ಇಂಡಿ | ಅರ್ಜುಣಗಿ ಕೆಡಿ ಶಾಲೆಯಲ್ಲಿ ಎಫ್‌ಎಲ್‌ಎನ್ ಕಲಿಕಾ ಹಬ್ಬ; ಮಕ್ಕಳ ಸಂಭ್ರಮ, ಶಿಕ್ಷಕರಿಗೆ ಸನ್ಮಾನ

Date:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಮೀಪದ ಅರ್ಜುಣಗಿ ಕೆಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಫ್‌ಎಲ್‌ಎನ್ (Foundational Literacy and Numeracy) ಕಲಿಕಾ ಹಬ್ಬ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮವನ್ನು ಪಾವನ ಸಾನಿಧ್ಯ ಗೋಳಸಾರದ ಪೂಜ್ಯ ಅಭಿನವ ಪುಂಡಲಿಂಗ ಶಿವಯೋಗಿಗಳು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಆಲಮೇಲದ ಆರೂಢ ಮಠದ ಪೂಜ್ಯ ಬಸವಲಿಂಗ ಶರಣರು ಮಾತನಾಡಿ, “ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠ ವೃತ್ತಿಯಾಗಿದೆ. ಅನ್ಯ ಕ್ಷೇತ್ರೆ ಕೃತಂ ಪಾಪಂ ಪುಣ್ಯ ಕ್ಷೇತ್ರ ವಿನಶ್ಯತಿ, ಪುಣ್ಯ ಕ್ಷೇತ್ರ ಕೃತಂ ಪಾಪ ವಜ್ರಲೇಪಿ ಭವಿಷ್ಯತಿ ಎಂಬ ವಾಕ್ಯ ಶಿಕ್ಷಕರ ಜವಾಬ್ದಾರಿಯನ್ನು ಸೂಚಿಸುತ್ತದೆ. ಶಿಕ್ಷಕರು–ಪಾಲಕರು–ಮಕ್ಕಳು ಎಂಬ ತ್ರಿವೇಣಿ ಸಂಗಮ ಸದೃಢವಾಗಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಸುರೇಶ್ ಪ್ಯಾಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಿ ಆರ್ ಪಿ ಫರ್ವೇಜ್ ಪಟೇಲ್, ಬಿಆರ್‌ಪಿ ಕುಲಕರ್ಣಿ ಸರ್, ಪ್ರೌಢಶಾಲೆಯ ಮುಖ್ಯಗುರು ವಿನೋದ ದೊಡ್ಡಗಾಣಿಗೇರೆ, ಡಿ ಬಿ ಕುಂಬಾರ ಹಾಗೂ ಯುವ ನಾಯಕ ಮಂಜುನಾಥ ಕಾಮಗೊಂಡ ಉಪಸ್ಥಿತರಿದ್ದರು. ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೂ ಬ್ಯಾಗುಗಳನ್ನು ವಿತರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 14 ಶಾಲೆಗಳ ಮಕ್ಕಳು ಈ ಕಲಿಕಾ ಹಬ್ಬದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಸಮಾರೋಪ ಸಮಾರಂಭದಲ್ಲಿ ಮಕ್ಕಳಿಗೆ ಕಂಪಾಸ್, ಪೆನ್ನು, ನೋಟ್‌ಬುಕ್ ಹಾಗೂ ಪ್ಯಾಡ್‌ಗಳನ್ನು ವಿತರಿಸಲಾಯಿತು.

ಇದನ್ನೂ ಓದಿ: ವಿಜಯಪುರ | ವೃತ್ತಿಪರ ಬದುಕಿನಲ್ಲಿ ಕೌಶಲ್ಯಗಳ ಪಾತ್ರ ಮಹತ್ವದ್ದು: ಡಾ. ಹಾಜರಾ ಪರ್ವೀನ್

ಇದೇ ಸಂದರ್ಭದಲ್ಲಿ ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕ ಸಿ ಎನ್ ಮಿಂಚನಾಳ ಅವರಿಗೆ 5 ಗ್ರಾಂ ಬೆಳ್ಳಿ ಪದಕ ನೀಡಿ ಗೌರವಿಸಲಾಯಿತು. ಕ್ಲಸ್ಟರ್ ಮಟ್ಟದಲ್ಲಿ ಆಯ್ಕೆಯಾದ 5 ಶಿಕ್ಷಕರಿಗೆ ಬಿಳ್ಕೋಡಲಾಗಿದ್ದು, ಶಿಕ್ಷಕರತ್ನ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಈರಣ್ಣ ತಳವಾರ, ರೇಷ್ಮಾ ಪವಾರ ಸೇರಿದಂತೆ 70ಕ್ಕೂ ಹೆಚ್ಚು ಶಿಕ್ಷಕರು ಹಾಗೂ 400ಕ್ಕೂ ಹೆಚ್ಚು ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಯುಬಿಎಸ್ ಶಾಲೆಯಿಂದ ಕನ್ನಡ ಗಂಡು ಮಕ್ಕಳ ಶಾಲೆ ಮೂಲಕ ಅರ್ಜುಣಗಿ ಕೆಡಿ ಶಾಲೆಯವರೆಗೆ ಮೆರವಣಿಗೆ ನಡೆಯಿತು. ರಾಣಿ ಚನ್ನಮ್ಮ, ಒನಕೆ ಓಬವ್ವ, ಸಂಗೊಳ್ಳಿ ರಾಯಣ್ಣ ಸೇರಿದಂತೆ ವಿವಿಧ ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಣೆ ಮಾಡಿದ ಮಕ್ಕಳು ಮೆರವಣಿಗೆಯಲ್ಲಿ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಪಂಡಿತ ಅವಜಿ ಮುಗು ಸ್ವಾಗತಿಸಿ, ನಿರೂಪಣೆ ನಡೆಸಿದರು. ರೇಷ್ಮಾ ಪವಾರ ಗುರುಮಾತೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...