ಇಂಡಿ | ಕಾರ್ಖಾನೆಗೆ ಆರ್ಥಿಕ ಸಹಾಯ ನೀಡುವಂತೆ ಸರ್ಕಾರಕ್ಕೆ ಮನವಿ: ಶಾಸಕ ಯಶವಂತರಾಯಗೌಡ ಪಾಟೀಲ

Date:

ಕಾರ್ಖಾನೆಗೆ ಆರ್ಥಿಕ ಸಹಾಯ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ. ಆರ್ಥಿಕ ಸಹಾಯ ನೀಡಿದರೆ ಸಹಕಾರಿ ಸಂಘದಲ್ಲಿಯೇ ಮುಂದುವರೆಸೋಣ, ಇಲ್ಲದಿದ್ದರೆ ಮತ್ತೊಮ್ಮೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳೋಣ ಎಂದು ಕಾರ್ಖಾನೆಯ ಅಧ್ಯಕ್ಷ ಹಾಗೂ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾರ್ಖಾನೆಯ ಆವರಣದಲ್ಲಿ 2024-25ನೇ ಸಾಲಿನ 7ನೇ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು, “ಇದೇ ರೀತಿ ಮುಂದುವರೆದರೆ ಕಾರ್ಖಾನೆಗೆ ಹೆಚ್ಚಿನ ಆರ್ಥಿಕ ಸಂಕಷ್ಟ ಬರುವುದು ನಿಶ್ಚಿತ. ಆದಕಾರಣ ಇದನ್ನು ಯಾರಿಗಾದರೂ ಲೀಸ್ ಮೂಲಕ ನಡೆಸಲು ಕೊಡುವುದು ಸೂಕ್ತ” ಎಂದು ಹೇಳಿದರು.

ಸಭೆಗೆ ಹಾಜರಾಗಿದ್ದ ಷೇರುದಾರ ರೈತ ಶ್ರೀಮಂತ ಇಂಡಿ ಮಾತನಾಡಿ, “ಕಾರ್ಖಾನೆಯನ್ನು ಲೀಸ್‌ಗೆ ಕೊಡುವ ವಿಚಾರಕ್ಕೆ ನಮ್ಮ ಸಹಮತವಿಲ್ಲ. ಇದನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ” ಎಂದಾಗ, ಅದಕ್ಕೆ ಷೇರುದಾರ ರೈತ ಗುರುನಾಥ ಬಗಲಿ ಅನುಮೋದಿಸಿದರು. ಇದಕ್ಕೆ ರೈತರೆಲ್ಲರೂ ಚಪ್ಪಾಳೆ ತಟ್ಟಿ ಅಂಗೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿದ್ದ ಷೇರುದಾರ ರೈತ ಸಂಗಣ್ಣ ಇರಾಬಟ್ಟಿ ಮಾತನಾಡಿ, “ಪ್ರತಿ ಷೇರುದಾರ ರೈತರಿಂದ ಎರಡು ಟನ್ ಕಬ್ಬಿಗೆ ಹಣ ಕೊಡದೆ ಅದನ್ನು ಕಾರ್ಖಾನೆಗೆ ಷೇರು ಎಂದು ತೆಗೆದುಕೊಂಡು ಕಾರ್ಖಾನೆಯನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಿ, ಸಹಕಾರಿ ಸಂಘದಲ್ಲಿಯೇ ನಡೆಸಿ” ಎಂದು ಸಲಹೆ ನೀಡಿದರು.

ರೈತ ಮಹಾದೇವ ಇರ ಕುರುಬರ ಮಾತನಾಡಿ, “ರೈತರಿಂದ ಷೇರು ಹಣ ಸಂಗ್ರಹಿಸಿ, ಇದನ್ನು ಸಹಕಾರಿ ಸಂಘದಲ್ಲಿಯೇ ನೀವೇ ನಡೆಸಬೇಕು” ಎಂದರು.‌

ಈ ಸುದ್ದಿ ಓದಿದ್ದೀರಾ? ರಸ್ತೆ ಬದಿಯಲ್ಲೇ ಆಸ್ಪತ್ರೆ ತ್ಯಾಜ್ಯ ಸುರಿದ ಹಿನ್ನೆಲೆ ಸ್ಥಳೀಯರು ಆಕ್ರೋಶ

ಶ್ರೀಮಂತ ಇಂಡಿ ಮಾತನಾಡಿ, ರೈತರು ಕಾರ್ಖಾನೆಗೆ ಕಳುಹಿಸುವ ಪ್ರತಿ ಟನ್ ಕಬ್ಬಿನಿಂದ ನೂರು ಷೇರು ಪಡೆದುಕೊಳ್ಳಲು ಸಲಹೆ ನೀಡಿದರು.

ಉಪಾಧ್ಯಕ್ಷ ಎಂ ಆರ್ ಪಾಟೀಲ, ನಿರ್ದೇಶಕ ಸಿದ್ದಣ್ಣ ಬಿರಾದಾರ, ಜಟ್ಟಪ್ಪ ರವಳಿ, ಸುರೇಶ ಗೌಡ ಪಾಟೀಲ, ಅಶೋಕ ಗಜಕೋಶ, ರೇವ ಗುಂಡಪ್ಪಗೌಡ ಪಾಟೀಲ, ಬಸವರಾಜ ಧನಶ್ರೀ, ವಿಶ್ವನಾಥ ಬಿರಾದಾರ, ದುಂಡಪ್ಪ ಖೇಡ, ಸಿದ್ದುಗೌಡ ಪಾಟೀಲ ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಎಸ್ ಕೆ ಭಾಗ್ಯಶ್ರೀ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...