ಇಂಡಿ | ನೌಕರರು ಜನರ ವಿಶ್ವಾಸ ಗಳಿಸಿ ಕರ್ತವ್ಯ ನಿರ್ವಹಿಸಬೇಕು: ಶಾಸಕ ಯಶವಂತರಾಯಗೌಡ ಪಾಟೀಲ

Date:

ಸಂವಿಧಾನದ ಮೂಲ ಆಶಯದಂತೆ ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ, ಪತ್ರಿಕಾರಂಗ ತಮ್ಮ ಕಾರ್ಯವನ್ನು ಪ್ರಾಮಾಣಿಕತೆ, ಶ್ರದ್ಧೆಯಿಂದ ನಿರ್ವಹಿಸಿದರೆ ಪ್ರಪಂಚದಲ್ಲಿ ದೇಶ ಉನ್ನತ ಸ್ಥಾನದಲ್ಲಿ ಸಾಗುತ್ತದೆ. ಯಾವುದಾದರೂ ಒಂದು ಅಂಗ ವಿಫಲವಾದರೆ ದೇಶ, ಸಮುದಾಯದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ನೌಕರರು ಜನರ ವಿಶ್ವಾಸವನ್ನು ಗಳಿಸಿ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಗುರುಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ ಹಾಗೂ ಅನುಪಮಾ ಸೇವೆ ಪ್ರಶಸ್ತಿ ಪ್ರಧಾನ ಮತ್ತು ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಉದ್ವಾಟಿಸಿ ಮಾತನಾಡಿದರು.

“ಕರ್ತವ್ಯ ಪ್ರಜ್ಞೆ ಇಟ್ಟುಕೊಂಡು ಮನುಷ್ಯ ಧರ್ಮದಿಂದ ಕೆಲಸ ಮಾಡಬೇಕಾಗಿದೆ. ಯಾರಿಗೂ ಶೋಷಣೆ ಮಾಡದೆ ಪಾರದರ್ಶಕತೆಯಿಂದ ಕೆಲಸ ಮಾಡಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಬೇಕು. ಕಾಂಗ್ರೆಸ್ ಸರ್ಕಾರ ನೀಡಿರುವ ರಾಜ್ಯದ ಜನರಿಗೆ 5 ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ರಾಜ್ಯ ಸರ್ಕಾರಿ ನೌಕರರ ಮೇಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡ್ಯಾಳ ಮಾತನಾಡಿ, “ಸರ್ಕಾರಿ ನೌಕರರಿಗೆ ಓಪಿಎಸ್ ಜಾರಿ ಮಾಡಲು ಸರ್ಕಾರದ ಗಮನ ಸೆಳೆಯಲು ಶಾಸಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಮನವಿ ಮಾಡಿಕೊಂಡರು.

ತಾಲೂಕು ಘಟಕದ ಅಧ್ಯಕ್ಷ ಬಸವರಾಜ ರಾವುರ ಮಾತನಾಡಿ, “ಸರ್ಕಾರಿ ನೌಕರರ ಸಂಘದ ಖಾತೆಯಲ್ಲಿ ಒಟ್ಟು ₹6 ಲಕ್ಷ ನಿವ್ವಳ ಲಾಭವಿದ್ದು, ₹1.66 ಲಕ್ಷ ಬ್ಯಾಂಕಿನಲ್ಲಿ ಉಳಿದಿದೆ. ಅದಲ್ಲದೆ ಸೇವೆ ಮಾಡುವ ಕೈಗಳು ಶ್ರೇಷ್ಠ ಎಂಬ ಭಾವನೆಯಲ್ಲಿ ನೌಕರರು ಕೆಲಸ ಮಾಡುತ್ತಿದ್ದು, ತಾಲೂಕಿನ ಪ್ರಗತಿಗೆ ಪೂರಕ ಕೆಲಸ ಮಾಡುವ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತಾಳಿಕೋಟಿ | ಮಡಿವಾಳಮ್ಮ ನಾಡಗೌಡಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ: ಕಸಾಪದಿಂದ ಸನ್ಮಾನ

ಲಕ್ಷ್ಮಿಕಾಂತ ಮೇತ್ರಿ, ಆರಪಿ ಗಿಣಿ, ಧನರಾಜ ಮೋಜಗೊಂಡ ಮಾತನಾಡಿದರು. ನೌಕರರಾದ ಮಹದೇವಪ್ಪ ಏವೂರ, ಗೀತಾ ಗುಪ್ತರಗಿ ಮಠ, ಉಮೇಶ ಲಮಾಣಿ, ಸಿಪಿ ಚೌಹಾನ, ಎಸ್ ವಿ ರಾಘಣ್ಣನವರ, ಎಸ್ ಆರ್ ನಡಗಡ್ಡಿ, ಎಂಎಂ ಸಂಜೆವಾಡ, ಶೃತಿ ಖೆಡಗಿ, ಎಸ್ ಎಸ್ ಮೋದಿ, ಡ‌ಬ್ಲ್ಯೂಐ ಇಂಡಿಕರ ಮತ್ತಿತರರನ್ನು ಅನುಪಮ ಸೇವೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವೇದಿಕೆಯ ಮೇಲೆ ತಾಪಂ ಇಒ ಬಿ ಎಚ್ ಕನ್ನೂರ, ಶಿವರಾಜ ಬಿರಾದಾರ, ಶಿವಾನಂದ ಮಂಗನವರ, ವಿಜಯಕುಮಾರ ಕ್ಷತ್ರಿ ಮತ್ತಿತರರಿದ್ದರು. ನಂತರ ಸರ್ಕಾರಿ ನೌಕರರಿಗೆ ಸ್ಪಂದನ ಆಸ್ಪತ್ರೆಯ ಸಹಯೋಗದಲ್ಲಿ ಆರೋಗ್ಯ ತಪಾಸಣೆ‌ ನಡೆಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...