ಇಂಡಿ | ಮುನ್ನೆಚ್ಚರಿಕೆ ಕ್ರಮ ಯಶಸ್ವಿ, ಕೆರೆಗಳ ನೀರಿನ ಮಟ್ಟ ಇಳಿಕೆ: ಡಿಸಿ ಡಾ. ಆನಂದ

Date:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೆರೆಯ ಮುಂದಿರುವ ಕೃಷಿ ಜಮೀನುಗಳಿಗೆ ಮತ್ತು ಕೆರೆಯ ಏರಿಯಾ ಹಾನಿಯನ್ನು ತಡೆಯಲು ಮುನ್ನೆಚ್ಚೆರಿಕೆ ಕ್ರಮವಾಗಿ ಚಾನೆಲ್ ನಿರ್ಮಾಣ ಮಾಡಿ ನೀರು ಹೊರಹಾಕಿರುವುದರಿಂದ ನೀರಿನ ಮಟ್ಟವು 10ಅಡಿಗಳಷ್ಟು ಕಡಿಮೆಯಾಗಿದೆ. ಇನ್ನು ಮುಂದೆ ಯಾವುದೇ ಅಪಾಯ ಕಂಡುಬರುವುದಿಲ್ಲವೆಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ತಿಳಿಸಿದ್ದಾರೆ.

“ಹೋರ್ತಿ ಕೆರೆಯನ್ನು 1972ರಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಕೆರೆಯ ಸಾಮರ್ಥ್ಯವು 19.50 ಎಂ.ಸಿ.ಎಫ್.ಟಿ ಇದ್ದು, ಕೆರೆಯ ವಿಸ್ತೀರ್ಣ18 ಹೆಕ್ಟರ್ ಇದೆ. ಏರಿಯಾ ಎತ್ತರ 11ಮೀ ಹಾಗೂ ಉದ್ದ 400ಮೀ ಇದ್ದು, ಪ್ರಸ್ತುತ ಕೆರೆಯನ್ನು ಕೃಷ್ಣಭಾಗ್ಯ ಜಲ ನಿಗಮದ ವತಿಯಿಂದ ಕೆರೆತುಂಬವಾ ಯೋಜನೆಯಡಿ ಕೆರೆ ತುಂಬಿಸಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಿರುವುದರಿಂದ ಈ ಕೆರಿಗೆ ಕೋಡಿ ಇಂದ ಸುಮಾರು ಒಂದು ತಿಂಗಳಿಂದ ನೀರು ಹರಿದು ಹೋಗಿರುತ್ತದೆ. ಸೆ.28 ಸಂಜೆ 7 ಗಂಟೆಗೆ ಕೆರೆಯ ಏರಿಯ 30 ಮೀಟರ್ ಉದ್ದದಷ್ಟು ಹಾಗೂ 0.30 ಮೀಟರ್‌ನಷ್ಟು ಕುಸಿದಿರುವುದು ಕಂಡುಬಂದಿದೆ. ತದನಂತರ ಕೋಡಿಯನ್ನು ಇಳಿಸಲು ಸೆ. 29 ರಂದು ಜೆಸಿಬಿ ಮತ್ತು ಹಿಟಾಚಿ ಬ್ರೇಕರ್ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಹಾಕಲು ಸತತ ಮೂರು ದಿನಗಳ ಕಾಲ ಕೆರೆಯಲ್ಲಿ ಎರಡು ಅಡಿಯಷ್ಟು ನೀರನ್ನು ಇಳಿಸಲಾಯಿತು. ಅದಾಗ್ಯ ಕೂಡಾ ಪ್ರತಿದಿನ ನೀರಿನ ಒತ್ತಡದಿಂದಾಗಿ ಕ್ರಮೇಣವಾಗಿ ಏರಿಯ ಕುಸಿಯುವುದು ಕಂಡುಬಂದಿದೆ”

ಇದನ್ನೂ ಓದಿ: ವಿಜಯಪುರ | ಪ್ರವಾಹದಲ್ಲಿ ಕೊಚ್ಚಿಹೋದ ಬದುಕು, ಕಣ್ಣೀರೊರೆಸುವುದೇ ಸರ್ಕಾರ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದರಿಂದಾಗಿ ಅ.2ರಂದು ಹೆಚ್ಚಿನ ಪ್ರಮಾಣದ ಏರಿಯಾ ಕುಸಿತ ಕಂಡ ಕಾರಣ ಹೋರ್ತಿ ಕೆರೆಯ ಕೆಳ ಭಾಗದಲ್ಲಿ ಒಟ್ಟು ಮೂರು ಕೆರೆಗಳಿದ್ದು, ಅವುಗಳು ಕೂಡಾ ಈಗಾಗಲೇ ಕೃಷ್ಣಾ ಭಾಗ್ಯ ಜಲ ನಿಗಮ ವತಿಯಿಂದ ಭರ್ತಿ ಮಾಡಲಾಗಿದೆ. ಈ ಕೆರೆಗಳಿಗೆ ಹಾನಿಯಾಗದಂತೆ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ ಹಾನಿ ತಡೆಗಟ್ಟಲು ಮುನ್ನೆಚ್ಚೆರಿಕೆ ಕ್ರಮವಾಗಿ ಕೆರೆಯ ಕೊಡಿಯಿಂದ ಸುಮಾರು 30 ಮೀಟರ್ ದೊರದಲ್ಲಿ ಹಾಗೂ ಕುಸಿತ ಕಂಡುಬಂದ ಸ್ಥಳದಿಂದ 50ಮೀಟರ್ ಅಂತರದಲ್ಲಿ ಕ್ರಮೇಣ ನೀರನ್ನು ಹೊರೆಗೆ ಹಾಕಲು ಕೃತಕವಾಗಿ ಕೆರೆಯ ಏರಿಯಾದಲ್ಲಿ ಚಾನಲ್ ನಿರ್ಮಾಣ ಮಾಡಿ ಹಂತ ಹಂತವಾಗಿ ನೀರನ್ನು ಹೊರಹಕಲಾಗುತ್ತಿದೆ” ಎಂದು ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...