ಇಂಡಿ | ಸಹಕಾರ ಸಂಘಗಳ ಏಳಿಗೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ: ವಿಶ್ವನಾಥ ಪೂಜಾರಿ

Date:

ಸಹಕಾರ ಸಂಘಗಳ ಏಳಿಗೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ. ಸಾಲ ತೆಗೆದುಕೊಳ್ಳುವುದು ಅಷ್ಟೇ ಅಲ್ಲ, ಠೇವಣಿ ಇಡುವ ಮೂಲಕ ರೈತರು, ಗ್ರಾಹಕರು ಕಾಲ ಕಾಲಕ್ಕೆ ಸಂಘದ ಸಿಬ್ಬಂದಿ ಜೊತೆಗೆ ಉತ್ತಮ ಬಾಂಧವ್ಯದಿಂದ ವ್ಯವಹಾರ ಮಾಡಿದಾಗ ಮಾತ್ರ ಆರ್ಥಿಕವಾಗಿ ಬ್ಯಾಂಕಿಗೆ ಜೀವ ಬರುತ್ತದೆ ಎಂದು ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ ಗ್ರಾಮದ ಹಲಸಂಗಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಾಕಾರಿ ಸಂಘದ ಆವರಣದಲ್ಲಿ ನಡೆದ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ ಪ್ಯಾಟಿ ಮಾತನಾಡಿ, “ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಾಕಾರಿ ಸಂಘವು 2271 ಸದಸ್ಯತ್ವದ ಸುಮಾರು ರೂ. 84,92,030 ಶೇರು ಬಂಡವಾಳ ಹೊಂದಿದೆ. ನಿಧಿಗಳಿಂದ ರೂ. 6704800, ದುಡಿಯುವ ಬಂಡವಾಳ ರೂ.85998930, ಠೇವಣಿ ರೂ. 102935542, ಸದಸ್ಯರ ಒಟ್ಟು ಸಾಲ ರೂ. 66640792 ಮತ್ತು ವಾರ್ಷಿಕ ನಿವ್ವಳ ಲಾಭ ರೂ. 671737 ಗಳಿವೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಇಂಡಿ | ಮುಂದುವರೆದ ಮಹಾಮಳೆ; ನದಿಪಾತ್ರದ ಜನರಲ್ಲಿ ಪ್ರವಾಹದ ಆತಂಕ

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಪ್ಪಾಶ್ಯಾ ಜಕ್ಕೋಂಡಿ, ಶ್ರೀಕಾಂತ ಗುಬ್ಯಾಡ, ಸಂತೋಷ ವಾಲಿಕಾರ, ಚಂದ್ರಕಾಂತ ಕುಂಬಾರ, ಬಸವರಾಜ ಬಂದಾಳೆ, ಭೀಮಾಶಂಕರ ಹೂಗಾರ, ಪುಷ್ಪಾ ಗಲಗಲಿ, ಶ್ರೀಮತಿ ಸುರೇಖಾ ಕಲಬುರ್ಗಿ, ಕಾಶಿನಾಥ ಕಟ್ಟಿಮನಿ, ಚನ್ನಬಸಯ್ಯ ಹೀರೆಮಠ, ದೇವಣ್ಣ ಗಿಡದಮನಿ, ಕ್ಷೇತ್ರ ಸಿಬ್ಬಂದಿ ಸಾಯಬಣ್ಣ ರೊಟ್ಟಿ, ಚಿಕ್ಕಪ್ಪ ಕಂಬಾರ, ರವೀಂದ್ರ ಕಂಬಾರ, ಬಂಕಟಸಿಂಗ್ ರಜಪೂತ, ಮಂಜುನಾಥ ಶಿರಹಟ್ಟಿ ,ಸೇರಿದಂತೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಾಕಾರಿ ಸಂಘದ ಶೇರುದಾರರು, ಗ್ರಾಹಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...