ಇಂಡಿ | ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ವಿರೋಧ; ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

Date:

ವಿಜಯಪುರ ಪಟ್ಟಣದಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲು ಮುಂದಾಗಿರುವ ಸರ್ಕಾರದ ನಡೆಗೆ ಹಲವು ಪ್ರಗತಿಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಪಟ್ಟಣದಲ್ಲಿ ಪ್ರತಿಭಟನೆ ನಡೆಸಿವೆ.

ಇಂಡಿ ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಾರಂಭವಾದ ಪ್ರತಿಭಟನಾ ರ‍್ಯಾಲಿಯು ಡಾ. ಬಾಬು ಜಗಜೀವನ್ ರಾವ್ ವೃತ್ತ, ಟಿಪ್ಪು ಸುಲ್ತಾನ್ ರತ್ತ, ಬಸವೇಶ್ವರ ಸರ್ಕಲ್, ಬಸ್ ನಿಲ್ದಾಣ ರಸ್ತೆ ಮೂಲಕ ಮಿನಿ ವಿಧಾನಸೌಧ ತಲುಪಿತು.

WhatsApp Image 2025 10 10 at 10.35.58 AM

ಸರ್ಕಾರದ ಮಟ್ಟದಲ್ಲಿ ಪಿಪಿಪಿ ಮಾದರಿಯಲ್ಲಿ ವೈದಿಕೀಯ ಕಾಲೇಜು ಸ್ಥಾಪನೆ ಮಾಡಬೇಕೆಂದು ಹುನ್ನಾರ ನಡೆದಿದೆ. ಜಿಲ್ಲೆಯಲ್ಲಿ ಶಾಸಕರು ಒಬ್ಬರು ಬಂಡವಾಳ ಹೂಡುವದಾಗಿ ಬರವಸೆ ನೀಡಿದ್ದಾರೆ ಇದು ಸಲ್ಲದು. ಅವರಿಗೆ ಬೇಕಾದರೆ ಮತ್ತೊಂದು ಖಾಸಗಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಿಕೊಳ್ಳಲಿ ಎಂದು ಪ್ರತಿಭಟನಾಕಾರರು ಪಿ ಪಿ ಪಿ ಮಾದರಿಯ ವೈದಿಕೀಯ ಕಾಲೇಜು ಸ್ಥಾಪನೆ ಮಾತ್ರ ಬೇಡ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆ ಸರಿಯಾಗಿ ನಡೆದಿದೆ. ಅಲ್ಲಿ ಸಾಕಷ್ಟು ಸ್ಥಳವಿದೆ. ಅಲ್ಲಿಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು. ಬಡವರ ಪಾಲಿಗೆ ಆಶಾಕಿರಣವಾಗಲಿದೆ ಎಂದು ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ ಸದಸ್ಯ ಅರವಿಂದ ಕುಲಕರಣಿ ಆಗ್ರಹಿಸಿದರು.

ಇದನ್ನೂ ಓದಿ: ಇಂಡಿ | ಬರದ ನಾಡಿನಲ್ಲೂ ಹಸಿರು ಚಿಗುರಿಸಿದ ಸರ್ಕಾರಿ ಶಾಲೆ

ಪ್ರತಿಭಟನೆಯ ನೇತೃತ್ವವನ್ನು ಒಡಲದನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಭುವನೇಶ್ವರಿ ಕಾಂಬಳೆ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಅಣ್ಣಾರಾಯ ಈಳಗೇರಾ, ಶಾಂತಿ ಮಹಿಳಾ ಸಂಘದ ಅಧ್ಯಕ್ಷ ಸರೋಭಾವಿ ದಶವಂತ, ಮನೆರಾಗ ಅನುಷ್ಠಾನ ಅಭಿಯಾನದ ರೇಣುಕ ನಾಟಿಕಾರ, ಕರ್ನಾಟಕ ಜನರ ಆರೋಗ್ಯ ಚಳುವಳಿಯ ಟೀನಾ ಕ್ಲೇವಿಯರ್, ಅಮ್ಮ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಭೋಗೇಶ ಸೊಲ್ಲಾಪುರ, ಸಿದ್ದರಾಮ ಹಳ್ಳೂರ, ರವಿಚಂದ್ರ ಪಾದಗಟ್ಟಿ, ಜನ ವೇದಿಕೆ ಒಕ್ಕೂಟದ ಸದಸ್ಯರು, ಶಕ್ತಿ ಮಹಿಳಾ ಒಕ್ಕೂಟದ ಅಂಬಿಕ ಶಿರಕನಹಳ್ಳಿ, ಅಕ್ರಮ ಮಾಶಾಳಕರ, ಸಿದ್ದಮ್ಮ ಗುಣಕಿ, ಯಲ್ಲವ್ವ ಮಾದರ, ನೀಲಾಂಬಿಕೆ ಬಿರಾದಾರ, ಇಸ್ಮಾಯಿಲ್ ಕುಣಬಿ, ಮುದ್ದು ಗೌಡ ಪಾಟೀಲ ವಹಿಸಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...