ಬೀದರ್‌ | ಅರಣ್ಯ ಇಲಾಖೆ ಕ್ರಮ ಖಂಡಿಸಿ ಅನಿರ್ದಿಷ್ಟಾವಧಿ ಧರಣಿ

Date:

ಬಡ ದಲಿತ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಅರಣ್ಯ ಇಲಾಖೆ ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾ ಅರಣ್ಯ ಇಲಾಖೆ ಕಚೇರಿ ಎದುರು ಶುಕ್ರವಾರ ಅನಿರ್ದಿಷ್ಠಾವಧಿ ಧರಣಿ ಆರಂಭಿಸಿದ್ದಾರೆ.

ʼಸರ್ಕಾರದ ನಿಯಮಾನುಸಾರ ಕಳೆದ 40-50 ವರ್ಷಗಳಿಂದ ಭೂಮಿ ಉಳುಮೆ ಮಾಡಿಕೊಂಡು ಉಪ ಜೀವನ ನಡೆಸುತ್ತಿರುವ ಜಿಲ್ಲೆಯ ದಲಿತ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ವಿನಾಕಾರಣ ಕಿರುಕುಳ ನೀಡಿ ರೈತರ ಹೆಸರಿನಲ್ಲಿ ಇರುವ ಪಹಣಿ ಏಕಾಏಕಿ ರದ್ದುಗೊಳಿಸಿ ಅರಣ್ಯ ಇಲಾಖೆ ಎಂದು ನಮೂದಿಸಿದ್ದಾರೆ. ಇದರಿಂದ ಬಡ ರೈತರು ಅನ್ನದಾತರು ಅಕ್ಷರಶಃ ಕಂಗಾಲಾಗಿದ್ದಾರೆʼ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ʼ1978-79ರಿಂದ ದಲಿತ ಸಮುದಾಯದ ರೈತರು ಜಮೀನು ಉಳುಮೆ ಮಾಡುತ್ತಿದ್ದಾರೆ. ಸ್ವತಃ ಸರ್ಕಾರವೇ ಅವರಿಗೆ ಭೂಮಿ ಹಂಚಿಕೆ ಮಾಡಿದೆ. ಹೀಗಿರುವಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಏಕಾಏಕಿ ಒಕ್ಕಲೆಬ್ಬಿಸುತ್ತಿರುವುದು ಎಷ್ಟು ಸರಿ. ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಸಿ ಅಧಿಕೃತವಾಗಿ ಹೋಟೆಲ್‌, ರೇಸ್ಟೊರೆಂಟ್‌, ಶಾಲಾ-ಕಾಲೇಜು, ಶಾಪಿಂಗ್‌ ಮಾಲ್‌ ನಡೆಸುವ ಬಲಾಢ್ಯರ ವಿರುದ್ಧ ಯಾವುದೇ ಕ್ರಮ ಜರುಗಿಸಲು ಮುಂದಾಗುತ್ತಿಲ್ಲʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಅಕ್ರಮವಾಗಿ ಸಿ ಮತ್ತು ಡಿ ವರ್ಗದ ಜಮೀನಿನಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಪ್ರಭಾವಿಗಳನ್ನು ರಕ್ಷಿಸಿ ಹಲವು ದಶಕಗಳಿಂದ ಸಾಗುವಳಿ ಮಾಡುತ್ತಿರುವ ಬಡ ರೈತರನ್ನು ಒಕ್ಕಲೆಬ್ಬಿಸಿದ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಯನ್ನು ಅಮಾನತುಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಚಿನ್‌‌ ಪಾಂಚಾಳ್ ಆತ್ಮಹತ್ಯೆ ಪ್ರಕರಣ : ತನಿಖೆ ಆರಂಭಿಸಿದ ಸಿಐಡಿ ಅಧಿಕಾರಿಗಳು

ಪ್ರತಿಭಟನೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧ್ಯಕ್ಷ ಹಣಮಂತ ಮಟ್ಟೆ, ಕೆಆರ್‌ಎಸ್ ರಾಜ್ಯ ಸಮಿತಿ ಮುಖಂಡ ತುಕಾರಾಮ ಗೌರೆ, ಭೀಮ್‌ ಟೈಗರ್‌ ಸೇನಾ ಜಿಲ್ಲಾಧ್ಯಕ್ಷ ನರಸಿಂಗ್‌ ಸಾಮ್ರಾಟ್‌, ಭಾರತೀಯ ಜೈಭೀಮ ದಳ ವಿಭಾಗೀಯ ಅಧ್ಯಕ್ಷ ಮಾರುತಿ ಕಂಟಿ, ಕರ್ನಾಟಕ ಕ್ಷತ್ರೀಯ ಒಕ್ಕೂಟ ಉಪಾಧ್ಯಕ್ಷ ರತೀನ ಕಮಲ ಸೇರಿದಂತೆ ಪ್ರಮುಖರಾದ ಮಹೇಶ ಗೊರನಾಳಕರ್‌, ಅವಿನಾಶ ದೀನೆ, ಗೌತಮ ಭೋಸ್ಲೆ, ಕಲ್ಯಾಣರಾವ ಗುನ್ನಳ್ಳಿಕರ್‌, ವಿನೋದಕುಮಾರ್‌, ರಮೇಶ ಮಂದಕನಳ್ಳಿ, ಅಂಬೇಡ್ಕರ್‌ ಸಾಗರ್‌, ಶಿವಕುಮಾರ್‌ ಜೀರ್ಗೆ, ಈಶ್ವರ ಗುತ್ತೆದಾರ, ಧನರಾಜ ದೊಡ್ಡಮನಿ ಹಾಗೂ ವಿವಿಧ ಗ್ರಾಮಗಳ ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...