಸ್ಸಿನ ವರ್ಗೀಕರಣ ಮಾಡಲು ಬಹಳ ಮುಖ್ಯವಾಗಿರುತ್ತದೆ ಎಂದು ಸಚಿವರು ತಿಳಿಸಿದರು.

ಕರ್ನಾಟಕ, ಕೇರಳ ಮತ್ತು ತಮಿಳುನಾಡು ಈ ಮೂರು ರಾಜ್ಯಗಳ ಮುಂದಾಳತ್ವದೊಂದಿಗೆ 2023ರ ಮೇ-17 ರಿಂದ ಮೇ-19 ರವರೆಗೆ ಏಕಕಾಲದಲ್ಲಿ ಆನೆಗಳ ಗಣತಿ ನಡೆಸಲಾಯಿತು. ಅದೇ ದಿನಾಂಕದಂದು ಆಂಧ್ರ ಪ್ರದೇಶದಲ್ಲೂ ಸಹ ಇದೇ ರೀತಿಯ ಗಣತಿ ಕಾರ್ಯವನ್ನು ನಡೆಸಲಾಯಿತು ಎಂದು ವಿವರಿಸಿದರು.

ಈ ಗಣತಿಯ ಸ್ವರೂಪ, ಕ್ಷೇತ್ರ ಸಿಬ್ಬಂದಿಗೆ ತರಬೇತಿ, ಗಣತಿ ಫಲಿತಾಂಶಗಳ ವಿಶ್ಲೇಷಣೆ ಹಾಗೂ ವರದಿ ತಯಾರಿಕೆಯಲ್ಲಿ ಪ್ರೊ. ಆರ್‌. ಸುಕುಮಾರ್‌ ನೇತೃತ್ವದ ಭಾರತೀಯ ವಿಜ್ಞಾನ ಸಂಸ್ಥೆಯ (IISC) ತಾಂತ್ರಿಕ ನೆರವಿನೊಂದಿಗೆ ಕರ್ನಾಟಕ ಅರಣ್ಯ ಇಲಾಖೆಯು ಆನೆಗಳ ಗಣತಿಯನ್ನು ನಡೆಸಲಾಗಿದೆ.

ರಾಜ್ಯದ 32 ವಿಭಾಗಗಳಿಂದ 3,400 ಕ್ಕೂ ಹೆಚ್ಚು ಸಿಬ್ಬಂದಿ ಈ ಆನೆಗಳ ಗಣತಿ ಕಾರ್ಯದಲ್ಲಿ ಭಾಗವಹಿಸಿದ್ದರು. ಆನೆ ಗಣತಿಯನ್ನು ನೇರ ಎಣಿಕೆ ಅಥವಾ ಬ್ಲಾಕ್‌ ಎಣಿಕೆ, ಟ್ರಾಂಜೆಕ್ಟ್‌ ಸಮೀಕ್ಷೆ ಅಥವಾ ಲದ್ದಿ ಎಣಿಕೆ ಹಾಗೂ ವಾಟರ್‌ ಹೋಲ್‌ ಎಣಿಕೆ ಎಂಬ ಮೂರು ವಿಧಾನಗಳಲ್ಲಿ ನಡೆಸಲಾಯಿತು ಎಂದು ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದರು.

ರಾಜ್ಯದ 32 ವಿಭಾಗಗಳಲ್ಲಿ ಆನೆಗಳ ಗಣತಿ ಕಾರ್ಯವನ್ನು ನಡೆಸಲಾಗಿದ್ದು, ಈ ಸಮೀಕ್ಷೆಯಲ್ಲಿ 23 ವಿಭಾಗಗಳಲ್ಲಿ ಆನೆಗಳು ಕಂಡುಬಂದಿವೆ. ಸಮೀಕ್ಷೆಯ ದಿನದಂದು ನೇರವಾಗಿ ಎಣಿಸಿದ ಒಟ್ಟು ಆನೆಗಳ ಸಂಖ್ಯೆ-2219 ಆಗಿತ್ತು. ಈ 23 ವಿಭಾಗಗಳಲ್ಲಿ ಇರುವ 18,975 ಚದರ ಕಿ.ಮೀ ಪ್ರದೇಶದ ಪೈಕಿ 6,104 ಚದರ ಕಿ.ಮೀ ಪ್ರದೇಶದಲ್ಲಿ ಈ ಸಮೀಕ್ಷೆಯನ್ನು ನಡೆಸಲಾಯಿತು. ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರದೇಶವನ್ನು ಸಮೀಕ್ಷೆಗೆ ಒಳಪಡಿಸಿರುವುದರಿಂದ ಈ ಸಮೀಕ್ಷೆ ಮತ್ತು ವರದಿಯು ಹೆಚ್ಚು ನಿಖರ ಮತ್ತು ವಿಶ್ವಾಸಾರ್ಹವಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...