ಉಡುಪಿ | ಸರಕಾರಿ ಕೆಲಸ ನಂಬಿ ಕೂರಬೇಡಿ – ಶ್ಯಾಮರಾಜ್ ಬಿರ್ತಿ

Date:

ಅಂಬೇಡ್ಕರ್ ಯುವಕ ಮಂಡಳ (ರಿ) ತೆಂಕು ಬಿರ್ತಿ ಬ್ರಹ್ಮಾವರ ಮತ್ತು ಆದಿಧ್ರಾವಿಡ ಸಹಕಾರಿ ಸಂಘ (ರಿ) ತೆಂಕು ಬಿರ್ತಿ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಭಾರತದ 79 ನೆಯ ಸ್ವಾತಂತ್ರ್ಯ ದಿನಾಚರಣೆ ಯನ್ನು ಆಚರಿಸಲಾಯಿತು. ನ್ಯಾಷನಲ್ ಇನ್ಸೂರೆನ್ಸ್ ಇದರ ನಿವ್ರತ್ತ ಅಧಿಕಾರಿ ಬೋಜರಾಜ್ ತಲ್ಲೂರು ಅವರು ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಅವರು ಯುವಕರು ಇನ್ನು ಮುಂದೆ ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಾ ಕೂರಬೇಡೀ.ಈಗ ಉದ್ಯೋಗ ಅವಕಾಶವೇ ಕಡಿಮೆ ಆಗಿದೆ. ಎಲ್ಲವೂ ಖಾಸಗೀಕರಣ ಆಗುತ್ತಿದೆ. ಹಾಗಾಗಿ ಮೀಸಲಾತಿಗೆ ಅವಕಾಶವೇ ಕ್ಷೀಣಿಸುತ್ತಿದೆ. ಇಂತಹ ಸಂಧಿಗ್ಧ ಪರಿಸ್ಥಿತಿಯಲ್ಲಿ ನಮ್ಮ ಯುವಕರೆಲ್ಲಾ ಸ್ವ ಉದ್ಯೋಗದ ಕಡೆ ಮುಖ ಮಾಡಬೇಕು. ನಮ್ಮ ಉದ್ಧಾರಕ್ಕೆ ಯಾರನ್ನೋ ನಂಬಿಕೊಂಡು ಕೂರುವುದು ಬೇಡ ವ್ಯಾಪಾರ ವಹಿವಾಟಿನಲ್ಲಿ ತೊಡಗಿಸಿಕೊಳ್ಳಿ ಎಂದು ಕರೆಕೊಟ್ಟರು.ಶ್ರಮವಹಿಸಿ ವ್ಯಾಪಾರ ವಹಿವಾಟು ಮಾಡಿ ಸ್ವಂತ ಅಭಿವೃದ್ಧಿ ಮಾಡಿಕೊಳ್ಳುವ ಅನಿವಾರ್ಯತೆ ಇದೇ ಎಂದು ನಮ್ಮ ಮೇಲಿದೆ ಎಂದರು.

ಹಾಗೆಯೇ ಭಾರತದ ಪವಿತ್ರ ಸಂವಿಧಾನ ವನ್ನು ಉಳಿಸಿಕೊಂಡು ಕಾಪಾಡಿಕೊಂಡು ಬರುವ ಹೊಣೆಯೂ ನಮ್ಮ ಮೇಲಿದೆ ಎಂದರು. ಧ್ವಜಾರೋಹಣ ಮಾಡಿ ಮಾತನಾಡಿದ ಭೋಜರಾಜ್ ತಲ್ಲೂರು ಅವರು ನಮ್ಮ ಹಿರಿಯರು ಸ್ವಾತಂತ್ರ್ಯ ಹೋರಾಟ ಗಾರರು ತಮ್ಮ ಪ್ರಾಣ ತೆತ್ತು ಸಾಕಷ್ಟು ಕಷ್ಟ ಅನುಭವಿಸಿ ನಮಗೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಅದನ್ನು ಅದನ್ನು ನಾವು ಎಂದಿಗೂ ಮರೆಯಬಾರದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಬೇಡ್ಕರ್ ಯುವಕ ಮಂಡಳದ ಕಾರ್ಯದರ್ಶಿ ಅನಿಲ ಬಿರ್ತಿ, ಆದಿಧ್ರಾವಿಡ ಸಹಕಾರಿ ಸಂಘದ

ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಬಿರ್ತಿ, ದ.ಸಂ.ಸ. ತಾಲೂಕು ಸಂಚಾಲಕರಾದ ಹರೀಶ್ಚಂದ್ರ ಬಿರ್ತಿ, ವರ್ಣ ವಿಶ್ವನಾಥ, ಬಿರ್ತಿ ಸುರೇಶ, ಶಿವಾನಂದ ಬಿರ್ತಿ, ಕಿಶನ್ ಕುಮಾರ್, ಸಂತೋಷ ಬಿರ್ತಿ, ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...