ಇಂಡಿ | ಭೀಮಾನದಿ ಪ್ರವಾಹ: ಸಂತ್ರಸ್ತರ ಮನೆಗೆ ಶಾಸಕ ಯಶವಂತರಾಯ ಗೌಡ ಪಾಟೀಲ್ ಭೇಟಿ

Date:

ಇಂಡಿ ತಾಲೂಕು ವ್ಯಾಪ್ತಿಯ ಹಲವು ಗ್ರಾಮಗಳಿಗೆ, ಕೃಷಿ ಜಮೀನುಗಳಿಗೆ ಶಾಸಕ ಯಶವಂತರಾಯ ಗೌಡ ಪಾಟೀಲ್ ಭೇಟಿ ನೀಡಿ ಭೀಮಾನದಿ ಪ್ರವಾಹಕ್ಕೆ ತುತ್ತಾದ ಸಂತ್ರಸ್ತರಿಗೆ ಆತ್ಮಸ್ಥರ್ಯ ತುಂಬಿದ್ದಾರೆ. ಧಾರಾಕಾರ ಮಳೆಯಿಂದ ಭೀಮಾನದಿ ತುಂಬಿ ಹರಿಯುತ್ತಿದ್ದು, ವಿಜಯಪುರದ ಹಲವು ಗ್ರಾಮಗಳ ಕೃಷಿ ಜಮೀನುಗಳಿಗೆ, ಹಲವು ಮನೆಗಳಿಗೆ ನೀರು ನುಗ್ಗಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿಗೊಳಗಾಗಿವೆ.

ಮಹಾರಾಷ್ಟ್ರದ ಸೀನಾ ನದಿಯ ನೀರು ಹಾಗೂ ವಾಡಿಕೆಗಿಂತ ಅಧಿಕ ಮಳೆ ಅವಾಂತರವೇ ಪ್ರವಾಹಕ್ಕೆ ಕಾರಣ ಎನ್ನಲಾಗಿದ್ದು, ಸಾಕಷ್ಟು ಜನರಿಗೆ ಪ್ರವಾಹದಿಂದ ಹಾಗೂ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಕೆಲ ಗ್ರಾಮಗಳಲ್ಲಿ ಮನೆ ಕಟ್ಟಡಗಳು ಕುಸಿದು ಬಿದ್ದು ಕುಟುಂಬಗಳು ಬೀದಿ ಪಾಲಾಗಿವೆ.

“ನದಿ ದಂಡೆಯ ಮೇಲೆ ಹುಟ್ಟಿರುವ ಕಾರಣಕ್ಕೆ ಮೂರು ನಾಲ್ಕು ವರ್ಷಗಳಿಗೊಮ್ಮೆ ನಮ್ಮ ಬದುಕು ಕೊಚ್ಚಿಕೊಂಡು ಹೋಗುತ್ತದೆ. ಭಗವಂತ ಈ ಭಾಗದಲ್ಲಿ ಗಾಯದ ಮೇಲೆ ಬರೆ ಎಳದಂತೆ ಮಾಡಿದ್ದಾನೆ. ನಾನು ಕೂಡ ನಿಮ್ಮ ದುಃಖದಲ್ಲಿ ಕಷ್ಟದಲ್ಲಿ ಭಾಗಿಯಾಗಿರುವೆ. ಈಗಾಗಲೇ ಮುಖ್ಯಮಂತ್ರಿಗಳ ಹಾಗೂ ಸಚಿವರುಗಳೊಂದಿಗೆ ಈ ಭಾಗದ ಸಮಸ್ಯೆಗಳ ಕುರಿತು ಪತ್ರ ಬರೆದು ಅವರ ಗಮನಕ್ಕೆ ತಂದಿದ್ದೇನೆ. ಕೂಡಲೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ, ಪರಿಹಾರವನ್ನು ಪ್ರಮಾಣಿಕವಾಗಿ ಒದಗಿಸಸಲಾಗುವುದು” ಎಂದು ಶಾಸಕ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿ: ಇಂಡಿ | ಕಾರ್ಖಾನೆಗೆ ಆರ್ಥಿಕ ಸಹಾಯ ನೀಡುವಂತೆ ಸರ್ಕಾರಕ್ಕೆ ಮನವಿ: ಶಾಸಕ ಯಶವಂತರಾಯಗೌಡ ಪಾಟೀಲ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗಪ್ಪ ಚನ್ನಗೊಂಡ, ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಸಿ ಸಾಹುಕಾರ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕೌಲಗಿ, ಗ್ಯಾರಂಟಿ ಅಧ್ಯಕ್ಷ ಪ್ರಶಾಂತ ಕಾಳೆ, ಜಿಲ್ಲಾ ಗ್ಯಾರೆಂಟಿ ಅಧ್ಯಕ್ಷ ಇಲಿಯಾಸ್ ಬೋರಮಣಿ, ಜಾವೆದ್ ಮೊಮೀನ್, ತಹಶೀಲ್ದಾರ ಬಿಎಸ್ ಕಡಕಬಾವಿ, ಡಿ ವೈ ಎಸ್ ಪಿ ಜಗದೀಶ, ತಾಲೂಕು ಪಂಚಾಯಿತಿ ಅಧಿಕಾರಿ ಭೀಮ ಶಂಕರ, ಅಶೋಕ ಪ್ಯಾಟಿ, ಸುಭಾಸ ಇಟ್ನಳ್ಳಿ, ತಾಲೂಕು ಕೃಷಿ ಅಧಿಕಾರಿ ಮಹದೇವಪ್ಪ ಏವೂರ, ತೋಟಗಾರಿಕಾ ಅಧಿಕಾರಿ ಎಚ್ ಎಸ್ ಪಾಟೀಲ, ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಲಮಾಣಿ, ಲೋಕಪಯೋಗಿ ಇಲಾಖೆ ಅಧಿಕಾರಿ ದಯಾನಂದ ಮಠ, ಜಿಲ್ಲಾ ಪಂಚಾಯಿತಿ ಎಇಇ ಶಿವಾಜಿ ದಯಾನಂದ ಮಠ, ಜಿಲ್ಲಾ ಪಂಚಾಯತಿ ಎ ಇ ಇ ಶ್ರೀಮತಿ ಮಜಾವರ,ಪುರಸಭೆ ಅಧಿಕಾರಿ ಸಿದ್ದರಾಮಯ್ಯ ಕಟ್ಟಿಮನಿ, ಪ್ರವಾಹ ಪೀಡಿತ ಪ್ರದೇಶದಲ್ಲಿ ತಾಲೂಕ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...