ಚಾಮರಾಜನಗರ | ಸರ್ವರ ಸಹಕಾರದೊಂದಿಗೆ ಸ್ವಾತಂತ್ರ್ಯ ದಿನಾಚರಣೆ : ಟಿ ಜವರೇಗೌಡ

Date:

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ ದಿನಾಚರಣೆ ಸಂಬಂಧ ವಿವಿಧ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಜಿಲ್ಲಾಡಳಿತದ ವತಿಯಿಂದ ಸರ್ವರ ಸಹಕಾರದೊಂದಿಗೆ ಆಗಸ್ಟ್. 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.

ಸ್ವಾತಂತ್ರ್ಯ ದಿನವನ್ನು ಅಚ್ಚುಕಟ್ಟಾಗಿ ಆಚರಿಸಲು ಈಗಾಗಲೇ ಅಧಿಕಾರಿಗಳ ಸಭೆ ನಡೆಸಲಾಗಿದೆ. ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಸಲಹೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಎಲ್ಲರೂ ಕೈಜೋಡಿಸಬೇಕು. ಕಾರ್ಯಕ್ರಮ ಆಯೋಜನೆ ಸಂಬಂಧ ಸಲಹೆ ಅಭಿಪ್ರಾಯಗಳನ್ನು ನೀಡಬೇಕೆಂದು ಮನವಿ ಮಾಡಿದರು.

ಇದೇ ವೇಳೆ ಮಾತನಾಡಿದ ಸಂಘಟನೆಗಳ ಮುಖಂಡರು ಸ್ವಾತಂತ್ರ್ಯ ದಿನಾಚರಣೆಯನ್ನು ಯಾವುದೇ ಲೋಪವಿಲ್ಲದೇ ಕೈಗೊಳ್ಳಬೇಕು. ಸರ್ಕಾರಿ ಶಾಲಾ ಮಕ್ಕಳಿಗೆ ಪಥ ಸಂಚಲನ, ಸ್ವಾತಂತ್ರ್ಯ ಹೋರಾಟ ಬಿಂಬಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. ಪಥಸಂಚಲನ ತಾಲೀಮು, ಸ್ವಾತಂತ್ರ್ಯೋತ್ಸವ ದಿನದಂದು ಕಾರ್ಯಕ್ರಮ ನಡೆಯುವ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಶುದ್ದ ಕುಡಿಯುವ ನೀರು, ವೈದ್ಯರನ್ನು ಒಳಗೊಂಡ ತಂಡ, ಆಂಬುಲೆನ್ಸ್ ನಿಯೋಜನೆ ಮಾಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾಂಕುಗಳು, ಎಲ್ಲ ಗ್ರಾಮ ಪಂಚಾಯಿತಿಗಳು, ಶಾಲಾ ಕಾಲೇಜುಗಳು, ಕಚೇರಿಗಳಲ್ಲಿ ಸ್ವಾತಂತ್ರ್ಯ ದಿನ ಆಚರಿಸಬೇಕು. ಮಹಾತ್ಮ ಗಾಂಧಿಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರವಿಟ್ಟು ಗೌರವಿಸಬೇಕು. ಧ್ವಜ ಸಂಹಿತೆ ಪ್ರಕಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಬೇಕು. ಪ್ಲಾಸ್ಟಿಕ್ ಧ್ವಜಗಳು ಮಾರಾಟವಾಗಬಾರದು. ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆ, ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿಲ್ಲೆಯ ಸಾಧಕರನ್ನು ಸ್ವಾತಂತ್ರೋತ್ಸವದಂದು ಗೌರವಿಸಬೇಕು ಎಂಬುದೂ ಸೇರಿದಂತೆ ಹಲವು ಸಲಹೆಗಳನ್ನು ಮುಖಂಡರು ನೀಡಿದರು.

ಎಲ್ಲರ ಅಭಿಪ್ರಾಯ, ಸಲಹೆಗಳನ್ನು ಆಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರು ಮಾತನಾಡಿ ಶಿಷ್ಟಾಚಾರ ಅನುಸಾರ ಎಲ್ಲ ಸಿದ್ದತೆಗಳನ್ನು ಮಾಡಲಾಗುತ್ತದೆ. ಈಗಾಗಲೇ, ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಪೆರೇಡ್ ಸಮಿತಿ, ಆಹ್ವಾನ ಪತ್ರಿಕೆ ಮುದ್ರಣ ಸಮಿತಿ, ಧ್ವಜಾ ಸಿದ್ದತಾ ಸಮಿತಿ, ಸಾಂಸ್ಕೃತಿಕ ಸಮಿತಿ ಸೇರಿದಂತೆ ಇನ್ನಿತರ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಸಮಿತಿಯ ಅಧ್ಯಕ್ಷರು, ಸದಸ್ಯರು ಸೂಕ್ತ ಕ್ರಮವಹಿಸಲಿದ್ದಾರೆ ಎಂದರು.

ಮುಖಂಡರು ನೀಡಿರುವ ಸಲಹೆ ಅಭಿಪ್ರಾಯಗಳ ಅನುಸಾರ ಅಧಿಕಾರಿಗಳಿಗೆ ಸಿದ್ದತೆ ಕೈಗೊಳ್ಳಲು ಸೂಚನೆ ನೀಡಲಾಗುತ್ತದೆ. ಸ್ವಾತಂತ್ರ್ಯ ದಿನದಂದು ಎಲ್ಲ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗುವಂತೆ ನಿರ್ದೇಶನ ನೀಡಲಾಗಿದೆ. ಹಾಜರಾತಿಯನ್ನು ತೆಗೆದುಕೊಳ್ಳಲಾಗುತ್ತದೆ. ಯಾವುದೇ ನ್ಯೂನ್ಯತೆಗಳಿಲ್ಲದೆ ಸ್ವಾತಂತ್ರ್ಯ ದಿನ ಆಚರಣೆಗೆ ಕಾರ್ಯೋನ್ಮುಖರಾಗಲು ಕ್ರಮ ತೆಗೆದುಕೊಳ್ಳಲಾಗುವುದು. ರಾಷ್ಟ್ರೀಯ ಹಬ್ಬದ ಆಚರಣೆಗೆ ಸರ್ವರು ಸಹಕಾರ ನೀಡಬೇಕು ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಆಗಸ್ಟ್. 10 ರಂದು ಬ್ಯಾರಿ ಅಕಾಡೆಮಿ ಗೌರವ ಪ್ರಶಸ್ತಿ ಪ್ರಧಾನ; ಕುಟುಂಬ ಸಮ್ಮಿಲನ ಕಾರ್ಯಕ್ರಮ : ಉಮರ್ ಯು ಹೆಚ್

ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಿರಣ್, ವಿವಿಧ ಸಂಘಟನೆಗಳ ಮುಖಂಡರಾದ ವೆಂಕಟರಮಣ ಪಾಪು, ಚಾ.ರಂ. ಶ್ರೀನಿವಾಸಗೌಡ, ಮಹದೇವಶೆಟ್ಟಿ, ನಿಜಧ್ವನಿ ಗೋವಿಂದರಾಜು, ಚಾ. ಹ. ಶಿವರಾಜು, ಚಾ. ಗು. ನಾಗರಾಜು, ಪಣ್ಯದಹುಂಡಿ ರಾಜು, ಜಿ. ಬಂಗಾರು, ಸಿ. ಎಂ. ನರಸಿಂಹ ಮೂರ್ತಿ, ಬ್ಯಾಡಮುಡ್ಲು ಬಸವಣ್ಣ, ಶಿವು, ಆಲೂರುಮಲ್ಲು, ಸಿ. ಎಂ. ಶಿವಣ್ಣ, ಎಲ್. ಸುರೇಶ್, ಪರ್ವತ್‍ರಾಜ್, ಆಲೂರು ರವಿಕುಮಾರ್, ಮಹೇಶ್‍ಗೌಡ, ಇನ್ನಿತರ ಮುಖಂಡರು, ಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...