77 ವರ್ಷಗಳಿಂದ ಭಾರತ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ: ಸಭಾಪತಿ ಬಸವರಾಜ ಹೊರಟ್ಟಿ

Date:

  • ವಿಧಾನಸೌಧದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಧ್ವಜಾರೋಹಣ
  • ‘ಭಾರತ ವಿಶ್ವಗುರು ಆಗುವಲ್ಲಿ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ಸಂಗತಿ’

ಭಾರತಕ್ಕೆ ಸ್ವಾತಂತ್ರ್ಯ ಸುಮ್ಮನೆ ಬಂದಿಲ್ಲ ಲಕ್ಷಾಂತರ ಭಾರತೀಯರ ಅಮೂಲ್ಯ ಜೀವ ಬಲಿದಾನದ ಫಲವಾಗಿದೆ. ಸ್ವಾತಂತ್ರ್ಯ ಯೋಧರ ಆತ್ಮಕ್ಕೆ ಶಾಂತಿ ಕೋರುವುದರ ಜೊತೆಗೆ ಅವರ ಕುಟುಂಬಕ್ಕೆ ನಾವು ಸದಾ ಚಿರಋಣಿಯಾಗಿ ಇರಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ವಿಧಾನಸೌಧದ ಪೂರ್ವ ಭಾಗದ ಭವ್ಯ ಮೆಟ್ಟಲುಗಳ ಮುಂಭಾಗದಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ಕಳೆದ 77 ವರ್ಷಗಳಿಂದ ಭಾರತ ಸಾಕಷ್ಟು ಅಭಿವೃದ್ಧಿ ಹೊಂದುವ ಮೂಲಕ ವಿಶ್ವದಲ್ಲಿ ಬಲಿಷ್ಠ ರಾಷ್ಟ್ರವಾಗಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ವಿಶ್ವಗುರು ಆಗುವಲ್ಲಿ ದಾಪುಗಾಲು ಇಡುತ್ತಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಸಂಗತಿ” ಎಂದರು.

“ಇಡೀ ಜಗತ್ತು ಭಾರತದತ್ತ ನೋಡುತ್ತಿರುವುದು ನಮಗೆಲ್ಲ ಅಭಿಮಾನದ ಸಂಗತಿ. ದೇಶ ಕಟ್ಟುವಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳೋಣ. ಸಾಕಷ್ಟು ಹಿರಿಯರ ಶ್ರಮದಿಂದ ಹಾಗೂ ಲಕ್ಷಾಂತರ ಜನರ ಬಲಿದಾನದಿಂದ ನಮಗೆಲ್ಲ ಇಂದು ಸ್ವಾತಂತ್ರ್ಯ ಸಿಕ್ಕಿದೆ. ಸ್ವಾತಂತ್ರ್ಯ ಎನ್ನುವುದು ಬಹುದೊಡ್ಡ ಆಸ್ತಿ. ಅದು ಒಮ್ಮೆ ಕಳೆಯಿತೆಂದರೆ ಮರಳಿ ಪಡೆಯಲು ಅದರ ಹತ್ತರಷ್ಟು ಬೆಲೆ ಕಟ್ಟಬೇಕಾಗುತ್ತದೆ. ಅದರ ಮೌಲ್ಯ ಅರಿತು ಹಿರಿಯರು ತಂದುಕೊಟ್ಟ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು ದೇಶಾಭಿಮಾನವನ್ನು ಹೆಚ್ಚಿಸಿಕೊಂಡು ಭವ್ಯ ಭಾರತ ಕಟ್ಟುವತ್ತ ಸಂಕಲ್ಪ ಮಾಡೋಣ ಎಂದು ಹೊರಟ್ಟಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಹುಸಿ ದೇಶಭಕ್ತರ ಮೋದಿ ಕಾಲ; ಗಾಂಧಿ ಅವಮಾನಿಸುವ ಕಾಲ

“ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ, ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ, ವಿಧಾನ ಪರಿಷತ್ತಿನ ಅಪರ ಕಾರ್ಯದರ್ಶಿ ಎಸ್ ನಿರ್ಮಲ, ಸಭಾಪತಿಗಳ ಆಪ್ತ ಕಾರ್ಯದರ್ಶಿ ಶೈಲಾ ಕೆ.ಡಿ, ಸಭಾಪತಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ. ಮಹೇಶ ವಾಳ್ವೇಕರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...